ನೋ ಆಪರೇಷನ್‌,ಓನ್ಲಿ ಗವರ್ನಮೆಂಟ್‌


Team Udayavani, Sep 15, 2018, 6:00 AM IST

no-operation.jpg

ಬೆಂಗಳೂರು: ಯಡಿಯೂರಪ್ಪ ನೇತೃತ್ವದಲ್ಲಿ ಈ ಹಿಂದೆ ನಡೆದ “ಆಪರೇಷನ್‌ ಕಮಲ’ ಪ್ರಯೋಗಕ್ಕೆ ಕೈ ಹಾಕದೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಒಪ್ಪಿ ಬರುವ ಶಾಸಕರನ್ನು ಮಾತ್ರ ಸೆಳೆದು ಸ್ವತಂತ್ರ ಸರ್ಕಾರ ನಡೆಸಲು ಬಿಜೆಪಿ ಹೈಕಮಾಂಡ್‌ ಸ್ಪಷ್ಟ ಸೂಚನೆ ನೀಡಿದೆ.

ಈಗಾಗಲೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳಯದ 26 ಶಾಸಕರು ಬಿಜೆಪಿ ಸಂಪರ್ಕದಲಿದ್ದು, ಅವರಿಗೆ ಪ್ರಧಾನಿ ಮೋದಿ ನಾಯಕತ್ವದಲ್ಲಿ ನಂಬಿಕೆಯಿಟ್ಟು ಬರುವುದಾದರೆ ಸ್ವಾಗತವಿದೆ ಎಂಬ ಸಂದೇಶ ರವಾನಿಸಲಾಗಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

“ಆಪರೇಷನ್‌ ಕಮಲ’ ಮಾಡಿ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸುವ ಬದಲಿಗೆ ದೋಸ್ತಿ ಸರ್ಕಾರದಲ್ಲಿ ಬಂಡಾಯಗಳು ಪುಟಿದೇಳುವುದನ್ನು ಬಳಸಿಕೊಂಡು ಮುಂದಿನ ಸರ್ಕಾರ ರಚಿ ಸ ಬೇಕೆನ್ನುವುದು ಹೈಕಮಾಂಡ್‌ ಉದ್ದೇಶವೆನ್ನಲಾಗಿದೆ. ಜತೆಗೆ, ಯಡಿಯೂರಪ್ಪ ಅವರು ಪ್ರಭಾವಿ ಲಿಂಗಾಯತ ಮುಖಂಡರಾಗಿದ್ದು, ಸ್ವತಂತ್ರವಾಗಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಂಪೂರ್ಣ ನಾಯಕತ್ವವನ್ನು ವಹಿಸಲು ನಿರ್ಧರಿಸಲಾಗಿದೆ. ಸರ್ಕಾರ ರಚನೆಗೆ ಯಾವುದೇ ಸ್ವತಂತ್ರ ನಿರ್ಧಾರ ಕೈಗೊಳ್ಳಲೂ ಅವರಿಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಪಕ್ಷದಿಂದ ಇತರ ಪ್ರಭಾವಿ ಮುಖಂಡರಿಂದ ಆಗಬಹುದಾದ ಪ್ರತಿರೋಧವನ್ನೂ ಲೆಕ್ಕಿಸದೇ ಇರಲೂ ಸೂಚಿಸಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಮೂಲಗಳ ಪ್ರಕಾರ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬಳಿಕ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಪಕ್ಷದ ದಕ್ಷಿಣ ಹೆಬ್ಟಾಗಿಲನ್ನು ಮತ್ತೆ ಪ್ರವೇಶಿಸಲು ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ, ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರ ಪಡೆಯಿತಾದರೂ ಬಹುಮತ ಸಾಬೀತಿಗೆ ವಿಫ‌ಲವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರ್ಕಾರದಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟವನ್ನೇ ರಾಜಕೀಯ ದಾಳವಾಗಿ ಉರುಳಿಸಲು ಬಿಜೆಪಿ ನಿರ್ಧರಿಸಿದೆ.

ಹೈಕಮಾಂಡ್‌ ಮರುಜೀವ:
ಒಂದು ಹಂತದಲ್ಲಿ ಆಪರೇಷನ್‌ ಕಮಲ ನಡೆಸಲು ಸಿದ್ಧರಾಗಿದ್ದ ರಾಜ್ಯ ಮುಖಂಡರನ್ನು ಪಕ್ಷದ ಹೈಕಮಾಂಡ್‌ ತಟಸ್ಥಗೊಳಿಸಿತ್ತು. ಆದರೆ, ಇತ್ತೀಚೆಗೆ ಸಮ್ಮಿಶ್ರ ಸರ್ಕಾರದಲ್ಲಿ ನಡೆಯುತ್ತಿರುವ ಡಿ.ಕೆ. ಶಿವಕುಮಾರ್‌- ಜಾರಕಿಹೊಳಿ ಸಹೋದರರ “ಬೆಳಗಾವಿ ರಾಜಕೀಯ’, ಲಿಂಗಾಯತ ಮುಖಂಡ ಎಂ.ಬಿ. ಪಾಟೀಲ್‌ ನೇತೃತ್ವದ ತಂಡದ ಅತೃಪ್ತಿ,  ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಗೂಢ ಹೇಳಿಕೆಗಳು, ಉತ್ತರ ಕರ್ನಾಟಕ ಕುರಿತ ಸಮ್ಮಿಶ್ರ ಸರ್ಕಾರದ ನಡೆ ಮತ್ತಿತರ ಘಟನೆಗಳು  ಕುಮಾರಸ್ವಾಮಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿವೆ.  ಈ ಹಿನ್ನೆಲೆಯಲ್ಲಿ ಮತ್ತೆ ಸರ್ಕಾರ ಸ್ಥಾಪಿಸುವ ರಾಜ್ಯ ಬಿಜೆಪಿ ಕನಸಿಗೆ ಹೈಕಮಾಂಡ್‌ ಮರುಜೀವ ನೀಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಆದರೆ, ಸಮ್ಮಿಶ್ರ ಸರ್ಕಾರವನ್ನು “ಆಪರೇಷನ್‌ ಕಮಲ’ ಮೂಲಕ ಪತನಗೊಳಿಸುವುದನ್ನು ಹೈಕಮಾಂಡ್‌ ಒಪ್ಪಿಲ್ಲ ಎನ್ನಲಾಗಿದೆ. ಬದಲಿಗೆ ತನ್ನಷ್ಟಕ್ಕೆ ತಾನೇ ಪತನಗೊಳ್ಳುವ ಸರ್ಕಾರದ ಅತೃಪ್ತ ಶಾಸಕರು ಬಿಜೆಪಿ ಸೇರಿದರೆ, ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಮುಂದಾಗಿದೆ. ಜತೆಗೆ, ಅತೃಪ್ತ ಶಾಸಕರ ರಾಜೀನಾಮೆ ಬಳಿಕದ ಒಟ್ಟಾರೆ ಶಾಸಕರ ಸಂಖ್ಯೆಯಲ್ಲಿ ಸದ್ಯಕ್ಕೆ 104 ಶಾಸಕರನ್ನು ಹೊಂದಿರುವ ಬಿಜೆಪಿಗೆ ಬಹುಮತದ ಮ್ಯಾಜಿಕ್‌ ನಂಬರ್‌ ತಲುವುದು ಸಾಧ್ಯವಾಗುತ್ತದೆ. ಆಪರೇಷನ್‌ ಕಮಲದ ಬದಲಿಗೆ ಸಮ್ಮಿಶ್ರ ಸರ್ಕಾರದ  ಕೆಸರೆರಚಾಟ ಮತ್ತು ಅಲ್ಲಿನ ದೋಸ್ತಿ ಪಕ್ಷಗಳ ಅಪನಂಬಿಕೆಯಿಂದ ಸರ್ಕಾರ ಪತನವಾಗಿದೆ ಎಂದು ಪ್ರತಿಪಾದಿಸಿ ಬಳಿಕ ಅಧಿಕಾರ ಸ್ಥಾಪನೆಗೆ ಹಕ್ಕು ಕೇಳುವುದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ತಂತ್ರವಾಗಿದೆ ಎನ್ನಲಾಗಿದೆ. ಈ ಷರತ್ತುಗಳನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಾತ್ವಿಕವಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಅವರಿಗೆ  ವಯಕ್ತಿಕವಾಗಿ ಯಾವುದೇ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಶಾಸಕರನ್ನು ಸಂಪರ್ಕಿಸದಂತೆಯೂ ಹೇಳಲಾಗಿದೆ.

ಕಾಂಗ್ರೆಸ್‌ನ ನೂತನ ಮತ್ತು ನಾಲ್ಕೈದು ಬಾರಿ ಗೆದ್ದರೂ ಸೂಕ್ತ ಸ್ಥಾನಮಾನ ಸಿಗದೆ ಅತೃಪ್ತರಾಗಿರುವ ಕೆಲವು ಶಾಸಕರಿಗೆ  ಆ ಪಕ್ಷದ ರಾಷ್ಟ್ರ ನಾಯಕತ್ವದ ಮೇಲೆ ನಂಬಿಕೆ ಕಡಿಮೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಸೋತದ್ದೇ ಆದರೆ, ತಮ್ಮ ರಾಜಕೀಯ ಭವಿಷ್ಯ ಡೋಲಾಯಮಾನವಾಗಬಹುದು ಎಂಬ ಚಿಂತೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಕನಿಷ್ಠ ಮುಂದಿನ ಐದು ವರ್ಷಗಳಲ್ಲಿ ಪ್ರಭಾವಿಯಾಗಿರುತ್ತಾರೆ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರು ತಮ್ಮ ರಾಷ್ಟ್ರ ನಾಯಕತ್ವವನ್ನು ಸ್ಥಾಪಿಸಲು ವಿಫ‌ಲರಾಗುತ್ತಿರುವುದು ಅಂತಹ ಶಾಸಕರಿಗೆ ಬಿಜೆಪಿಯತ್ತ ಒಲವಿಗೆ ಕಾರಣವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ವಿಶ್ಲೇಷಿಸಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಸರ್ಕಾರ ರಚಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲಾಗಿತ್ತು. ಆದರೆ, ತಕ್ಷಣ ಬಿಜೆಪಿ ಸರ್ಕಾರ ಬಂದಲ್ಲಿ ಪಕ್ಷಕ್ಕೆ ಇನ್ನಷ್ಟು ಬರಲಿದೆ. ತಮ್ಮ ತಮ್ಮ ವಿವಾದಗಳಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅವಕಾಶಗಳನ್ನು ಹಾಳುಮಾಡಿಕೊಂಡಿವೆ ಎಂದೂ ಆ ಮುಖಂಡ ಹೇಳಿದ್ದಾರೆ.

ಕಾಂಗ್ರೆಸ್‌ಗೂ ಸರ್ಕಾರ ಪತನ ಇಷ್ಟ?
ಉನ್ನತ ಮೂಲಗಳ ಪ್ರಕಾರ, ಕಾಂಗ್ರೆಸ್‌ ರಾಷ್ಟ್ರ ನಾಯಕತ್ವಕ್ಕೆ ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವುದು ಒಳ್ಳೆಯದು ಎಂಬ ಭಾವನೆಯಿದೆ. ಮುಖ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್‌ ಜತೆಗಿನ ಸಂಬಂಧದಿಂದ ಸಮಸ್ಯೆ ಉಂಟಾಗಿದೆ. ಅದಕ್ಕೆ ಉತ್ತರ ಕರ್ನಾಟಕ ಕುರಿತ ಜೆಡಿಎಸ್‌ ತಳೆದು ಕೊಂಡ ನಿರ್ಧಾರಗಳು, ಆ ಭಾಗದಲ್ಲಿ ಇನ್ನೂ ಭಧ್ರವಾಗಿರುವ ಕಾಂಗ್ರೆಸ್‌ ಅಡಿಪಾಯಕ್ಕೆ ಧಕ್ಕೆ ತಂದಿದೆ ಎನ್ನಲಾಗಿದೆ. ಜತೆಗೆ ತನ್ನ ಮತಬ್ಯಾಂಕ್‌ ಆಗಿರುವ ಅಹಿಂದ ವರ್ಗ, ಉತ್ತರ ಕರ್ನಾಟಕದಲ್ಲಿ ಕ್ಷೀಣವಾಗಿರುವ ಜೆಡಿಎಸ್‌ಗೆ ಬಲತಂದುಕೊಟ್ಟಿದ್ದೇ ಆದಲ್ಲಿ ಕಾಂಗ್ರೆಸ್‌ಗೆ ತೊಂದರೆ ಆಗಲಿದೆ. ಇವೆಲ್ಲಾ ಕಾರಣಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ವಶದಲ್ಲಿರುವ ಲೋಕಸಭಾ ಕ್ಷೇತ್ರಗಳನ್ನೇ ಉಳಿಸಿಕೊಳ್ಳಲು ಕಷ್ಟವಾಗಬಹುದು ಎಂಬ ಯೋಚನೆ ಪಕ್ಷ ಮುಖಂಡತ್ವಕ್ಕೆ ಬಂದಿದೆ ಎನ್ನಲಾಗಿದೆ. ಜೆಡಿಎಸ್‌ ನಾಯಕರ ಜತೆ ಮುನಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಲುವುಗಳು ಮತ್ತು ವಿಶ್ಲೇಷಣೆಗಳು ಪಕ್ಷಮುಖಂಡತ್ವಕ್ಕೆ ಮನವರಿಕೆ ಆಗಿದ್ದು, ಸರ್ಕಾರ ಪತನವಾದಲ್ಲಿ ಲಾಭ ಹೆಚ್ಚು ಎಂದುಕೊಂಡಿದೆ ಎಂದು ಮೂಲಗಳು ಹೇಳಿವೆ.

– ನವೀನ್‌ ಅಮ್ಮೆಂಬಳ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.