ಜಾರಕಿಹೊಳಿಗೆ ವರ್ಗಾವಣೆ ಕೊಡುಗೆ


Team Udayavani, Sep 13, 2018, 6:00 AM IST

jarkiholi-brothers.jpg

ಬೆಂಗಳೂರು: ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಗೊಂದಲದ ಮೂಲಕ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಕಂಟಕವಾಗಿರುವ ಜಾರಕಿಹೊಳಿ ಸಹೋದರರ ವರ್ಗಾವಣೆ ಬೇಡಿಕೆಗಳಿಗೆ ಮಣಿಯುವ ಮೂಲಕ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಆರಂಭವಾಗಿದೆ.

ರಮೇಶ್‌ ಜಾರಕಿಹೊಳಿ ಅವರ ಹೊಣೆಗಾರಿಕೆ ಪೌರಾಡಳಿತ ಇಲಾಖೆಯ ವಿವಿಧ ಗ್ರೇಡ್‌ನ‌ 141 ಅಧಿಕಾರಿಗಳನ್ನು ಒಂದೇ ದಿನ ವರ್ಗಾವಣೆ ಮಾಡುವ ಮೂಲಕ ಅವರ ಬೇಡಿಕೆಗೆ ಮುಖ್ಯಮಂತ್ರಿ ಸ್ಪಂದಿಸುವ ಪ್ರಯತ್ನ ನಡೆಸಿದ್ದಾರೆ.

ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗೆ ಕಡತ ಕಳುಹಿಸಿ ಒಂದು ತಿಂಗಳು ಕಳೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇದ್ದುದರಿಂದ ಸಚಿವ ರಮೇಶ್‌ ಜಾರಕಿಹೊಳಿ ಅಸಮಾಧಾನಗೊಂಡಿದ್ದರು. ಆದರೆ ಆ ಅಸಮಾಧಾನ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ಸಂದರ್ಭದಲ್ಲಿ ಸ್ಫೋಟಗೊಂಡಿತ್ತು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿದ್ದ ರಮೇಶ್‌ ಜಾರಕಿಹೊಳಿ ವರ್ಗಾವಣೆ ವಿಚಾರದಲ್ಲಿ ಹಿನ್ನಡೆಯಾಗಿದ್ದರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದರು.
ನಾವು ಹೇಳಿದ ಅಧಿಕಾರಿಯ ಬದಲು ಬೆಳಗಾವಿ ಜಿಲ್ಲೆಯ ಅಧಿಕಾರಿಗಳನ್ನು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಸೂಚನೆ ಮೇರೆಗೆ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ ಶಿಫಾರಸ್ಸು ಮಾಡಿದವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಮಾಹಿತಿಯನ್ನು ಪರಮೇಶ್ವರ್‌ ಹಾಗೂ ದಿನೇಶ್‌ ಗುಂಡೂರಾವ್‌ ಮುಖ್ಯಮಂತ್ರಿಯವರ ಗಮನಕ್ಕೂ ತಂದಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಬುಧವಾರ ಪೌರಾಡಳಿತ ಇಲಾಖೆಯ 53 ಮುಖ್ಯಾಯುಕ್ತರು, 14 ಸಹಾಯಕ ಕಾರ್ಯಪಾಲಕ ಇಂಜನಿಯರ್‌ಗಳು, 6 ಜನ ಪೌರಾಯುಕ್ತರು, 7 ಯೋಜನಾ ನಿರ್ದೇಶಕರು, 1 ಕಾರ್ಯಪಾಲಕ ಎಂಜನೀಯರ್‌, 8 ಸಮುದಾಯ ಸಂಘಟನಾಧಿಕಾರಿಗಳು, 36 ಸಹಾಯಕ ಎಂಜನೀಯರ್‌ಗಳು, 8 ಪರಿಸರ ಎಂಜನಿಯರ್‌ಗಳು, 8 ಲೆಕ್ಕಾಧಿಕಾರಿಗಳ ವರ್ಗಾವಣೆ ಮಾಡಲು ಸೂಚಿಸಿದ್ದರು. ಅದರಂತೆ ಸಂಜೆ ಆದೇಶ ಹೊರಡಿಸಲಾಗಿದೆ

ಈ ಹಿಂದೆ 2006 ರಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲಿ ಬೆಳಗಾವಿ ಜಾರಕಿಹೊಳಿ ಸಹೋದರರ ರೀತಿಯಲ್ಲಿಯೇ ಬಳ್ಳಾರಿಯ ರೆಡ್ಡಿ ಸಹೋದರರು ಅಲ್ಲಿನ ಜಿಲ್ಲಾಧಿಕಾರಿ ಹಾಗೂ ಪೊಲಿಸ್‌ ವರಿಷ್ಠಾಧಿಕಾರಿಯನ್ನು ತಮಗೆ ಬೇಕಾದವರನ್ನು ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯ ಮೇಲೆ ಒತ್ತಡ ಹೇರಿದ್ದರು. ಅದಕ್ಕೆ ಒಪ್ಪದಿದ್ದಾಗ 150 ಕೋಟಿ ರೂಪಾಯಿ ಗಣಿ ಲಂಚ ಆರೋಪವೂ ಕೇಳಿ ಬಂದಿತು. ಆ ಪ್ರಕರಣ ಸಮ್ಮಿಶ್ರ ಸರ್ಕಾರದ ಪತನಕ್ಕೂ ನಾಂದಿಯಾಯಿತು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.