ಶಾಲೆ ಕಾಲೇಜು ಸಂಪೂರ್ಣ ಬಂದ್
Team Udayavani, Sep 11, 2018, 6:35 AM IST
ಬೆಂಗಳೂರು : ಭಾರತ್ ಬಂದ್ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ ಸಂಸ್ಥೆಗಳು ಪರೋಕ್ಷವಾಗಿ ಬಂದ್ಗೆ ಬೆಂಬಲ ನೀಡಿದಂತಾಗಿದೆ.
ಸರ್ಕಾರಿ ಶಾಲೆಗಳ ಸಹಿತವಾಗಿ ರಾಜ್ಯದ ಸಿಬಿಎಸ್ಇ ಹಾಗೂ ಐಸಿಎಸ್ಇ ಶಾಲಾಡಳಿತ ಮಂಡಳಿಗಳು ಭಾನುವಾರ ಸಂಜೆಯೇ ಸೋಮವಾರದ ರಜೆ ಖಚಿತಪಡಿಸಿದ್ದರಿಂದ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಖಾಸಗಿ ಶಾಲಾಡಳಿತ ಮಂಡಳಿಗಳು ತರಗತಿ ಕೊಠಡಿ ಸಹಿತವಾಗಿ ಶಾಲೆಯ ಪರಿಕರಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಭಾನುವಾರವೇ ತೆಗೆದುಕೊಂಡಿದ್ದರು.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ, ಮಂಗಳೂರು, ರಾಯಚೂರು, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸಹಿತವಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾನುವಾರ ಸಂಜೆಯೇ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದರು. ಹೀಗಾಗಿ ರಾಜ್ಯದ ಯಾವುದೇ ಶಾಲಾ, ಕಾಲೇಜು ಸೋಮವಾರ ತೆರೆದಿರಲಿಲ್ಲ. ಕೆಲವೊಂದು ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳ ಶಿಕ್ಷಕ, ಉಪನ್ಯಾಸಕರು ಸೋಮವಾರವೂ ಶಾಲಾ ಕಾಲೇಜಿಗೆ ಹೋಗಿ ಆಡಳಿತಾತ್ಮಕ ಕೆಲಸ ನಡೆಸಿದ್ದಾರೆ. ಎಲ್ಲಿಯೂ ತರಗತಿಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆ ಖಚಿತ ಪಡಿಸಿದೆ.
ಖಾಸಗಿ ಶಾಲಾಡಳಿತ ಮಂಡಳಿಗಳು ಬಂದ್ನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಅಥವಾ ಶಾಲೆಯ ಪರಿಕರಗಳ ನಾಶವಾಗ ಬಹುದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ರಜಾ ಘೋಷಣೆ ಮಾಡುವ ಮೊದಲೇ ತಮ್ಮ ಶಾಲೆಗಳಿಗೆ ರಜೆ ನೀಡಿ, ಪಾಲಕ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರ ಮಾಹಿತಿ ನೀಡಿದ್ದರು. ಹೀಗಾಗಿ ಸೋಮವಾರ ಖಾಸಗಿ ಶಾಲೆಗಳಲ್ಲೂ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆದಿಲ್ಲ.
ಖಾಸಗಿ ಶಾಲೆಗಳು ಸೋಮವಾರ ತರಗತಿಯನ್ನು ಶನಿವಾರ ಮಧ್ಯಾಹ್ನ ಅಥವಾ ಬೇರ್ಯಾವುದಾದರು ಸರ್ಕಾರಿ ರಜಾ ದಿನದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ, ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜಾ ಕಡಿತಗೊಳಿಸಿ, ಅದರಲ್ಲೇ ಸೋಮವಾರದ ತರಗತಿಯನ್ನು ಸೇರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ