ಜೆಟಿ ಕಾಲೇಜಿನಲ್ಲಿ ಜೈವಿಕ ಇಂಧನ ಕ್ರಾಂತಿ


Team Udayavani, Sep 10, 2018, 6:40 AM IST

ban10091807.jpg

ಗದಗ: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಿಂದ ಪರಿಸ್ಥಿತಿ ಬಿಗಡಾಯಿಸಿದ್ದು, ಸೋಮವಾರ “ಭಾರತ್‌ ಬಂದ್‌’ಗೆ ಕರೆ ನೀಡಲಾಗಿದೆ. ಆದರೆ, ನಗರದ ಜಿಲ್ಲಾ ಜೈವಿಕ ಇಂಧನ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರ ಪರ್ಯಾಯ ಇಂಧನದತ್ತ ಬೆರಳು ತೋರಿದೆ. ಸದ್ದಿಲ್ಲದೆ ಜೈವಿಕ ಇಂಧನ ಬಳಕೆ ಜತೆಗೆ, ಜನರನ್ನು ಪ್ರೇರೇಪಿಸುತ್ತಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ 2012ರಲ್ಲಿ ಜಿಲ್ಲೆಗೆ ಮಂಜೂರಾಗಿದೆ. ನಗರದ ಜಗದ್ಗುರು ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜು ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾತ್ಯಕ್ಷಿಕೆ ಕೇಂದ್ರ, ಕಾಲೇಜಿನ ವಾಹನಗಳಿಗೆ ಜೈವಿಕ ಇಂಧನ ಬಳಸುವುದರ ಜತೆಗೆ ಪರ್ಯಾಯ ಇಂಧನ ಬಳಕೆಗೆ ಸಾರ್ವಜನಿಕರನ್ನು ಪ್ರೇರೇಪಿಸುತ್ತಿದೆ.

ಕೇಂದ್ರದಲ್ಲಿ ಹೊಂಗೆ, ಬೇವು ಹಾಗೂ ಜಟ್ರೋಪ ಬೀಜಗಳಿಂದ ಬಯೋ ಡೀಸೆಲ್‌ ಉತ್ಪಾದಿಸಲಾಗುತ್ತಿದೆ.ಇದಕ್ಕೆ ಬೇಕಾಗುವ ಬೀಜಗಳನ್ನು ಗದಗ, ಕೊಪ್ಪಳ,ದಾವಣಗೆರೆ ಭಾಗದ ರೈತರಿಂದಲೇ ಪ್ರತಿ ಕೆಜಿಗೆ 10ರಿಂದ 25 ರೂ. ಖರೀದಿಸಲಾಗುತ್ತಿದೆ. ನಿಗಮದ ಸಂಸ್ಕರಣಾ ಘಟಕದಲ್ಲಿ ರುಬ್ಬಿ ಎಣ್ಣೆ ತೆಗೆದ ಬಳಿಕ ಎಥೆನಾಲ್‌,ಮಿಥೇನಾಲ್‌ ಹಾಗೂ ನ್ಯಾಫೂ¤àಲಿನ್‌ ರಾಸಾಯನಿಕ ಮಿಶ್ರಣವನ್ನು ವಿವಿಧ ಯಂತ್ರೋಪಕರಣಗಳಲ್ಲಿ ಸಂಸ್ಕರಿಸಿ ಬಯೋ ಡೀಸೆಲ್‌ ಉತ್ಪಾದಿಸಲಾಗುತ್ತಿದೆ.

ಲೀಟರ್‌ ಡೀಸೆಲ್‌ಗೆ ಏನೇನು ಬೇಕು?: ಆ ಪೈಕಿ 1 ಕೆಜಿ ಹೊಂಗೆ, 7 ಕೆಜಿ ಜೆಟ್ರೋಪ್‌ (ಕಾಡು ಔಡಲ) ಹಾಗೂ 2 ಕ್ವಿಂಟಲ್‌ ಬೇವು ಬೀಜಗಳಿಂದ 1 ಲೀಟರ್‌ ಬಯೋ ಡೀಸೆಲ್‌ ತಯಾರಿಸಲಾಗುತ್ತದೆ. ಇದರ ಜತೆಗೆ, 3-5 ಕೆಜಿ ಹಿಂಡಿ, ಜಟ್ರೋಪ್‌ ಮತ್ತು ಹೊಂಗೆಯಿಂದ ಬರುವ 200 ಎಂಎಲ್‌ ಗ್ಲಿಸರಿನ್‌ ಸಹ ಉತ್ಪಾದಿಸಲಾಗುತ್ತಿದೆ. ಮಾಹಿತಿ ಕೇಂದ್ರದಲ್ಲಿ ಪ್ರತಿ ನಿತ್ಯ 30-45 ಲೀ.ಉತ್ಪಾದಿಸಲಾಗುತ್ತಿದ್ದು, ಜೆಟಿ ಕಾಲೇಜಿನ ಎಲ್ಲ ವಾಹನಗಳಿಗೆ ಇದನ್ನು ಬಳಸಲಾಗುತ್ತಿದೆ. ಅಲ್ಲದೆ, ಸ್ವಯಂ ಪ್ರೇರಿತವಾಗಿ ಮುಂದೆ ಬರುವ ಗ್ರಾಹಕರಿಗೆ ಪ್ರತಿ ಲೀಟರ್‌ಗೆ 45 ರೂ.ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಹೊಂಗೆ ಹಿಂಡಿಗೆ ಬೇಡಿಕೆ: ಮಣ್ಣಿನ ಫಲವತ್ತತೆ ಹೆಚ್ಚಿಸುವ, ಕಾಂಡ ಕೊರೆತ ಕೀಟನಾಶಕವಾಗಿರುವ ಹೊಂಗೆ ಹಿಂಡಿಗೆ
(ಉಪ ಉತ್ಪನ್ನ) ರೈತರಿಂದ ಹೆಚ್ಚಿನ ಬೇಡಿಕೆಯಿದೆ. ಪ್ರತಿ ಕೆಜಿಗೆ 20 ರೂ.ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಸಾಬೂನು ತಯಾರಕರು 100 ರೂ.ಬೆಲೆಯಲ್ಲಿ ಒಂದು ಲೀಟರ್‌ ದರದಲ್ಲಿ ಗ್ಲಿಸರಿನ್‌ ಕೊಂಡೊಯ್ಯುತ್ತಿದ್ದಾರೆ.

ಜೊತೆಗೆ, ಇದು ನಗರದ ತೋಂಟದಾರ್ಯ ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೆ ಜೈವಿಕ ಇಂಧನದ ಬಗ್ಗೆ ಅಧ್ಯಯನ, ಸಂಶೋಧನೆ ನಡೆಸಲೂ ಪೂರಕವಾಗಿದೆ ಎನ್ನುತ್ತಾರೆ ಕೇಂದ್ರದ ತಾಂತ್ರಿಕ ಅಧಿಕಾರಿ ಎಂ.ಎಸ್‌.ಪಾಟೀಲ. ಇತರ ಡೀಸೆಲ್‌ಗೆ ಹೋಲಿಸಿದರೆ ಬಯೋಡೀಸೆಲ್‌ ಬೆಲೆ ಕಡಿಮೆ. ಪರ್ಯಾಯ ಇಂಧನ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚಿನ ಒತ್ತು ನೀಡಿದರೆ ಭವಿಷ್ಯದಲ್ಲಿ ದೇಶ ಸ್ವಾವಲಂಬನೆ ಕಾಣಬಹುದು. ಪರಿಸರ ಮಾಲಿನ್ಯವನ್ನೂ ತಡೆಯಬಹುದು ಎಂಬುದು ತಜ್ಞರ ಅಭಿಪ್ರಾಯ.

ಕೆಲ ಯಂತ್ರೋಪಕರಣಗಳಿಗೆ ಶೇ.100, ಕೃಷಿ ಪಂಪ್‌ಸೆಟ್‌ಗೆ ಶೇ.80, ಇನ್ನೋವಾ, ಟ್ರಾÂಕ್ಟರ್‌ಗಳಿಗೆ ಶೇ.50, ಇತರ ಡೀಸೆಲ್‌ ವಾಹನಗಳಿಗೆ ಶೇ.40ರಷ್ಟು ಬಯೋ ಡೀಸೆಲ್‌ ಬಳಸಬಹುದು. ಬಯೋಡೀಸೆಲ್‌ ಮಾರಾಟಕ್ಕಿಂತ ಜಾಗೃತಿ ಮೂಡಿಸುವುದು ಕೇಂದ್ರದ ಮುಖ್ಯ ಉದ್ದೇಶ. ನಿಗಮದಿಂದ ಇಂಧನ ಪ್ರಮಾಣೀಕರಿಸುವುದು ಹಾಗೂ ಪ್ರತ್ಯೇಕ ಪೆಟ್ರೋಲ್‌ ಬಂಕ್‌ ಸ್ಥಾಪನೆಗೆ ಚಿಂತನೆ ನಡೆದಿದೆ.
– ನಿಂಗಪ್ಪ ಪೂಜಾರ, ಘಟಕದ ಸಂಯೋಜಕರು

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.