ಬೀದಿ ನಾಯಿಗಳ ದಾಳಿಗೆ ಬಾಲಕಿ ಬಲಿ
Team Udayavani, Sep 10, 2018, 6:30 AM IST
ಕುಣಿಗಲ್(ತುಮಕೂರು): ತಾಲೂಕಿನ ನಿಂಗಯ್ಯನಪಾಳ್ಯ ಗ್ರಾಮದ ದೊಡ್ಡಕೆರೆ ಅಂಗಳದಲ್ಲಿ ಭಾನುವಾರ ಬಾಲಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಆಕೆಯನ್ನು ಕಚ್ಚಿ ಕೊಂದು ಹಾಕಿವೆ. ಪಟ್ಟಣದ ಸಂತ ರೀತಮ್ಮನ
ಶಾಲೆಯಲ್ಲಿ ಆರನೇ ತರಗತಿಯಲ್ಲಿ ಓದುತ್ತಿರುವ ತೇಜಸ್ವಿನಿ (12) ನಾಯಿಗಳ ದಾಳಿಯಿಂದ ಮೃತಪಟ್ಟಿರುವ ಬಾಲಕಿ.
ಬೆಳಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ಆಕೆಯ ತಾಯಿ ಗಂಗಮ್ಮ, ಬಟ್ಟೆ ಒಗೆಯಲು ದೊಡ್ಡಕೆರೆಗೆ ಹೋಗಿದ್ದರು.
ತಾಯಿಯನ್ನು ಹುಡುಕಿಕೊಂಡು ತೇಜಸ್ವಿನಿ ಕೆರೆ ಬಳಿಗೆ ಬಂದಾಗ ಏಳೆಂಟು ನಾಯಿಗಳ ಗುಂಪೊಂದು ಹಠಾತ್ತನೆ ದಾಳಿ ನಡೆಸಿದ್ದು, ಕೈ-ಕಾಲು, ಮುಖ ಸೇರಿ ದೇಹದ ಹಲವುಭಾಗವನ್ನು ತಿಂದು ಕೊಂದು ಹಾಕಿದವು. ಬಹಳ ಹೊತ್ತಾದರೂ ಬಾರದಿದ್ದಾಗ, ತಂದೆ ಗಂಗಾಧರ್ ಮಗಳನ್ನು ಹುಡುಕಿಕೊಂಡು ಕೆರೆ ಅಂಗಳಕ್ಕೆ ಬಂದಾಗ ನಾಯಿಗಳ ಗುಂಪೊಂದು ಮಗಳ ದೇಹ ತಿನ್ನುತ್ತಿದ್ದ ದೃಶ್ಯ ಕಂಡು ಕಿರುಚಿಕೊಂಡರು. ನಾಯಿಗಳನ್ನು ಓಡಿಸುವಷ್ಟರಲ್ಲಿ ಮಗಳು ಅಸು ನೀಗಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ