ಮಂಡ್ಯ: ಮತ್ತೆ ರೈತಾಹುತಿ;ಅಂತ್ಯಕ್ರಿಯೆಗೆ ಸಿಎಂ ಬರಬೇಕೆಂದು ಡೆತ್ನೋಟ್
Team Udayavani, Sep 11, 2018, 11:40 AM IST
ಮಂಡ್ಯ: ಜಿಲ್ಲೆಯಲ್ಲಿ ಕಳೆದೊಂದು ವಾರದಲ್ಲಿ ಮೂವರು ರೈತರು ಸಾಲಬಾಧೆಯಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸೋಮವಾರ ತಡರಾತ್ರಿ ಮದ್ದೂರಿನ ಮಾಲಗಾರನಹಳ್ಳಿ ಎಂಬಲ್ಲಿ ರಾಜೇಶ್ (45) ಎನ್ನುವ ರೈತ ನೇಣಿಗೆ ಶರಣಾಗಿದ್ದಾರೆ.
ರಾಜೇಶ್ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದಾರೆ. ನನ್ನ ಅಂತ್ಯಕ್ರಿಯೆಗೆ ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ನಟ ಅಂಬರೀಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನ ಸ್ವಾಮಿ,ನಗರಕೆರೆ ಪಂಚಾಯತ್ ಅಧ್ಯಕ್ಷ ನೆಲ್ಲಿ ಕೃಷ್ಣಣ್ಣ ಸಮ್ಮುಖದಲ್ಲಿ ನಡೆಯಬೇಕು ಎಂದು ಬರೆದಿದ್ದಾರೆ ಎಂದು ವರದಿಯಾಗಿದೆ, ಆದರೆ ಡೆತ್ ನೋಟ್ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದೆ.
ರಾಜೇಶ್ 5 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಮತ್ತು ಕೈಸಾಲವಾಗಿ ಸುಮಾರು 5 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ