ಜೆಟಿ ಕಾಲೇಜಿನಲ್ಲಿ ಜೈವಿಕ ಇಂಧನ ಕ್ರಾಂತಿ


Team Udayavani, Sep 10, 2018, 6:40 AM IST

ban10091807.jpg

ಗದಗ: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಸೋಮವಾರ “ಭಾರತ್‌ ಬಂದ್‌’ಗೆ ಕರೆ ನೀಡಲಾಗಿದೆ. ಆದರೆ, ನಗರದ ಜಿಲ್ಲಾ ಜೈವಿಕ ಇಂಧನ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರ ಪರ್ಯಾಯ ಇಂಧನದತ್ತ ಬೆರಳು ತೋರಿದೆ. ಸದ್ದಿಲ್ಲದೆ ಜೈವಿಕ ಇಂಧನ ಬಳಕೆ ಜತೆಗೆ, ಜನರನ್ನು ಪ್ರೇರೇಪಿಸುತ್ತಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ 2012ರಲ್ಲಿ ಜಿಲ್ಲೆಗೆ ಮಂಜೂರಾಗಿದೆ. ನಗರದ ಜಗದ್ಗುರು ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾತ್ಯಕ್ಷಿಕೆ ಕೇಂದ್ರ, ಕಾಲೇಜಿನ ವಾಹನಗಳಿಗೆ ಜೈವಿಕ ಇಂಧನ ಬಳಸುವುದರ ಜತೆಗೆ ಪರ್ಯಾಯ ಇಂಧನ ಬಳಕೆಗೆ ಸಾರ್ವಜನಿಕರನ್ನು ಪ್ರೇರೇಪಿಸುತ್ತಿದೆ.

ಕೇಂದ್ರದಲ್ಲಿ ಹೊಂಗೆ, ಬೇವು ಹಾಗೂ ಜಟ್ರೋಪ ಬೀಜಗಳಿಂದ ಬಯೋ ಡೀಸೆಲ್‌ ಉತ್ಪಾದಿಸಲಾಗುತ್ತಿದೆ.ಇದಕ್ಕೆ ಬೇಕಾಗುವ ಬೀಜಗಳನ್ನು ಗದಗ, ಕೊಪ್ಪಳ,ದಾವಣಗೆರೆ ಭಾಗದ ರೈತರಿಂದಲೇ ಪ್ರತಿ ಕೆಜಿಗೆ 10ರಿಂದ 25 ರೂ. ಖರೀದಿಸಲಾಗುತ್ತಿದೆ. ನಿಗಮದ ಸಂಸ್ಕರಣಾ ಘಟಕದಲ್ಲಿ ರುಬ್ಬಿ ಎಣ್ಣೆ ತೆಗೆದ ಬಳಿಕ ಎಥೆನಾಲ್‌,ಮಿಥೇನಾಲ್‌ ಹಾಗೂ ನ್ಯಾಫೂ¤àಲಿನ್‌ ರಾಸಾಯನಿಕ ಮಿಶ್ರಣವನ್ನು ವಿವಿಧ ಯಂತ್ರೋಪಕರಣಗಳಲ್ಲಿ ಸಂಸ್ಕರಿಸಿ ಬಯೋ ಡೀಸೆಲ್‌ ಉತ್ಪಾದಿಸಲಾಗುತ್ತಿದೆ.

ಲೀಟರ್‌ ಡೀಸೆಲ್‌ಗೆ ಏನೇನು ಬೇಕು?: ಆ ಪೈಕಿ 1 ಕೆಜಿ ಹೊಂಗೆ, 7 ಕೆಜಿ ಜೆಟ್ರೋಪ್‌ (ಕಾಡು ಔಡಲ) ಹಾಗೂ 2 ಕ್ವಿಂಟಲ್‌ ಬೇವು ಬೀಜಗಳಿಂದ 1 ಲೀಟರ್‌ ಬಯೋ ಡೀಸೆಲ್‌ ತಯಾರಿಸಲಾಗುತ್ತದೆ. ಇದರ ಜತೆಗೆ, 3-5 ಕೆಜಿ ಹಿಂಡಿ, ಜಟ್ರೋಪ್‌ ಮತ್ತು ಹೊಂಗೆಯಿಂದ ಬರುವ 200 ಎಂಎಲ್‌ ಗ್ಲಿಸರಿನ್‌ ಸಹ ಉತ್ಪಾದಿಸಲಾಗುತ್ತಿದೆ. ಮಾಹಿತಿ ಕೇಂದ್ರದಲ್ಲಿ ಪ್ರತಿ ನಿತ್ಯ 30-45 ಲೀ.ಉತ್ಪಾದಿಸಲಾಗುತ್ತಿದ್ದು, ಜೆಟಿ ಕಾಲೇಜಿನ ಎಲ್ಲ ವಾಹನಗಳಿಗೆ ಇದನ್ನು ಬಳಸಲಾಗುತ್ತಿದೆ. ಅಲ್ಲದೆ, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಗ್ರಾಹಕರಿಗೆ ಪ್ರತಿ ಲೀಟರ್‌ಗೆ 45 ರೂ.ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಹೊಂಗೆ ಹಿಂಡಿಗೆ ಬೇಡಿಕೆ: ಮಣ್ಣಿನ ಫಲವತ್ತತೆ ಹೆಚ್ಚಿಸುವ, ಕಾಂಡ ಕೊರೆತ ಕೀಟನಾಶಕವಾಗಿರುವ ಹೊಂಗೆ ಹಿಂಡಿಗೆ
(ಉಪ ಉತ್ಪನ್ನ) ರೈತರಿಂದ ಹೆಚ್ಚಿನ ಬೇಡಿಕೆಯಿದೆ. ಪ್ರತಿ ಕೆಜಿಗೆ 20 ರೂ.ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಸಾಬೂನು ತಯಾರಕರು 100 ರೂ.ಬೆಲೆಯಲ್ಲಿ ಒಂದು ಲೀಟರ್‌ ದರದಲ್ಲಿ ಗ್ಲಿಸರಿನ್‌ ಕೊಂಡೊಯ್ಯುತ್ತಿದ್ದಾರೆ.

ಜೊತೆಗೆ, ಇದು ನಗರದ ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ಜೈವಿಕ ಇಂಧನದ ಬಗ್ಗೆ ಅಧ್ಯಯನ, ಸಂಶೋಧನೆ ನಡೆಸಲೂ ಪೂರಕವಾಗಿದೆ ಎನ್ನುತ್ತಾರೆ ಕೇಂದ್ರದ ತಾಂತ್ರಿಕ ಅಧಿಕಾರಿ ಎಂ.ಎಸ್‌.ಪಾಟೀಲ. ಇತರ ಡೀಸೆಲ್‌ಗೆ ಹೋಲಿಸಿದರೆ ಬಯೋಡೀಸೆಲ್‌ ಬೆಲೆ ಕಡಿಮೆ. ಪರ್ಯಾಯ ಇಂಧನ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚಿನ ಒತ್ತು ನೀಡಿದರೆ ಭವಿಷ್ಯದಲ್ಲಿ ದೇಶ ಸ್ವಾವಲಂಬನೆ ಕಾಣಬಹುದು. ಪರಿಸರ ಮಾಲಿನ್ಯವನ್ನೂ ತಡೆಯಬಹುದು ಎಂಬುದು ತಜ್ಞರ ಅಭಿಪ್ರಾಯ.

ಕೆಲ ಯಂತ್ರೋಪಕರಣಗಳಿಗೆ ಶೇ.100, ಕೃಷಿ ಪಂಪ್‌ಸೆಟ್‌ಗೆ ಶೇ.80, ಇನ್ನೋವಾ, ಟ್ರಾÂಕ್ಟರ್‌ಗಳಿಗೆ ಶೇ.50, ಇತರ ಡೀಸೆಲ್‌ ವಾಹನಗಳಿಗೆ ಶೇ.40ರಷ್ಟು ಬಯೋ ಡೀಸೆಲ್‌ ಬಳಸಬಹುದು. ಬಯೋಡೀಸೆಲ್‌ ಮಾರಾಟಕ್ಕಿಂತ ಜಾಗೃತಿ ಮೂಡಿಸುವುದು ಕೇಂದ್ರದ ಮುಖ್ಯ ಉದ್ದೇಶ. ನಿಗಮದಿಂದ ಇಂಧನ ಪ್ರಮಾಣೀಕರಿಸುವುದು ಹಾಗೂ ಪ್ರತ್ಯೇಕ ಪೆಟ್ರೋಲ್‌ ಬಂಕ್‌ ಸ್ಥಾಪನೆಗೆ ಚಿಂತನೆ ನಡೆದಿದೆ.
– ನಿಂಗಪ್ಪ ಪೂಜಾರ, ಘಟಕದ ಸಂಯೋಜಕರು

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.