ಕೈ ಶಾಸಕರು ರಾಜೀನಾಮೆ ಕೊಟ್ರೆ ನಾವು ಕಾರಣರಲ್ಲ
Team Udayavani, Sep 12, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿದರೂ ರಾಷ್ಟ್ರಪತಿ ಆಡಳಿತ ಜಾರಿಗೊಳ್ಳುವುದಿಲ್ಲ. ಲೋಕಸಭೆ ಚುನಾವಣೆ ವೇಳೆಯೂ ಸರ್ಕಾರ ಇರುತ್ತದೆ. ಆದರೆ, ಅದು ಕಾಂಗ್ರೆಸ್-ಜೆಡಿಎಸ್ ಸರ್ಕಾರವೇ ಅಥವಾ ಬೇರೆ ಸರ್ಕಾರವೇ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚಿಸಲು ಬಿಟ್ಟಿದ್ದೇವೆ.
ಶಾಸಕರನ್ನು ಸೆಳೆದು ಸರ್ಕಾರ ಅಸ್ತಿರಗೊಳಿಸುವುದಿಲ್ಲ. ಮೇಲಾಗಿ 104 ಶಾಸಕರನ್ನು ಹೊಂದಿರುವ ನಮಗೆ ಸರ್ಕಾರ ರಚಿಸಲು ಬಹುಮತವೂ ಇಲ್ಲ ಹಾಗೂ ಸರ್ಕಾರ ರಚಿಸುವ ಹುರುಪಿನಲ್ಲೂ ನಾವಿಲ್ಲ. ಆದರೆ, ಮಿತ್ರಪಕ್ಷಗಳು ಬೇರ್ಪಟ್ಟರೆ ಅಥವಾ ಕಾಂಗ್ರೆಸ್ ಶಾಸಕರು ರಾಜೀನಾಮೆ
ಕೊಟ್ಟರೆ ಅದು ಅವರ ಸಮಸ್ಯೆ. ಅವರೇ ಅದನ್ನು ಬಗೆಹರಿಸಬೇಕೇ ಹೊರತು ಬಿಜೆಪಿ ಸರ್ಕಾರ ಉರುಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಬಾರದು ಎಂದರು.
ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುವುದಿಲ್ಲ. ಒಂದೊಮ್ಮೆ ಅದಾಗಿಯೇ ಪತನಗೊಂಡರೆ ಸರ್ಕಾರ ರಚನೆ ಅವಕಾಶ ಬಳಸಿಕೊಳ್ಳದೆ ಇರಲು ನಾವು ಮೂರ್ಖರಲ್ಲ .
● ಸಿ.ಟಿ.ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು