ಗಣೇಶನ ಬದಲು ಮನೆಗೆ ಬಂದ ಬಸವಣ್ಣ
Team Udayavani, Sep 15, 2018, 6:00 AM IST
ಬೈಲಹೊಂಗಲ: ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಗುರುವಾರ ಗಣಪತಿ ಮೂರ್ತಿಗಳ ಬದಲು ಬಸವೇಶ್ವರ
ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.
ಗ್ರಾಮದ ಹಲವರು ತಾವು ನಿರ್ಮಿಸಿದ ನೂತನ ಮನೆಗಳಿಗೆ ಗುರು ಬಸವಣ್ಣನವರ ಮೂರ್ತಿಗಳನ್ನು ಗಣೇಶ ಹಬ್ಬದಂದು
ಪ್ರತಿಷ್ಠಾಪಿಸಬೇಕೆಂದು ಕೂಡಲಸಂಗಮದ ಬಸವ ಧರ್ಮಪೀಠದಿಂದ ಮೂರ್ತಿಗಳನ್ನು ಖರೀದಿಸಿ, ಗ್ರಾಮದ ಜಗದ್ಗುರು ಮಡಿವಾಳೇಶ್ವರ ಶಿವಯೋಗಿಗಳ ಮಠದಲ್ಲಿ ಇರಿಸಿದ್ದರು.
ಪ್ರತಿಷ್ಠಾಪನೆ ಕಾರ್ಯಕ್ಕೆ ಜಗದ್ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರು ಪ್ರಜ್ಞಾವಂತರಾಗುತ್ತಿದ್ದು ಮೌಡ್ಯದಿಂದ ದೂರ ಸರಿಯುತ್ತಿದ್ದಾರೆ.
ಶರಣರ ಸಂದೇಶಗಳು ಅನುಷ್ಠಾನಗೊಳ್ಳುವ ಕಾಲ ಸಮೀಪಿಸುತ್ತಿದೆ. ಗ್ರಾಮದ ಕೆಲ ಲಿಂಗಾಯತರು ಗಣೇಶ ಮೂರ್ತಿ ಬದಲಾಗಿ ಬಸವಣ್ಣನವರ ಮೂರ್ತಿಗಳನ್ನು ಮನೆಗಳಲ್ಲಿ ಪ್ರತಿಷ್ಠಾಪಿಸಲು ಮುಂದಾಗಿರುವುದು ವಿಶೇಷವೆನಿಸಿದೆ ಎಂದರು.
ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಪೂಜೆ, ವಚನ ಪ್ರಾರ್ಥನೆ, ಭಜನಾ ಕಾರ್ಯಕ್ರಮ ನೆರವೇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಜನೆ ಮಾಡಿ ಮೂರ್ತಿಗಳನ್ನು ತಂತಮ್ಮ ಮನೆಗಳಿಗೆ ತೆಗೆದುಕೊಂಡು ಹೋದರು. ಗ್ರಾಮದ ಬಸವ ಕೇಂದ್ರದ ಸದಸ್ಯರಿಂದ ಶಿರಸಂಗಿ ಲಿಂಗರಾಜ ದೇಸಾಯಿ ಹಾಗೂ ದಾಸೋಹಮೂರ್ತಿ ಡಾ.ಶಿವಬಸವ ಮಹಾಸ್ವಾಮೀಜಿಗಳ ಲಿಂಗೈಕ್ಯ ಸ್ಮರಣೆ ನಿಮಿತ್ತ ಪ್ರಾರ್ಥನೆ, ಅನುಭಾವ ಹಾಗೂ ಮೌನಾಚರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ