79 ಕೈದಿಗಳ ಬಿಡುಗಡೆ ಇಂದು
Team Udayavani, Sep 9, 2018, 7:00 AM IST
ಬಳ್ಳಾರಿ: ರಾಜ್ಯದ 8 ಕೇಂದ್ರ ಕಾರಾಗೃಹಗಳಲ್ಲಿರುವ 79 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಸೆ.9 ರಂದು
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸನ್ನಡತೆ ಆಧಾರದ ಮೇಲೆ ಪ್ರಸಕ್ತ ವರ್ಷ ಎರಡನೇ ಬಾರಿಗೆ ಕೈದಿಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ. ಕಳೆದ ಮಾರ್ಚ್ನಲ್ಲಿ ಒಮ್ಮೆ ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆಗೊಳಿಸಲಾಗಿತ್ತು.
ಅದೇ ರೀತಿ ಸ್ವಾತಂತ್ರ ದಿನಾಚರಣೆಯಂದು ಕೈದಿಗಳನ್ನು ಬಿಡುಗಡೆ ಮಾಡಬೇಕಾಗಿತ್ತಾದರೂ ಕೆಲ ಕಾರಣಗಳಿಂದ ಬಿಡುಗಡೆ ಮಾಡಿಲ್ಲ. ಇದೀಗಬಳ್ಳಾರಿ, ಮೈಸೂರು, ಬೆಂಗಳೂರು, ವಿಜಯಪುರ, ಬೆಳಗಾವಿ, ಧಾರವಾಡ, ಕಲಬುರಗಿ ಸೇರಿ ರಾಜ್ಯದ ಒಟ್ಟು 8 ಕೇಂದ್ರ ಕಾರಾಗೃಹದ 79 ಕೈದಿಗಳು ಜೈಲುವಾಸದಿಂದ ಮುಕ್ತರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ