ಕಾನೂನು ಹೋರಾಟದಿಂದ ಅವಕಾಶವಂಚಿತ ರಾಜ್ಯ ಬಿಜೆಪಿ
Team Udayavani, Sep 16, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದರಿಂದ ವಿಧಾನ ಪರಿಷತ್ತಿನಲ್ಲಿ ಎರಡು ಸ್ಥಾನ ಕಳೆದುಕೊಳ್ಳುವಂತಾಗಿರುವ ಬಿಜೆಪಿ, ಕಾನೂನು ಹೋರಾಟಕ್ಕೆ ಯೋಚಿಸಿತ್ತಾದರೂ ಅದಕ್ಕೆ ಅವಕಾಶ ಇಲ್ಲದಂತಾಗಿದೆ.
ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಅ.3ರಂದು ಚುನಾವಣೆ ನಡೆಯಲಿದ್ದು,ಮೂರೂ ಸ್ಥಾನಗಳಿಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಿರುವುದರಿಂದ ಒಬ್ಬ ಅಭ್ಯರ್ಥಿ ಗೆಲ್ಲಲು 112 ಮತಗಳು ಬೇಕಾಗುತ್ತವೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 118 ಸ್ಥಾನ ಹೊಂದಿರುವುದರಿಂದ ವಿಧಾನಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿದ್ದರೂ (104 ಶಾಸಕರು) ಬಿಜೆಪಿಗೆ ಮೇಲ್ಮನೆಯಲ್ಲಿ ಒಂದೂ ಸ್ಥಾನ ಗಳಿಸಲು ಸಾಧ್ಯವಿಲ್ಲದಂತಾಗಿದೆ.
ಈ ಹಿನ್ನೆಲೆಯಲ್ಲಿ ಅಧಿಸೂಚನೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಮುಂದಾದ ಬಿಜೆಪಿ, ಈ ಕುರಿತಂತೆ ಕಾನೂನು ತಜ್ಞರು ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದಿತ್ತು. ನಿಯಮಾನುಸಾರ ಅವಧಿ ಮುಗಿದ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಒಂದೇ ಅಧಿಸೂಚನೆ ಹೊರಡಿಸಬೇಕು. ಅವಧಿ ಪೂರ್ವ ಚುನಾವಣೆ ನಡೆದರೆ ಪ್ರತ್ಯೇಕ ಅಧಿಸೂಚನೆ ಹೊರಡಿಸಬೇಕು ಎಂದು ಕಾನೂನು ತಜ್ಞರು ಮತ್ತು ಮುಖ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ವಿಚಾರದಲ್ಲಿ ಸುಮ್ಮನಾಗಲು ಬಿಜೆಪಿ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…