ರಾಜ್ಯದಲ್ಲಿ ತೈಲ ದರ ಶೀಘ್ರ ಇಳಿಕೆ
Team Udayavani, Sep 12, 2018, 6:00 AM IST
ಹೊಳೆನರಸೀಪುರ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಸುವ ಸಂಬಂಧ ಪೂರಕ ತೀರ್ಮಾನವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಸದ್ಯದಲ್ಲೇ
ಪ್ರಕಟಿಸಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ತಿಳಿಸಿದರು. ನಗರದಲ್ಲಿ ಮಂಗಳವಾರ “ನಮ್ಮೂರ ದ್ಯಾವಪ್ಪ’ ಪುಸ್ತಕ ಬಿಡುಗಡೆ ಮಾಡಿದ ನಂತರ ಸುದ್ದಿಗಾರಗೊಂದಿಗೆ ಅವರು ಮಾತನಾಡಿದರು. ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲದ ಬೆಲೆ ಏರಿಕೆಯಿಂದ
ಶ್ರೀಸಾಮಾನ್ಯರು ಜೀವನ ನಡೆಸುವುದು ಕಷ್ಟವಾಗಿದೆ. ಈ ಅಂಶವನ್ನು ಕೇಂದ್ರ ಸರ್ಕಾರಕ್ಕೆ ಮನಮುಟ್ಟಿಸುವ ಸಲುವಾಗಿ ಸೋಮವಾರ ಭಾರತ್ ಬಂದ್ ಸಹ ನಡೆಸಲಾಗಿದೆ. ಈಗಾಗಲೆ ಕೆಲವು ರಾಜ್ಯಗಳು ಪೆಟ್ರೋಲ್, ಡಿಸೇಲ್ ಮತ್ತು ಅಡುಗೆ ಅನಿಲದ ಬೆಲೆ ಇಳಿಸುವ ನಿರ್ಧಾರ ಕೈಗೊಂಡಿವೆ. ಕರ್ನಾಟಕದಲ್ಲಿಯೂ ಕುಮಾರಸ್ವಾಮಿ ಅವರು ತೈಲ ದರ ಇಳಿಸುವ ನಿಟ್ಟಿನಲ್ಲಿ ತೆರಿಗೆ ಇಳಿಸುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. ರೈತರ ಸಾಲ ಮನ್ನಾಕ್ಕಾಗಿ 46 ಸಾವಿರ ಕೋಟಿ ರೂ. ಹೊಂದಿಸಿಕೊಳ್ಳುವ ದೊಡ್ಡ ಜವಾಬ್ದಾರಿ ರಾಜ್ಯಸರ್ಕಾರದ ಮೇಲಿದೆ. ಹಾಗಾಗಿ ಪೆಟ್ರೋಲ್, ಡೀಸೆಲ್ ದರ ಇಳಿಸುವ ನಿರ್ಧಾರವನ್ನು ಏಕಾಏಕಿ ಕೈಗೊಳ್ಳುವುದು ಮುಖ್ಯಮಂತ್ರಿಯವರಿಗೆ ಕಷ್ಟವಾಗಿದೆ ಎಂದರು.
ಅತಿವೃಷ್ಟಿಯಿಂದ ಹಾನಿಯಾಗಿರುವ ಪ್ರದೇಶಗಳಲ್ಲಿನ ಪರಿಹಾರ ಕಾರ್ಯ ಗಳಿಗೆ ನೆರವು ನೀಡಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಎರಡು ತಂಡಗಳು ರಾಜ್ಯಕ್ಕೆ ಆಗಮಿಸಿ, ಪರಿಶೀಲನೆ ನಡೆಸಲಿವೆ. ಬಳಿಕ, ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಲಿದೆ.
● ಎಚ್.ಡಿ.ಎಚ್.ಡಿ.ದೇವೇಗೌಡ ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ