ವಯಸ್ಸಿನ ದೃಢೀಕರಣವಿಲ್ಲದೇ ಲಗ್ನಪತ್ರಿಕೆ ಮುದ್ರಿಸಿದರೆ ಶಿಕ್ಷೆ
Team Udayavani, Sep 10, 2018, 6:00 AM IST
ಬಾಗಲಕೋಟೆ: ಬಾಲ್ಯ ವಿವಾಹ ತಡೆಗೆ ಜಿಲ್ಲಾಡಳಿತ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇನ್ನು ಮುಂದೆ ಜಿಲ್ಲೆಯ ಮುದ್ರಣಕಾರರು, ಡಿಟಿಪಿ ಕೇಂದ್ರದವರು, ವಧು-ವರರ ವಯಸ್ಸಿನ ದೃಢೀಕರಣ ಇಲ್ಲದೇ ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿಕೊಟ್ಟರೆ ಅಂತವರ ವಿರುದ್ಧವೂ ಪ್ರಕರಣ ದಾಖಲಿಸಲು ಬಾಲ್ಯ ವಿವಾಹ ತಡೆ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ನಿರ್ಧರಿಸಿದೆ.
ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕದ್ದುಮುಚ್ಚಿ ಬಾಲ್ಯ ವಿವಾಹ ನಡೆಯುತ್ತಲೇ ಇವೆ. ಹೀಗಾಗಿ ಮದುವೆ ಆಯೋಜಿಸುವ ಆರಂಭ ಹಂತದಲ್ಲೂ ಕಣ್ಗಾವಲಿಗೆ ಜಿಲ್ಲಾಡಳಿತ ಮುಂದಾಗಿದೆ. ಬಾಲ್ಯ ವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಪ್ರಕಾರ ಮದುವೆ ಆಮಂತ್ರಣ ಮುದ್ರಣಕಾರರೂ ಅಪರಾಧಿಗಳಾಗುತ್ತಾರೆ. ಕಾನೂನು ಪ್ರಕಾರ ಅವರಿಗೆ ಕನಿಷ್ಠ 1, ಗರಿಷ್ಠ 2 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಲು ಈ ತಿದ್ದುಪಡಿ ಕಾನೂನಿನಲ್ಲಿ ಅವಕಾಶಗಳಿವೆ.
ಜತೆಗೆ ಬಾಲ್ಯ ವಿವಾಹ ಆದಲ್ಲಿ ಕೇವಲ ಹುಡುಗ, ಹುಡುಗಿಯ ತಂದೆ-ತಾಯಿ ಅಷ್ಟೇ ಅಲ್ಲದೇ ಪೂಜಾರಿಗಳು, ಸಂಬಂಧಿಕರು, ಉತ್ತೇಜನ ನೀಡಿದವರು, ಬಾಲ್ಯ ವಿವಾಹ ತಡೆಯಲು ವಿಫಲರಾದವರು (ಸಂಬಂಧಿಸಿದ ಇಲಾಖೆ ಅಧಿಕಾರಿಗಳು) ಹಾಗೂ ಬಾಲ್ಯ ವಿವಾಹದಲ್ಲಿ ಭಾಗವಹಿಸಿದವರೂ ಅಪರಾಧಿಗಳಾಗುತ್ತಾರೆ. ಹೀಗಾಗಿ ಈ ಕಾನೂನು ಜಾಗೃತಿಗೊಳಿಸುವ ಜತೆಗೆ ಮದುವೆಗೆ ಮೂಲ ಆರಂಭವಾಗುವ ಮದುವೆ ಆಮಂತ್ರಣ ಪತ್ರಿಕೆ ಮುದ್ರಣದಿಂದಲೇ ಕಡಿವಾಣ ಹಾಕಲು ಹೊಸ ಪ್ರಯೋಗ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಮುದ್ರಣಕಾರರು ವಯಸ್ಸಿನ ದೃಢೀಕರಣವಿಲ್ಲದೇ ಆಮಂತ್ರಣ ಪತ್ರಿಕೆ ಮುದ್ರಿಸುವಂತಿಲ್ಲ ಎಂಬ ಷರತ್ತು, ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರದ ಮಾಲೀಕರಿಗೆ ಹಾಕಲಾಗಿದೆ.
ದೃಢೀಕರಣ ಕಡ್ಡಾಯ:
ಯಾವುದೇ ವ್ಯಕ್ತಿ ಅಥವಾ ಕುಟುಂಬದವರು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಬಂದರೆ ಅವರಿಂದ ವಯಸ್ಸಿನ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಜನನ ಪ್ರಮಾಣ ಪತ್ರ, ಶಾಲಾ ವಯಸ್ಸಿನ ದೃಢೀಕರಣ ಪತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಸರ್ಕಾರಿ ವೈದ್ಯರು ರೇಡಿಯೋಲಜಿ ಪರೀಕ್ಷೆ ನಡೆಸಿ ನೀಡಿದ ದೃಢೀಕರಣ ಪತ್ರ ಮುಂತಾದ ಯಾವುದಾದರೊಂದು ಪ್ರಮಾಣ ಪತ್ರ ಪಡೆದ ಬಳಿಕವೇ ಆಮಂತ್ರಣ ಪತ್ರಿಕೆ ಮುದ್ರಿಸಲು ಸೂಚಿಸಲಾಗಿದೆ.
ದಾಖಲೆ ಸಂಗ್ರಹ ಕಡ್ಡಾಯ :
ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರದವರು ತಾವು ಮುದ್ರಿಸುವ ಮದುವೆ ಆಮಂತ್ರಣ ಪತ್ರಿಕೆಗಳ ಒಂದು ಪ್ರತಿ, ಅದಕ್ಕೆ ಪಡೆದ ವಯಸ್ಸಿನ ದೃಢೀಕರಣ ಪತ್ರಗಳನ್ನು ಕಡ್ಡಾಯವಾಗಿ ಆಯಾ ಮುದ್ರಣಾಲಯದ ಕಡತಗಳಲ್ಲಿ ಕಾಯ್ದಿಟ್ಟಿರಬೇಕೆಂಬ ಸೂಚನೆಯಿದೆ.
ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರಗಳಿಗೆ ವಿಶೇಷ ಸೂಚನಾ ಪತ್ರ ಹೊರಡಿಸಲಾಗಿದೆ. ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಹುಡುಗಿಗೆ 18, ಹುಡುಗನಿಗೆ 21 ವಯಸ್ಸಿನ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
– ಕೆ.ಜಿ. ಶಾಂತಾರಾಮ್, ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಬಾಲ್ಯ ವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನೆ ಸಮಿತಿ
– ಶ್ರೀಶೈಲ ಕೆ. ಬಿರಾದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ