ಕೈ ಶಾಸಕರು ರಾಜೀನಾಮೆ ಕೊಟ್ರೆ ನಾವು ಕಾರಣರಲ್ಲ
Team Udayavani, Sep 12, 2018, 6:00 AM IST
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿದರೂ ರಾಷ್ಟ್ರಪತಿ ಆಡಳಿತ ಜಾರಿಗೊಳ್ಳುವುದಿಲ್ಲ. ಲೋಕಸಭೆ ಚುನಾವಣೆ ವೇಳೆಯೂ ಸರ್ಕಾರ ಇರುತ್ತದೆ. ಆದರೆ, ಅದು ಕಾಂಗ್ರೆಸ್-ಜೆಡಿಎಸ್ ಸರ್ಕಾರವೇ ಅಥವಾ ಬೇರೆ ಸರ್ಕಾರವೇ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚಿಸಲು ಬಿಟ್ಟಿದ್ದೇವೆ.
ಶಾಸಕರನ್ನು ಸೆಳೆದು ಸರ್ಕಾರ ಅಸ್ತಿರಗೊಳಿಸುವುದಿಲ್ಲ. ಮೇಲಾಗಿ 104 ಶಾಸಕರನ್ನು ಹೊಂದಿರುವ ನಮಗೆ ಸರ್ಕಾರ ರಚಿಸಲು ಬಹುಮತವೂ ಇಲ್ಲ ಹಾಗೂ ಸರ್ಕಾರ ರಚಿಸುವ ಹುರುಪಿನಲ್ಲೂ ನಾವಿಲ್ಲ. ಆದರೆ, ಮಿತ್ರಪಕ್ಷಗಳು ಬೇರ್ಪಟ್ಟರೆ ಅಥವಾ ಕಾಂಗ್ರೆಸ್ ಶಾಸಕರು ರಾಜೀನಾಮೆ
ಕೊಟ್ಟರೆ ಅದು ಅವರ ಸಮಸ್ಯೆ. ಅವರೇ ಅದನ್ನು ಬಗೆಹರಿಸಬೇಕೇ ಹೊರತು ಬಿಜೆಪಿ ಸರ್ಕಾರ ಉರುಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಬಾರದು ಎಂದರು.
ಮೈತ್ರಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುವುದಿಲ್ಲ. ಒಂದೊಮ್ಮೆ ಅದಾಗಿಯೇ ಪತನಗೊಂಡರೆ ಸರ್ಕಾರ ರಚನೆ ಅವಕಾಶ ಬಳಸಿಕೊಳ್ಳದೆ ಇರಲು ನಾವು ಮೂರ್ಖರಲ್ಲ .
● ಸಿ.ಟಿ.ರವಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ