ಚಾ.ನಗರದಲ್ಲಿ ದ.ಭಾರತದ ಮೊದಲ ಅರಿಶಿನ ಸಂಸ್ಕರಣ ಘಟಕ


Team Udayavani, Sep 9, 2018, 6:00 AM IST

chamarajanagar.jpg

ಚಾಮರಾಜನಗರ: ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿ ಸರ್ಕಾರಿ ಸ್ವಾಮ್ಯದ ಅರಿಶಿನ ಸಂಸ್ಕರಣ ಘಟಕ ನಗರದ ಎಪಿಎಂಸಿಯಲ್ಲಿ ಕಾರ್ಯಾರಂಭ ಮಾಡಲಿದ್ದು, ಯಂತ್ರೋ ಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಎಪಿಎಂಸಿ ಪ್ರಾಂಗಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅರಿಶಿನ ಸಂಸ್ಕರಣ ಘಟಕದ ಅಂತಿಮ ಸಿದಟಛಿತೆ ಹಾಗೂ ಹೈಟೆಕ್‌ ಯಂತ್ರೋಪಕರಣಗಳ ಜೋಡಣೆ ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೋಟಿ ರೂ. ವೆಚ್ಚದಲ್ಲಿ ಅರಿಶಿನ ಸಂಸ್ಕರಣ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು.

ಈ ಪೈಕಿ 50ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, 50 ಲಕ್ಷ ರೂ. ವೆಚ್ಚದಲ್ಲಿ ಯಂತ್ರೋಪಕರಣಗಳ ಜೋಡಣೆ ಹಾಗೂ ವಿದ್ಯುದೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ಉದ್ಘಾಟನೆಗೊಂಡು, ರೈತರ ಸೇವೆಗೆ ಸಮರ್ಪಿಸಲಾಗುತ್ತದೆ.

ತಮಿಳುನಾಡಿಗೇ ಹೋಗಬೇಕಿತ್ತು: ದಕ್ಷಿಣ ಕರ್ನಾಟಕದ ಚಾ.ನಗರ, ಮೈಸೂರು ಭಾಗದಲ್ಲಿ ಹೆಚ್ಚಾಗಿ ರೈತರು ಅರಿಶಿನ ಬೆಳೆಯುತ್ತಿದ್ದಾರೆ. ಇದನ್ನು ಮಾರಾಟ ಹಾಗೂ ಸಂಸ್ಕರಿಸಲು ತಮಿಳುನಾಡಿಗೆ ರೈತರು ಕೊಂಡೊಯ್ಯ ಬೇಕಾಗಿತ್ತು. ಚಾಮರಾಜನಗರ ಜಿಲ್ಲೆಯಲ್ಲೂ ಹೆಚ್ಚಿನ ರೈತರು ಅರಿಶಿನ ಬೆಳೆಯುತ್ತಿದ್ದಾರೆ.

ಅಲ್ಲದೇ, ಮೈಸೂರು, ಧಾರವಾಡ, ದಾವಣಗೆರೆ ಜಿಲ್ಲೆಯಿಂದಲೂ ರೈತರು ಹಾಗೂ ವರ್ತಕರು ಅರಿಶಿನ ಖರೀದಿಗೆ, ಮಾರಾಟಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜ ನಗರ ಎಪಿಎಂಸಿ ಅವರಣದಲ್ಲಿ ನಿರ್ಮಾಣವಾಗುತ್ತಿರುವ ಸಂಸ್ಕರಣ ಘಟಕ ಈ ಭಾಗದ ಬೆಳೆಗಾರರಿಗೆ ಹಾಗೂ ವರ್ತಕರಿಗೆ ಹೆಚ್ಚಿನ ಅನುಕೂಲವಾಗಿದೆ.

ರೈತರಿಗೆ ಅನುಕೂಲ: ಕಳೆದ ಸಾಲಿನಲ್ಲಿ ಎಪಿಎಂಸಿ ಯಲ್ಲಿ 72 ಸಾವಿರ ಕ್ವಿಂಟಾಲ್‌ಅರಿಶಿನ ವಹಿವಾಟು ಆಗಿತ್ತು. ಇತ್ತೀಚಿನ ದಿನಗಳಲ್ಲಿ ಶುದ್ಧಿ ಛೀಕರಿಸಿದ ಅರಿಶಿನ ದೊರೆಯದ ಕಾರಣ ವರ್ತಕರು ಖರೀದಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರಲಿಲ್ಲ. ಅಲ್ಲದೇ ರೈತರಿಗೂ ಸ್ಪರ್ಧಾತ್ಮಕ ಬೆಲೆ ದೊರೆಯದೇ ಸಂಕಷ್ಟದಲ್ಲಿದ್ದರು. ಈ ಸಂಸ್ಕರಣ ಘಟಕ ಸ್ಥಾಪನೆಯಿಂದ ರೈತರು ಹಾಗೂ ವರ್ತಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇದೊಂದು ಹೈಟೆಕ್‌ ಅರಿಶಿನ ಸಂಸ್ಕರಣಘಟಕವಾಗಿದ್ದು, ಒಂದೇ ಹಂತದಲ್ಲಿ ಅರಿಶಿನವನ್ನು ಕ್ಲೀನಿಂಗ್‌ ಹಾಗೂ ಗೆùಂಡಿಂಗ್‌ಮಾಡಿ ಪ್ಯಾಕಿಂಗ್‌ ಮಾಡಲಾಗುತ್ತದೆ.ಇದರಿಂದ ಅರಿಶಿನ ಹೆಚ್ಚು ಬೆಲೆಗೆ ಮಾರಾಟವಾಗಲಿದೆ. ಜತೆಗೆ ವರ್ತಕರು ಹಾಗೂ ಕಂಪನಿಗಳಿಗೂ ಗುಣಮಟ್ಟದ ಉತ್ಕೃಷ್ಟವಾದ ಅರಿಶಿನ ದೊರೆಯಲಿದೆ.

ಸಾಂಗ್ಲಿ, ಈರೋಡ್‌ನ‌ಲ್ಲಿ ಖಾಸಗಿ ಘಟಕ:ಈಗಾಗಲೇ ಇಂಥ ಘಟಕ ಮಹಾರಾಷ್ಟ್ರದ ಸಾಂಗ್ಲಿ, ತಮಿಳುನಾಡಿನ ಈರೋಡ್‌ನ‌ಲ್ಲಿ ಖಾಸಗಿ ಒಡೆತನದಲ್ಲಿ ನಡೆಯುತ್ತಿದೆ. ಈಗ ಚಾ.ನಗರ ಎಪಿಎಂಸಿಯಲ್ಲಿ ಸರ್ಕಾರದ ಒಡೆತನದಲ್ಲಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರೈತರಿಗೆ ಅತಿ ಕಡಿಮೆ ದರದಲ್ಲಿ ಅರಿಶಿನ ಸಂಸ್ಕರಣೆ ಮಾಡಿಕೊಡಲಾಗುತ್ತದೆ.

21ಕ್ಕೆ ಘಟಕದ ಬಗ್ಗೆ ರೈತರಿಗೆ ಕಾರ್ಯಾಗಾರ: ಎಪಿಎಂಸಿ ಮತ್ತು ಚಾ.ನಗರ ತಾಲೂಕುಸೌಹಾರ್ದ ಅರಿಶಿನ ಬೆಳೆಗಾರರ ರೈತ ಉತ್ಪಾದಕರ ಸಂಘದ ಸಹಯೋಗದಲ್ಲಿ ಸೆ.21ರಂದು ಅರಿಶಿನ ಬೆಳೆಗಾರರ ಕಾರ್ಯಾಗಾರ ಆಯೋಜಿಸಲಾಗಿದ್ದು, ರೈತರಿಗೆ ಬೆಳೆ ವಿಧಾನ, ಮಾರುಕಟ್ಟೆ ವ್ಯವಸ್ಥೆ, ಸಂಸ್ಕರಣ ಘಟಕದ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಅರಿಶಿನ ಸಂಸ್ಕರಣ ಘಟಕ ನಿರ್ಮಾಣ ನನ್ನ ಬಹುದಿನಗಳ ಕನಸಾಗಿತ್ತು. ಸರ್ಕಾರಿ ಒಡೆತನದ ಸಂಸ್ಕರಣ ಘಟಕ ದಕ್ಷಿಣ ಭಾರತದಲ್ಲೇ ಇರಲಿಲ್ಲ. ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಘಟಕ ಸ್ಥಾಪಿಸಲು ಶ್ರಮಿಸಿದ್ದೇನೆ. ಸಂಸದ ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಇದಕ್ಕೆ ಸಹಕಾರ ನೀಡಿದ್ದಾರೆ.
– ಬಿ.ಕೆ.ರವಿಕುಮಾರ್‌,
ಎಪಿಎಂಸಿ ಅಧ್ಯಕ್ಷ

– ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.