ಶಾಲೆ ಕಾಲೇಜು ಸಂಪೂರ್ಣ ಬಂದ್‌


Team Udayavani, Sep 11, 2018, 6:35 AM IST

school-college-leave.jpg

ಬೆಂಗಳೂರು : ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ ಸಂಸ್ಥೆಗಳು ಪರೋಕ್ಷವಾಗಿ ಬಂದ್‌ಗೆ ಬೆಂಬಲ ನೀಡಿದಂತಾಗಿದೆ.

ಸರ್ಕಾರಿ ಶಾಲೆಗಳ ಸಹಿತವಾಗಿ ರಾಜ್ಯದ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲಾಡಳಿತ ಮಂಡಳಿಗಳು ಭಾನುವಾರ ಸಂಜೆಯೇ ಸೋಮವಾರದ ರಜೆ ಖಚಿತಪಡಿಸಿದ್ದರಿಂದ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಖಾಸಗಿ ಶಾಲಾಡಳಿತ ಮಂಡಳಿಗಳು ತರಗತಿ ಕೊಠಡಿ ಸಹಿತವಾಗಿ ಶಾಲೆಯ ಪರಿಕರಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಭಾನುವಾರವೇ ತೆಗೆದುಕೊಂಡಿದ್ದರು.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ, ಮಂಗಳೂರು, ರಾಯಚೂರು, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸಹಿತವಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾನುವಾರ ಸಂಜೆಯೇ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದರು. ಹೀಗಾಗಿ ರಾಜ್ಯದ ಯಾವುದೇ ಶಾಲಾ, ಕಾಲೇಜು ಸೋಮವಾರ ತೆರೆದಿರಲಿಲ್ಲ. ಕೆಲವೊಂದು ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳ ಶಿಕ್ಷಕ, ಉಪನ್ಯಾಸಕರು ಸೋಮವಾರವೂ ಶಾಲಾ ಕಾಲೇಜಿಗೆ ಹೋಗಿ ಆಡಳಿತಾತ್ಮಕ ಕೆಲಸ ನಡೆಸಿದ್ದಾರೆ. ಎಲ್ಲಿಯೂ ತರಗತಿಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆ ಖಚಿತ ಪಡಿಸಿದೆ.

ಖಾಸಗಿ ಶಾಲಾಡಳಿತ ಮಂಡಳಿಗಳು ಬಂದ್‌ನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಅಥವಾ ಶಾಲೆಯ ಪರಿಕರಗಳ ನಾಶವಾಗ ಬಹುದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ರಜಾ ಘೋಷಣೆ ಮಾಡುವ ಮೊದಲೇ ತಮ್ಮ ಶಾಲೆಗಳಿಗೆ ರಜೆ ನೀಡಿ, ಪಾಲಕ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರ ಮಾಹಿತಿ ನೀಡಿದ್ದರು. ಹೀಗಾಗಿ ಸೋಮವಾರ ಖಾಸಗಿ ಶಾಲೆಗಳಲ್ಲೂ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆದಿಲ್ಲ.

ಖಾಸಗಿ ಶಾಲೆಗಳು ಸೋಮವಾರ ತರಗತಿಯನ್ನು ಶನಿವಾರ ಮಧ್ಯಾಹ್ನ ಅಥವಾ ಬೇರ್ಯಾವುದಾದರು ಸರ್ಕಾರಿ ರಜಾ ದಿನದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ, ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜಾ ಕಡಿತಗೊಳಿಸಿ, ಅದರಲ್ಲೇ ಸೋಮವಾರದ ತರಗತಿಯನ್ನು ಸೇರಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.