ರಾಜ್ಯದಲ್ಲಿ ತೈಲ ದರ ಶೀಘ್ರ ಇಳಿಕೆ
Team Udayavani, Sep 12, 2018, 6:00 AM IST
ಹೊಳೆನರಸೀಪುರ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಸುವ ಸಂಬಂಧ ಪೂರಕ ತೀರ್ಮಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸದ್ಯದಲ್ಲೇ
ಪ್ರಕಟಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಮಂಗಳವಾರ “ನಮ್ಮೂರ ದ್ಯಾವಪ್ಪ’ ಪುಸ್ತಕ ಬಿಡುಗಡೆ ಮಾಡಿದ ನಂತರ ಸುದ್ದಿಗಾರಗೊಂದಿಗೆ ಅವರು ಮಾತನಾಡಿದರು. ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯಿಂದ
ಶ್ರೀಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ. ಈ ಅಂಶವನ್ನು ಕೇಂದ್ರ ಸರ್ಕಾರಕ್ಕೆ ಮನಮುಟ್ಟಿಸುವ ಸಲುವಾಗಿ ಸೋಮವಾರ ಭಾರತ್ ಬಂದ್ ಸಹ ನಡೆಸಲಾಗಿದೆ. ಈಗಾಗಲೆ ಕೆಲವು ರಾಜ್ಯಗಳು ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲದ ಬೆಲೆ ಇಳಿಸುವ ನಿರ್ಧಾರ ಕೈಗೊಂಡಿವೆ. ಕರ್ನಾಟಕದಲ್ಲಿಯೂ ಕುಮಾರಸ್ವಾಮಿ ಅವರು ತೈಲ ದರ ಇಳಿಸುವ ನಿಟ್ಟಿನಲ್ಲಿ ತೆರಿಗೆ ಇಳಿಸುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ರೈತರ ಸಾಲ ಮನ್ನಾಕ್ಕಾಗಿ 46 ಸಾವಿರ ಕೋಟಿ ರೂ. ಹೊಂದಿಸಿಕೊಳ್ಳುವ ದೊಡ್ಡ ಜವಾಬ್ದಾರಿ ರಾಜ್ಯಸರ್ಕಾರದ ಮೇಲಿದೆ. ಹಾಗಾಗಿ ಪೆಟ್ರೋಲ್, ಡೀಸೆಲ್ ದರ ಇಳಿಸುವ ನಿರ್ಧಾರವನ್ನು ಏಕಾಏಕಿ ಕೈಗೊಳ್ಳುವುದು ಮುಖ್ಯಮಂತ್ರಿಯವರಿಗೆ ಕಷ್ಟವಾಗಿದೆ ಎಂದರು.
ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿನ ಪರಿಹಾರ ಕಾರ್ಯ ಗಳಿಗೆ ನೆರವು ನೀಡಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಎರಡು ತಂಡಗಳು ರಾಜ್ಯಕ್ಕೆ ಆಗಮಿಸಿ, ಪರಿಶೀಲನೆ ನಡೆಸಲಿವೆ. ಬಳಿಕ, ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಲಿದೆ.
● ಎಚ್.ಡಿ.ಎಚ್.ಡಿ.ದೇವೇಗೌಡ ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ