ಕೃಷಿ ವಿಶ್ವವಿದ್ಯಾಲಯಗಳ ಮೌಲ್ಯಮಾಪನ?
Team Udayavani, Sep 12, 2018, 6:00 AM IST
ಬೆಂಗಳೂರು: ಕೃಷಿ ವಿದ್ಯಾರ್ಥಿಗಳ ಜತೆಗೆ ಆಯಾ ವಿಶ್ವವಿದ್ಯಾಲಯಗಳನ್ನೂ ಮೌಲ್ಯಮಾಪನಕ್ಕೆ ಒಳಪಡಿಸಲು ಸರ್ಕಾರ ಚಿಂತನೆ ನಡೆಸಿದೆ. ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ವಿಶ್ವವಿದ್ಯಾಗಳುಲಯಗಳ ಸ್ಥಿತಿಗತಿ ಮತ್ತು ಕಾರ್ಯವೈಖರಿ ಕುರಿತು ವಿವಿಗಳನ್ನು ಮೌಲ್ಯಮಾಪನಕ್ಕೆ ಒಳಪಡಿಸುವ ಆಲೋಚನೆಯಿದೆ ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು.
ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಪ್ರಗತಿ ಸಾಧಿಸಿದ್ದರೂ, ರೈತರ ಜಮೀನಿನಲ್ಲಿ ಇದು ನಿರೀಕ್ಷಿತ ಮಟ್ಟದಲ್ಲಿ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕೃಷಿ
ವಿಶ್ವವಿದ್ಯಾಲಯಗಳ ಸಾಮರ್ಥ್ಯ ಸುಧಾರಣೆ ಆಗಬೇಕಿದೆ ಎಂದ ಅವರು, ವಿಶ್ವವಿದ್ಯಾಲಯಗಳ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮೌಲ್ಯಮಾಪನ ವ್ಯವಸ್ಥೆ
ಪರಿಚಯಿಸುವ ಅಗತ್ಯವಿದೆ. ಈ ಸಂಬಂಧ ನೀತಿಗಳಲ್ಲಿ ಬದಲಾವಣೆ ತರುವ ಚಿಂತನೆಯಿದೆ ಎಂದು ಹೇಳಿದರು. ನಗರದ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದ ಆವರಣದಲ್ಲಿ ಮಂಗಳವಾರ ಕೃಷಿ ಇಂಜಿನಿಯರಿಂಗ್ ಕಾಲೇಜು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕೃಷಿ ಕ್ಷೇತ್ರ ಎದುರಿಸುತ್ತಿರುವ ಅತಿದೊಡ್ಡ ಸವಾಲು ನೀರಿನ ನಿರ್ವಹಣೆ ಮತ್ತು ಭೂಮಿಯ ಸದ್ಬಳಕೆ. ಇದಕ್ಕಾಗಿ ಈಗಿರುವ ನಮ್ಮ ನೀತಿಗಳು ಪರಿಹಾರ
ಆಗಬಹುದೇ? ಈ ಬಗ್ಗೆ ಚಿಂತನೆ ನಡೆಸುವ ಅವಶ್ಯಕತೆಯಿದೆ. ಅಷ್ಟೇ ಅಲ್ಲ, ಕೃಷಿ ವಿವಿಗಳ ದೃಷ್ಟಿಕೋನ ಕೂಡ ಬದಲಾಗಬೇಕು. ಕೃಷಿ ಎದುರಿಸುತ್ತಿರುವ ಈ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಒತ್ತು ನೀಡಬೇಕಿದೆ ಎಂದರು.
ಮಾದರಿ ಕೃಷಿ ನೀತಿಗೆ ಸಿದ್ಧತೆ: ಅಲ್ಲದೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಮತ್ತೂಂದು ಪ್ರಮುಖ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ವಿವಿಧ ಕಾರ್ಯಕ್ರಮಗಳಡಿ ಪೂರಕ ವಾತಾವರಣ ಇರುವ ಕಡೆಗಳಲ್ಲಿ ಸಂಸ್ಕರಣಾ ಘಟಕಗಳನ್ನು ತೆರೆಯಲು ಉದ್ದೇಶಿಸಿದೆ. ಜತೆಗೆ ಸರ್ಕಾರ
ಈಗಾಗಲೇ ಘೋಷಿಸಿದಂತೆ ಮಾದರಿ ಕೃಷಿ ನೀತಿ ರೂಪಿಸಲು ಸಿದ್ಧತೆ ನಡೆಸಿದೆ. ಈ ಸಂಬಂಧ ಇಸ್ರೇಲ್ಗೆ ತೆರಳಿ, ಅಧ್ಯಯನ ಕೂಡ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇಸ್ರೇಲ್ನಲ್ಲಿ ಶೇ. 60ರಷ್ಟು ಮರುಭೂಮಿ ಪ್ರದೇಶವಿದೆ. ಗರಿಷ್ಠ ಮಳೆ ಅಲ್ಲಿ ಸಾವಿರ ಮಿ.ಮೀ. ಕೂಡ ದಾಟುವುದಿಲ್ಲ. ಆದಾಗ್ಯೂ ಅಲ್ಲಿನ ನೀರಿನ
ನಿರ್ವಹಣಾ ವ್ಯವಸ್ಥೆ ಮತ್ತು ತಂತ್ರಜ್ಞಾನಗಳ ಸಮರ್ಪಕ ಬಳಕೆಯಿಂದ ಅತ್ಯಧಿಕ ಉತ್ಪಾದನೆ ಮಾಡಲಾಗುತ್ತಿದೆ. ನೀರಿನ ಮರುಬಳಕೆ ಪ್ರಮಾಣ ಅಲ್ಲಿ ಶೇ. 85ರಷ್ಟಿದ್ದು, ಇದನ್ನು ಶೇ. 90ಕ್ಕೆ ಹೆಚ್ಚಿಸುವ ಗುರಿಯನ್ನು ಇಸ್ರೇಲ್ ಹೊಂದಿದೆ. ಇದು ನಮಗೆ ಮಾದರಿ ಆಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ