ಕೃಷಿ ವಿಶ್ವವಿದ್ಯಾಲಯಗಳ ಮೌಲ್ಯಮಾಪನ?
Team Udayavani, Sep 12, 2018, 6:00 AM IST
ಬೆಂಗಳೂರು: ಕೃಷಿ ವಿದ್ಯಾರ್ಥಿಗಳ ಜತೆಗೆ ಆಯಾ ವಿಶ್ವವಿದ್ಯಾಲಯಗಳನ್ನೂ ಮೌಲ್ಯಮಾಪನಕ್ಕೆ ಒಳಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಗಳುಲಯಗಳ ಸ್ಥಿತಿಗತಿ ಮತ್ತು ಕಾರ್ಯವೈಖರಿ ಕುರಿತು ವಿವಿಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸುವ ಆಲೋಚನೆಯಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು.
ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದ್ದರೂ, ರೈತರ ಜಮೀನಿನಲ್ಲಿ ಇದು ನಿರೀಕ್ಷಿತ ಮಟ್ಟದಲ್ಲಿ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೃಷಿ
ವಿಶ್ವವಿದ್ಯಾಲಯಗಳ ಸಾಮರ್ಥ್ಯ ಸುಧಾರಣೆ ಆಗಬೇಕಿದೆ ಎಂದ ಅವರು, ವಿಶ್ವವಿದ್ಯಾಲಯಗಳ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮೌಲ್ಯಮಾಪನ ವ್ಯವಸ್ಥೆ
ಪರಿಚಯಿಸುವ ಅಗತ್ಯವಿದೆ. ಈ ಸಂಬಂಧ ನೀತಿಗಳಲ್ಲಿ ಬದಲಾವಣೆ ತರುವ ಚಿಂತನೆಯಿದೆ ಎಂದು ಹೇಳಿದರು. ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದ ಆವರಣದಲ್ಲಿ ಮಂಗಳವಾರ ಕೃಷಿ ಇಂಜಿನಿಯರಿಂಗ್ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕೃಷಿ ಕ್ಷೇತ್ರ ಎದುರಿಸುತ್ತಿರುವ ಅತಿದೊಡ್ಡ ಸವಾಲು ನೀರಿನ ನಿರ್ವಹಣೆ ಮತ್ತು ಭೂಮಿಯ ಸದ್ಬಳಕೆ. ಇದಕ್ಕಾಗಿ ಈಗಿರುವ ನಮ್ಮ ನೀತಿಗಳು ಪರಿಹಾರ
ಆಗಬಹುದೇ? ಈ ಬಗ್ಗೆ ಚಿಂತನೆ ನಡೆಸುವ ಅವಶ್ಯಕತೆಯಿದೆ. ಅಷ್ಟೇ ಅಲ್ಲ, ಕೃಷಿ ವಿವಿಗಳ ದೃಷ್ಟಿಕೋನ ಕೂಡ ಬದಲಾಗಬೇಕು. ಕೃಷಿ ಎದುರಿಸುತ್ತಿರುವ ಈ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತು ನೀಡಬೇಕಿದೆ ಎಂದರು.
ಮಾದರಿ ಕೃಷಿ ನೀತಿಗೆ ಸಿದ್ಧತೆ: ಅಲ್ಲದೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಮತ್ತೂಂದು ಪ್ರಮುಖ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ವಿವಿಧ ಕಾರ್ಯಕ್ರಮಗಳಡಿ ಪೂರಕ ವಾತಾವರಣ ಇರುವ ಕಡೆಗಳಲ್ಲಿ ಸಂಸ್ಕರಣಾ ಘಟಕಗಳನ್ನು ತೆರೆಯಲು ಉದ್ದೇಶಿಸಿದೆ. ಜತೆಗೆ ಸರ್ಕಾರ
ಈಗಾಗಲೇ ಘೋಷಿಸಿದಂತೆ ಮಾದರಿ ಕೃಷಿ ನೀತಿ ರೂಪಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಇಸ್ರೇಲ್ಗೆ ತೆರಳಿ, ಅಧ್ಯಯನ ಕೂಡ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇಸ್ರೇಲ್ನಲ್ಲಿ ಶೇ. 60ರಷ್ಟು ಮರುಭೂಮಿ ಪ್ರದೇಶವಿದೆ. ಗರಿಷ್ಠ ಮಳೆ ಅಲ್ಲಿ ಸಾವಿರ ಮಿ.ಮೀ. ಕೂಡ ದಾಟುವುದಿಲ್ಲ. ಆದಾಗ್ಯೂ ಅಲ್ಲಿನ ನೀರಿನ
ನಿರ್ವಹಣಾ ವ್ಯವಸ್ಥೆ ಮತ್ತು ತಂತ್ರಜ್ಞಾನಗಳ ಸಮರ್ಪಕ ಬಳಕೆಯಿಂದ ಅತ್ಯಧಿಕ ಉತ್ಪಾದನೆ ಮಾಡಲಾಗುತ್ತಿದೆ. ನೀರಿನ ಮರುಬಳಕೆ ಪ್ರಮಾಣ ಅಲ್ಲಿ ಶೇ. 85ರಷ್ಟಿದ್ದು, ಇದನ್ನು ಶೇ. 90ಕ್ಕೆ ಹೆಚ್ಚಿಸುವ ಗುರಿಯನ್ನು ಇಸ್ರೇಲ್ ಹೊಂದಿದೆ. ಇದು ನಮಗೆ ಮಾದರಿ ಆಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ