ಶಾಲೆ ಕಾಲೇಜು ಸಂಪೂರ್ಣ ಬಂದ್‌


Team Udayavani, Sep 11, 2018, 6:35 AM IST

school-college-leave.jpg

ಬೆಂಗಳೂರು : ಭಾರತ್‌ ಬಂದ್‌ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಮತ್ತು ಶಿಕ್ಷಣ ಸಂಸ್ಥೆಗಳು ಪರೋಕ್ಷವಾಗಿ ಬಂದ್‌ಗೆ ಬೆಂಬಲ ನೀಡಿದಂತಾಗಿದೆ.

ಸರ್ಕಾರಿ ಶಾಲೆಗಳ ಸಹಿತವಾಗಿ ರಾಜ್ಯದ ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲಾಡಳಿತ ಮಂಡಳಿಗಳು ಭಾನುವಾರ ಸಂಜೆಯೇ ಸೋಮವಾರದ ರಜೆ ಖಚಿತಪಡಿಸಿದ್ದರಿಂದ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಖಾಸಗಿ ಶಾಲಾಡಳಿತ ಮಂಡಳಿಗಳು ತರಗತಿ ಕೊಠಡಿ ಸಹಿತವಾಗಿ ಶಾಲೆಯ ಪರಿಕರಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಭಾನುವಾರವೇ ತೆಗೆದುಕೊಂಡಿದ್ದರು.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ, ಮಂಗಳೂರು, ರಾಯಚೂರು, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸಹಿತವಾಗಿ ರಾಜ್ಯದ ಬಹುತೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಭಾನುವಾರ ಸಂಜೆಯೇ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿದ್ದರು. ಹೀಗಾಗಿ ರಾಜ್ಯದ ಯಾವುದೇ ಶಾಲಾ, ಕಾಲೇಜು ಸೋಮವಾರ ತೆರೆದಿರಲಿಲ್ಲ. ಕೆಲವೊಂದು ಜಿಲ್ಲೆಯ ಸರ್ಕಾರಿ ಶಾಲಾ ಕಾಲೇಜುಗಳ ಶಿಕ್ಷಕ, ಉಪನ್ಯಾಸಕರು ಸೋಮವಾರವೂ ಶಾಲಾ ಕಾಲೇಜಿಗೆ ಹೋಗಿ ಆಡಳಿತಾತ್ಮಕ ಕೆಲಸ ನಡೆಸಿದ್ದಾರೆ. ಎಲ್ಲಿಯೂ ತರಗತಿಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆ ಖಚಿತ ಪಡಿಸಿದೆ.

ಖಾಸಗಿ ಶಾಲಾಡಳಿತ ಮಂಡಳಿಗಳು ಬಂದ್‌ನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಅಥವಾ ಶಾಲೆಯ ಪರಿಕರಗಳ ನಾಶವಾಗ ಬಹುದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳು ರಜಾ ಘೋಷಣೆ ಮಾಡುವ ಮೊದಲೇ ತಮ್ಮ ಶಾಲೆಗಳಿಗೆ ರಜೆ ನೀಡಿ, ಪಾಲಕ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದರ ಮಾಹಿತಿ ನೀಡಿದ್ದರು. ಹೀಗಾಗಿ ಸೋಮವಾರ ಖಾಸಗಿ ಶಾಲೆಗಳಲ್ಲೂ ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆದಿಲ್ಲ.

ಖಾಸಗಿ ಶಾಲೆಗಳು ಸೋಮವಾರ ತರಗತಿಯನ್ನು ಶನಿವಾರ ಮಧ್ಯಾಹ್ನ ಅಥವಾ ಬೇರ್ಯಾವುದಾದರು ಸರ್ಕಾರಿ ರಜಾ ದಿನದಲ್ಲಿ ನಡೆಸುವ ಸಾಧ್ಯತೆ ಇದೆ. ಆದರೆ, ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜಾ ಕಡಿತಗೊಳಿಸಿ, ಅದರಲ್ಲೇ ಸೋಮವಾರದ ತರಗತಿಯನ್ನು ಸೇರಿಸುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.