ಗಣೇಶನ ಹಬ್ಬ ಬಳಿಕ ಬಸ್ ದರ ಹೆಚ್ಚಳ ಪಕ್ಕಾ
Team Udayavani, Sep 10, 2018, 6:00 AM IST
ಮಂಡ್ಯ/ಮದ್ದೂರು: ಗೌರಿ-ಗಣೇಶ ಹಬ್ಬದ ನಂತರ ಬಸ್ ಪ್ರಯಾಣದರವನ್ನು ಶೇ.18ರಷ್ಟು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ಎನ್.ತಮ್ಮಣ್ಣ ಸ್ಪಷ್ಟಪಡಿಸಿದರು.
ಬಸ್ ದರ ಏರಿಕೆ ಸಂಬಂಧ ಮೂರು ತಿಂಗಳ ಹಿಂದೆಯೇ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ದರ ಏರಿಕೆ ಮಾಡಿದರೆ ಜನಸಾಮಾನ್ಯರಿಗೆ ಹೊರೆಯಾಗುವುದು ಎಂಬ ಉದ್ದೇಶದಿಂದ ತಡೆಹಿಡಿಯಲಾಗಿತ್ತು. ತೈಲ ಬೆಲೆ ದಿನೇ ದಿನೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದರು.
ಪ್ರಸ್ತುತ ಪೆಟ್ರೋಲ್ ಲೀ.ಗೆ 84 ರೂ.ಹಾಗೂ ಡೀಸೆಲ್ಗೆ 73 ರೂ.ಆಗಿರುವುದರಿಂದ ಸಂಸ್ಥೆಗೆ ಆಗುತ್ತಿರುವ ನಷ್ಟ ತಪ್ಪಿಸಬೇಕಾದರೆ ಬಸ್ ದರ ಏರಿಕೆ ಮಾಡುವ ಅನಿವಾರ್ಯತೆ ಇದೆ. ಗೌರಿ-ಗಣೇಶ ಹಬ್ಬದ ನಂತರ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರವೊಂದರಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಪ್ರತಿ ದಿನ ಬಿಎಂಟಿಸಿ ಬಸ್ನಲ್ಲಿ 45 ಲಕ್ಷ ಜನ ಪ್ರಯಾಣಿಸಿದರೆ,ಮೆಟ್ರೋದಲ್ಲಿ 4 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಮಹಾನಗರದ ಜನರು ಸಂಚಾರಕ್ಕೆ ಸಾರ್ವಜನಿಕ ಸಂಪರ್ಕ ಸಾರಿಗೆಯನ್ನು ಅವಲಂಬಿಸಿದ್ದಾರೆ ಎಂದರು.
ಭಾರತ್ ಬಂದ್ಗೆ ಬೆಂಬಲ:
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೋಮವಾರ ಕರೆ ನೀಡಿರುವ ಭಾರತ್ ಬಂದ್ಗೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ. ಇದರಿಂದಾಗಿ ಸಾರಿಗೆ ಬಸ್ಗಳು ರಸ್ತೆಗಿಳಿಯುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ