ವಯಸ್ಸಿನ ದೃಢೀಕರಣವಿಲ್ಲದೇ ಲಗ್ನಪತ್ರಿಕೆ ಮುದ್ರಿಸಿದರೆ ಶಿಕ್ಷೆ


Team Udayavani, Sep 10, 2018, 6:00 AM IST

marrage.jpg

ಬಾಗಲಕೋಟೆ: ಬಾಲ್ಯ ವಿವಾಹ ತಡೆಗೆ ಜಿಲ್ಲಾಡಳಿತ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇನ್ನು ಮುಂದೆ ಜಿಲ್ಲೆಯ ಮುದ್ರಣಕಾರರು, ಡಿಟಿಪಿ ಕೇಂದ್ರದವರು, ವಧು-ವರರ ವಯಸ್ಸಿನ ದೃಢೀಕರಣ ಇಲ್ಲದೇ ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿಕೊಟ್ಟರೆ ಅಂತವರ ವಿರುದ್ಧವೂ ಪ್ರಕರಣ ದಾಖಲಿಸಲು ಬಾಲ್ಯ ವಿವಾಹ ತಡೆ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ನಿರ್ಧರಿಸಿದೆ.

ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕದ್ದುಮುಚ್ಚಿ ಬಾಲ್ಯ ವಿವಾಹ ನಡೆಯುತ್ತಲೇ ಇವೆ. ಹೀಗಾಗಿ ಮದುವೆ ಆಯೋಜಿಸುವ ಆರಂಭ ಹಂತದಲ್ಲೂ ಕಣ್ಗಾವಲಿಗೆ ಜಿಲ್ಲಾಡಳಿತ ಮುಂದಾಗಿದೆ. ಬಾಲ್ಯ ವಿವಾಹ ನಿಷೇಧ ಕರ್ನಾಟಕ ತಿದ್ದುಪಡಿ ಕಾಯ್ದೆ-2016ರ ಪ್ರಕಾರ ಮದುವೆ ಆಮಂತ್ರಣ ಮುದ್ರಣಕಾರರೂ ಅಪರಾಧಿಗಳಾಗುತ್ತಾರೆ. ಕಾನೂನು ಪ್ರಕಾರ ಅವರಿಗೆ ಕನಿಷ್ಠ 1, ಗರಿಷ್ಠ 2 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಲು ಈ ತಿದ್ದುಪಡಿ ಕಾನೂನಿನಲ್ಲಿ ಅವಕಾಶಗಳಿವೆ.

ಜತೆಗೆ ಬಾಲ್ಯ ವಿವಾಹ ಆದಲ್ಲಿ ಕೇವಲ ಹುಡುಗ, ಹುಡುಗಿಯ ತಂದೆ-ತಾಯಿ ಅಷ್ಟೇ ಅಲ್ಲದೇ ಪೂಜಾರಿಗಳು, ಸಂಬಂಧಿಕರು, ಉತ್ತೇಜನ ನೀಡಿದವರು, ಬಾಲ್ಯ ವಿವಾಹ ತಡೆಯಲು ವಿಫಲರಾದವರು (ಸಂಬಂಧಿಸಿದ ಇಲಾಖೆ ಅಧಿಕಾರಿಗಳು) ಹಾಗೂ ಬಾಲ್ಯ ವಿವಾಹದಲ್ಲಿ ಭಾಗವಹಿಸಿದವರೂ ಅಪರಾಧಿಗಳಾಗುತ್ತಾರೆ. ಹೀಗಾಗಿ ಈ ಕಾನೂನು ಜಾಗೃತಿಗೊಳಿಸುವ ಜತೆಗೆ ಮದುವೆಗೆ ಮೂಲ ಆರಂಭವಾಗುವ ಮದುವೆ ಆಮಂತ್ರಣ ಪತ್ರಿಕೆ ಮುದ್ರಣದಿಂದಲೇ ಕಡಿವಾಣ ಹಾಕಲು ಹೊಸ ಪ್ರಯೋಗ ಜಾರಿಯಾಗಿದೆ. ಈ ನಿಟ್ಟಿನಲ್ಲಿ ಮುದ್ರಣಕಾರರು ವಯಸ್ಸಿನ ದೃಢೀಕರಣವಿಲ್ಲದೇ ಆಮಂತ್ರಣ ಪತ್ರಿಕೆ ಮುದ್ರಿಸುವಂತಿಲ್ಲ ಎಂಬ ಷರತ್ತು, ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರದ ಮಾಲೀಕರಿಗೆ ಹಾಕಲಾಗಿದೆ.

ದೃಢೀಕರಣ ಕಡ್ಡಾಯ:
ಯಾವುದೇ ವ್ಯಕ್ತಿ ಅಥವಾ ಕುಟುಂಬದವರು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಬಂದರೆ ಅವರಿಂದ ವಯಸ್ಸಿನ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಜನನ ಪ್ರಮಾಣ ಪತ್ರ, ಶಾಲಾ ವಯಸ್ಸಿನ ದೃಢೀಕರಣ ಪತ್ರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಸರ್ಕಾರಿ ವೈದ್ಯರು ರೇಡಿಯೋಲಜಿ ಪರೀಕ್ಷೆ ನಡೆಸಿ ನೀಡಿದ ದೃಢೀಕರಣ ಪತ್ರ ಮುಂತಾದ ಯಾವುದಾದರೊಂದು ಪ್ರಮಾಣ ಪತ್ರ ಪಡೆದ ಬಳಿಕವೇ ಆಮಂತ್ರಣ ಪತ್ರಿಕೆ ಮುದ್ರಿಸಲು ಸೂಚಿಸಲಾಗಿದೆ.

ದಾಖಲೆ ಸಂಗ್ರಹ ಕಡ್ಡಾಯ :
ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರದವರು ತಾವು ಮುದ್ರಿಸುವ ಮದುವೆ ಆಮಂತ್ರಣ ಪತ್ರಿಕೆಗಳ ಒಂದು ಪ್ರತಿ, ಅದಕ್ಕೆ ಪಡೆದ ವಯಸ್ಸಿನ ದೃಢೀಕರಣ ಪತ್ರಗಳನ್ನು ಕಡ್ಡಾಯವಾಗಿ ಆಯಾ ಮುದ್ರಣಾಲಯದ ಕಡತಗಳಲ್ಲಿ ಕಾಯ್ದಿಟ್ಟಿರಬೇಕೆಂಬ ಸೂಚನೆಯಿದೆ.

ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಜಿಲ್ಲೆಯ ಎಲ್ಲ ಮುದ್ರಣಕಾರರು, ಡಿಟಿಪಿ ಕೇಂದ್ರಗಳಿಗೆ ವಿಶೇಷ ಸೂಚನಾ ಪತ್ರ ಹೊರಡಿಸಲಾಗಿದೆ. ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಲು ಹುಡುಗಿಗೆ 18, ಹುಡುಗನಿಗೆ 21 ವಯಸ್ಸಿನ ದೃಢೀಕರಣ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
– ಕೆ.ಜಿ. ಶಾಂತಾರಾಮ್‌, ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಬಾಲ್ಯ ವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನೆ ಸಮಿತಿ

– ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.