ಚಾ.ನಗರದಲ್ಲಿ ದ.ಭಾರತದ ಮೊದಲ ಅರಿಶಿನ ಸಂಸ್ಕರಣ ಘಟಕ


Team Udayavani, Sep 9, 2018, 6:00 AM IST

chamarajanagar.jpg

ಚಾಮರಾಜನಗರ: ದಕ್ಷಿಣ ಭಾರತದಲ್ಲಿಯೇ ಪ್ರಥಮವಾಗಿ ಸರ್ಕಾರಿ ಸ್ವಾಮ್ಯದ ಅರಿಶಿನ ಸಂಸ್ಕರಣ ಘಟಕ ನಗರದ ಎಪಿಎಂಸಿಯಲ್ಲಿ ಕಾರ್ಯಾರಂಭ ಮಾಡಲಿದ್ದು, ಯಂತ್ರೋ ಪಕರಣಗಳ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಎಪಿಎಂಸಿ ಪ್ರಾಂಗಣದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅರಿಶಿನ ಸಂಸ್ಕರಣ ಘಟಕದ ಅಂತಿಮ ಸಿದಟಛಿತೆ ಹಾಗೂ ಹೈಟೆಕ್‌ ಯಂತ್ರೋಪಕರಣಗಳ ಜೋಡಣೆ ಕಾರ್ಯ ನಡೆಯುತ್ತಿದೆ.

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೋಟಿ ರೂ. ವೆಚ್ಚದಲ್ಲಿ ಅರಿಶಿನ ಸಂಸ್ಕರಣ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು.

ಈ ಪೈಕಿ 50ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದ್ದು, 50 ಲಕ್ಷ ರೂ. ವೆಚ್ಚದಲ್ಲಿ ಯಂತ್ರೋಪಕರಣಗಳ ಜೋಡಣೆ ಹಾಗೂ ವಿದ್ಯುದೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಕೆಲವೇ ದಿನಗಳಲ್ಲಿ ಉದ್ಘಾಟನೆಗೊಂಡು, ರೈತರ ಸೇವೆಗೆ ಸಮರ್ಪಿಸಲಾಗುತ್ತದೆ.

ತಮಿಳುನಾಡಿಗೇ ಹೋಗಬೇಕಿತ್ತು: ದಕ್ಷಿಣ ಕರ್ನಾಟಕದ ಚಾ.ನಗರ, ಮೈಸೂರು ಭಾಗದಲ್ಲಿ ಹೆಚ್ಚಾಗಿ ರೈತರು ಅರಿಶಿನ ಬೆಳೆಯುತ್ತಿದ್ದಾರೆ. ಇದನ್ನು ಮಾರಾಟ ಹಾಗೂ ಸಂಸ್ಕರಿಸಲು ತಮಿಳುನಾಡಿಗೆ ರೈತರು ಕೊಂಡೊಯ್ಯ ಬೇಕಾಗಿತ್ತು. ಚಾಮರಾಜನಗರ ಜಿಲ್ಲೆಯಲ್ಲೂ ಹೆಚ್ಚಿನ ರೈತರು ಅರಿಶಿನ ಬೆಳೆಯುತ್ತಿದ್ದಾರೆ.

ಅಲ್ಲದೇ, ಮೈಸೂರು, ಧಾರವಾಡ, ದಾವಣಗೆರೆ ಜಿಲ್ಲೆಯಿಂದಲೂ ರೈತರು ಹಾಗೂ ವರ್ತಕರು ಅರಿಶಿನ ಖರೀದಿಗೆ, ಮಾರಾಟಕ್ಕೆ ಜಿಲ್ಲೆಗೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜ ನಗರ ಎಪಿಎಂಸಿ ಅವರಣದಲ್ಲಿ ನಿರ್ಮಾಣವಾಗುತ್ತಿರುವ ಸಂಸ್ಕರಣ ಘಟಕ ಈ ಭಾಗದ ಬೆಳೆಗಾರರಿಗೆ ಹಾಗೂ ವರ್ತಕರಿಗೆ ಹೆಚ್ಚಿನ ಅನುಕೂಲವಾಗಿದೆ.

ರೈತರಿಗೆ ಅನುಕೂಲ: ಕಳೆದ ಸಾಲಿನಲ್ಲಿ ಎಪಿಎಂಸಿ ಯಲ್ಲಿ 72 ಸಾವಿರ ಕ್ವಿಂಟಾಲ್‌ಅರಿಶಿನ ವಹಿವಾಟು ಆಗಿತ್ತು. ಇತ್ತೀಚಿನ ದಿನಗಳಲ್ಲಿ ಶುದ್ಧಿ ಛೀಕರಿಸಿದ ಅರಿಶಿನ ದೊರೆಯದ ಕಾರಣ ವರ್ತಕರು ಖರೀದಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರಲಿಲ್ಲ. ಅಲ್ಲದೇ ರೈತರಿಗೂ ಸ್ಪರ್ಧಾತ್ಮಕ ಬೆಲೆ ದೊರೆಯದೇ ಸಂಕಷ್ಟದಲ್ಲಿದ್ದರು. ಈ ಸಂಸ್ಕರಣ ಘಟಕ ಸ್ಥಾಪನೆಯಿಂದ ರೈತರು ಹಾಗೂ ವರ್ತಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಇದೊಂದು ಹೈಟೆಕ್‌ ಅರಿಶಿನ ಸಂಸ್ಕರಣಘಟಕವಾಗಿದ್ದು, ಒಂದೇ ಹಂತದಲ್ಲಿ ಅರಿಶಿನವನ್ನು ಕ್ಲೀನಿಂಗ್‌ ಹಾಗೂ ಗೆùಂಡಿಂಗ್‌ಮಾಡಿ ಪ್ಯಾಕಿಂಗ್‌ ಮಾಡಲಾಗುತ್ತದೆ.ಇದರಿಂದ ಅರಿಶಿನ ಹೆಚ್ಚು ಬೆಲೆಗೆ ಮಾರಾಟವಾಗಲಿದೆ. ಜತೆಗೆ ವರ್ತಕರು ಹಾಗೂ ಕಂಪನಿಗಳಿಗೂ ಗುಣಮಟ್ಟದ ಉತ್ಕೃಷ್ಟವಾದ ಅರಿಶಿನ ದೊರೆಯಲಿದೆ.

ಸಾಂಗ್ಲಿ, ಈರೋಡ್‌ನ‌ಲ್ಲಿ ಖಾಸಗಿ ಘಟಕ:ಈಗಾಗಲೇ ಇಂಥ ಘಟಕ ಮಹಾರಾಷ್ಟ್ರದ ಸಾಂಗ್ಲಿ, ತಮಿಳುನಾಡಿನ ಈರೋಡ್‌ನ‌ಲ್ಲಿ ಖಾಸಗಿ ಒಡೆತನದಲ್ಲಿ ನಡೆಯುತ್ತಿದೆ. ಈಗ ಚಾ.ನಗರ ಎಪಿಎಂಸಿಯಲ್ಲಿ ಸರ್ಕಾರದ ಒಡೆತನದಲ್ಲಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರೈತರಿಗೆ ಅತಿ ಕಡಿಮೆ ದರದಲ್ಲಿ ಅರಿಶಿನ ಸಂಸ್ಕರಣೆ ಮಾಡಿಕೊಡಲಾಗುತ್ತದೆ.

21ಕ್ಕೆ ಘಟಕದ ಬಗ್ಗೆ ರೈತರಿಗೆ ಕಾರ್ಯಾಗಾರ: ಎಪಿಎಂಸಿ ಮತ್ತು ಚಾ.ನಗರ ತಾಲೂಕುಸೌಹಾರ್ದ ಅರಿಶಿನ ಬೆಳೆಗಾರರ ರೈತ ಉತ್ಪಾದಕರ ಸಂಘದ ಸಹಯೋಗದಲ್ಲಿ ಸೆ.21ರಂದು ಅರಿಶಿನ ಬೆಳೆಗಾರರ ಕಾರ್ಯಾಗಾರ ಆಯೋಜಿಸಲಾಗಿದ್ದು, ರೈತರಿಗೆ ಬೆಳೆ ವಿಧಾನ, ಮಾರುಕಟ್ಟೆ ವ್ಯವಸ್ಥೆ, ಸಂಸ್ಕರಣ ಘಟಕದ ಅನುಕೂಲಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಅರಿಶಿನ ಸಂಸ್ಕರಣ ಘಟಕ ನಿರ್ಮಾಣ ನನ್ನ ಬಹುದಿನಗಳ ಕನಸಾಗಿತ್ತು. ಸರ್ಕಾರಿ ಒಡೆತನದ ಸಂಸ್ಕರಣ ಘಟಕ ದಕ್ಷಿಣ ಭಾರತದಲ್ಲೇ ಇರಲಿಲ್ಲ. ಸರ್ಕಾರದ ಮಟ್ಟದಲ್ಲಿ ವ್ಯವಹರಿಸಿ ಘಟಕ ಸ್ಥಾಪಿಸಲು ಶ್ರಮಿಸಿದ್ದೇನೆ. ಸಂಸದ ಧ್ರುವನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಇದಕ್ಕೆ ಸಹಕಾರ ನೀಡಿದ್ದಾರೆ.
– ಬಿ.ಕೆ.ರವಿಕುಮಾರ್‌,
ಎಪಿಎಂಸಿ ಅಧ್ಯಕ್ಷ

– ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.