ಏಕ ವೇದಿಕೆಯಲ್ಲಿ ಗಣೇಶ-ಪಾಂಜಾ


Team Udayavani, Sep 11, 2018, 6:00 AM IST

ban11091801medn-r.jpg

ಹುಬ್ಬಳ್ಳಿ: ಈ ಬಾರಿ ಹುಬ್ಬಳ್ಳಿಯ ಕೆಲವೆಡೆ ಗಣೇಶನ ಜತೆಗೆ ಮುಸ್ಲಿಮರ “ಪಾಂಜಾ ದೇವರು’ ಕೂಡ ಪ್ರತಿಷ್ಠಾಪನೆಗೊಳ್ಳಲಿದ್ದಾನೆ!

36 ವರ್ಷಗಳ ನಂತರದಲ್ಲಿ ಗಣೇಶ ಉತ್ಸವ ಹಾಗೂ ಮೊಹರಂ ಹಬ್ಬ ಏಕಕಾಲಕ್ಕೆ ಬಂದಿದ್ದು, ನಗರದ ಕೆಲವು ಕಡೆ ಒಂದೇ ಮಂಟಪದಲ್ಲಿ ಗಣೇಶ ಮೂರ್ತಿ ಹಾಗೂ ಪಾಂಜಾ ದೇವರನ್ನು ಪ್ರತಿಷ್ಠಾಪಿಸಲು ಹಿಂದೂ-ಮುಸ್ಲಿಂ ಸಮುದಾಯದವರು ನಿರ್ಧರಿಸಿದ್ದಾರೆ. ಈ ಮೂಲಕ ಕೋಮು ಸೌಹಾರ್ದದ ಅರಿವು ಮೂಡಿಸಲು ಮುಂದಾಗಿದ್ದಾರೆ.

ಇಲ್ಲಿನ ಬಮ್ಮಾಪುರ ಓಣಿಯ ವಿಘ್ನೇಶ್ವರ ಉತ್ಸವ ಸಮಿತಿ ಹಾಗೂ ಸೈಯದ್‌ ಸಾದರ ಜಮಾತಗಳು ಎಲ್ಲ ಸಿದ್ಧತೆ ಮಾಡಿಕೊಂಡಿವೆ. ಓಣಿಯ ಹಿಂದೂ-ಮುಸ್ಲಿಂ ಸಮುದಾಯದ ಹಿರಿಯರು ಒಂದೇ ಮಂಟಪದಲ್ಲಿ ಗಣೇಶ ಹಾಗೂ ಮೊಹರಂನ ಪಾಂಜಾ ದೇವರುಗಳ ಪ್ರತಿಷ್ಠಾಪಿಸಲು ಚರ್ಚೆ ನಡೆಸಿದ್ದಾರೆ.

ಸೆ.13ರಂದು ಪ್ರತಿಷ್ಠಾಪನೆಗೊಳ್ಳಲಿರುವ ಗಣಪತಿ 9 ದಿನಗಳ ಕಾಲ ವಿಶೇಷ ಪೂಜೆಯೊಂದಿಗೆ ನಿರ್ಗಮಿಸಲಿದ್ದಾನೆ. ಇನ್ನು ಸೆ.16ರಂದು ಮೊಹರಂ ಹಬ್ಬದ ಪಾಂಜಾಗಳು ಪ್ರತಿಷ್ಠಾಪನೆಗೊಳ್ಳಲಿವೆ. ಇದಕ್ಕಾಗಿ ಈಗಾಗಲೇ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಮಂಡಳದ ಪದಾಧಿಕಾರಿಗಳಾದ ವಿನಾಯಕ ಹೊಸಕೇರಿ ಹಾಗೂ ಸುನೀಲ ಮಿರ್ಜಿ ಹೇಳಿದ್ದಾರೆ.

ಬಿಡ್ನಾಳ ಗ್ರಾಮದಲ್ಲೂ ಹಿಂದೂ-ಮುಸ್ಲಿಂ ಸಮುದಾಯದವರು ಕೂಡಿಕೊಂಡು ಒಂದೇ ವೇದಿಕೆಯಲ್ಲಿ ಗಣೇಶಮೂರ್ತಿ ಹಾಗೂ ಮೊಹರಂ ಹಬ್ಬದ ಪಾಂಜಾ ದೇವರುಗಳನ್ನು  ಪ್ರತಿಷ್ಠಾಪಿಸುತ್ತಿದ್ದಾರೆ. ಸುಮಾರು 20/25ರ ವೇದಿಕೆಯಲ್ಲಿ ಎರಡೂ ದೇವರುಗಳ ಪ್ರತಿಷ್ಠಾಪನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎನ್ನುತ್ತಾರೆ ಗ್ರಾಮದ ಹಿರಿಯರಾದ ಗುರು ಅಸುಂಡಿ, ಮಕು¤ಂಸಾಬ್‌ ಕುಸುಗಲ್ಲ, ಗಂಗಾಧರ ಕಲ್ಲಣ್ಣವರ, ಶೌಕತಅಲಿ ತುಗ್ಗಾನಟ್ಟಿ, ಮೋಹನ ನಂದಿಹಳ್ಳಿ, ಮಹ್ಮದಗೌಸ ನದಾಫ್.

ಕೇಶ್ವಾಪುರ ನಾಗಶೆಟ್ಟಿಕೊಪ್ಪದಲ್ಲಿರುವ ಮಾರುತಿ ದೇವಸ್ಥಾನ ಬಳಿ ಹಾಗೂ ಬೆಂಗೇರಿ ದರ್ಗಾ ಬಳಿ, ಸರಾಫ್ ಗಟ್ಟಿಯಲ್ಲಿ, ಹಳೇಹುಬ್ಬಳ್ಳಿಯ ಕೆಲ ಭಾಗದಲ್ಲಿ ಗಣೇಶ ಮೂರ್ತಿ ಹಾಗೂ ಮೊಹರಂ ದೇವರುಗಳನ್ನು ಅಕ್ಕಪಕ್ಕದಲ್ಲಿ ಪ್ರತಿಷ್ಠಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಏಕಕಾಲಕ್ಕೆ ಬಂದ ಹಬ್ಬಗಳು: ಗಣೇಶೋತ್ಸವ ಹಾಗೂ ಮೊಹರಂ ಹಬ್ಬಗಳು ಏಕಕಾಲದಲ್ಲಿ ಆಗಮಿಸುವುದು ವಿರಳ. ಪ್ರತಿ ವರ್ಷ ಹಿಂದೆ-ಮುಂದೆ ಬರುತ್ತಿದ್ದ ಹಬ್ಬಗಳು ಈ ಬಾರಿ ಒಂದೇ ಬಾರಿಗೆ ಆಗಮಿಸಿರುವುದು ವಿಶೇಷ. ಕಳೆದ 36 ವರ್ಷಗಳ ಹಿಂದೆ ಇದೇ ರೀತಿ ಈ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿದ್ದವು. ಆಗ ಎರಡೂ ಸಮುದಾಯದ ಹಿರಿಯರು ಕೂಡಿಕೊಂಡು ಹಬ್ಬ ಆಚರಿಸಿರುವುದನ್ನು ಬಮ್ಮಾಪುರ ಓಣಿಯ ಹಿರಿಯರಾದ ಹನುಮಂತ ಹೂಗಾರ, ಇಷ್ಟಲಿಂಗಪ್ಪಾ ಮಿರ್ಜಿ, ಈರಣ್ಣಾ ಬಡ್ನಿ, ನಾಮದೇವ ಪಾಸ್ತೆ, ಅಬ್ಟಾಸಲಿ ನರಗುಂದ, ಮಕು¤ಂ ಅಹ್ಮದ್‌ ಬ್ಯಾಹಟ್ಟಿ, ಬಾಬಾಜಾನ ಪಾನವಾಲೆ, ಮುಸ್ತಾಕಅಹ್ಮದ್‌ ತೋಟೆಗಾರ ಮುಂತಾದ ಹಿರಿಯರು ಸ್ಮರಿಸುತ್ತಾರೆ.

– ಬಸವರಾಜ ಹೂಗಾರ
 

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.