ಹಿರಿಯಣ್ಣನಂತೆ ಅಹವಾಲು ಆಲಿಸಿದ ಸಿಎಂ ಕುಮಾರಣ್ಣ


Team Udayavani, Sep 16, 2018, 6:05 AM IST

cmhd-22525.jpg

ಬೆಳಗಾವಿ: ಸಾಲಾಗಿ ಕುಳಿತಿರುವ ವಿಕಲಚೇತನರು. ಎಲ್ಲರ ಮೊಗದಲಿ ನಿರೀಕ್ಷೆ ಒಂದೆಡೆಯಾದರೆ ನಾಡಿನ ಸಿಎಂ ಸ್ವತಃ ತಮ್ಮ ಬಳಿ ಬಂದು ಅಹವಾಲು ಆಲಿಸಿಯಾರೇ ಎಂಬ ಪ್ರಶ್ನಾರ್ಥಕ ಭಾವ ಇನ್ನೊಂದೆಡೆ. ಆದರೆ ಯಾರ ನಿರೀಕ್ಷೆಯೂ
ಹುಸಿಯಾಗಲಿಲ್ಲ.

ಸುವರ್ಣ ವಿಧಾನಸೌಧದ ದಕ್ಷಿಣದ್ವಾರದ ಬಳಿಯ ನೆಲಮಹಡಿಯಲ್ಲಿ ಗಂಟೆಗಟ್ಟಲೆ ಕಾದು ಕುಳಿತಿದ್ದ ದಿವ್ಯಾಂಗರ
ಬಳಿ ತೆರಳಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಅತ್ಯಂತ ತಾಳ್ಮೆಯಿಂದ ಅಹವಾಲುಗಳನ್ನು ಸ್ವೀಕರಿಸಿದರು. ಹೆಗಲ ಮೇಲೊಂದು ಟವಲ್‌ ಹಾಕಿಕೊಂಡು ಮನೆಯ ಯಜಮಾನನಂತೆ ಸಮಾಧಾನದಿಂದಲೇ ಪ್ರತಿಯೊಬ್ಬರ ಬಳಿ
ತೆರಳಿ ಅಹವಾಲು ಕೇಳಿದರು.

ಹಿರಿಯರು-ಕಿರಿಯರು ಎಂಬ ಭೇದವೆಣಿಸದೇ ಎಲ್ಲರೊಂದಿಗೆ ಶಾಂತಚಿತ್ತರಾಗಿಯೇ ಮಾತನಾಡಿದ ಮುಖ್ಯಮಂತ್ರಿಗಳು, ಜನತಾ ದರ್ಶನದ ಮೊದಲ ಹಂತದಲ್ಲಿ ಸುಮಾರು ಎರಡೂವರೆ ಗಂಟೆಗಳ ಕಾಲ ಅಹವಾಲು ಆಲಿಸಿದರು. ದುಃಖ ತಡೆಯದೇ ಕಣ್ಣೀರು ಹಾಕಿದ ಮಹಿಳೆಯರು, ಅನೇಕ ವರ್ಷಗಳಿಂದ ನ್ಯಾಯ ಸಿಗದೇ ಕಚೇರಿಗಳಿಗೆ ಅಲೆದಾಡಿ ಸುಸ್ತಾದ ಜನರಿಗೆ ಸ್ವತಃ ಮುಖ್ಯಮಂತ್ರಿಗಳೇ ಎದುರು ನಿಂತು ಸಮಸ್ಯೆ ಕೇಳಿದಾಗ ಒಂದು ಕ್ಷಣ ದಿಗೂಢರಾದರು.

ಕೆಲವರು ಕೈ ಮುಗಿದು ನನಗೆ ಸಹಾಯ ಮಾಡಿ ನಿಮಗೆ ಉಪಕಾರವಾಗುತ್ತೆ ಎಂದರೆ, ಇನ್ನೂ ಕೆಲವರು ಮಾತಿನ ಮೂಲಕ ಹೇಳಲಾಗದೇ ಕಾಲು ಹಿಡಿಯಲು ಮುಂದಾದರು. ಅದಕ್ಕೆ ಆಸ್ಪದ ನೀಡದ ಸಿಎಂ, ನಿಮ್ಮ ಅಹವಾಲು ಕೇಳಲೆಂದೇ ಬಂದಿರುವೆ ಎಂದಾಗ ಹಿರಿಯಣ್ಣನ ಮುಂದೆ ಸಮಸ್ಯೆ ತೋಡಿಕೊಳ್ಳುವ ರೀತಿಯಲ್ಲಿ ತುಸು ಮುಜುಗರದಿಂದಲೇ ಅಹವಾಲು ಬಿಚ್ಚಿಟ್ಟರು.

ಅಹವಾಲು ಆಲಿಸುತ್ತಲೇ ಡೀಸಿ ಸೇರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು. ಜನತಾ ದರ್ಶನದ ಮೊದಲ ಹಂತದಲ್ಲಿ ದಿವ್ಯಾಂಗರ ಅಹವಾಲುಗಳನ್ನು ಆಲಿಸಿದರು. ಸಂಜೆ 7 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ಮುಂದುವರಿಸಿದರು.

ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಲು 1,271 ಜನರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಇಷ್ಟುಜನರನ್ನು ನೇರವಾಗಿ ಮಾತನಾಡಿ, ಅಹವಾಲು ಹೇಗೆ ಸ್ವೀಕರಿಸುತ್ತಾರೆಂಬ ಪ್ರಶ್ನೆಗೆ ಮುಖ್ಯಮಂತ್ರಿಗಳ ತಾಳ್ಮೆಯೇ ಉತ್ತರವಾಗಿತ್ತು. ನೊಂದವರ ಕಣ್ಣೀರು ಒರೆಸುವ ಪ್ರಯತ್ನ ಮಾಡಿದ ಸಿಎಂ ಕೆಲವೊಂದು ಸಮಸ್ಯೆಗಳನ್ನು ಸ್ಥಳದÇÉೇ ಬಗೆಹರಿಸಿದರು. ಕೆಲವು ಮನವಿ ಪತ್ರಗಳಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ವಹಿಸುವಂತೆ ಷರಾ ಬರೆದರು.

ಮುಖ್ಯಮಂತ್ರಿಯೇ ಸ್ವತಃ ಐದಾರು ಗಂಟೆಗಳ ಕಾಲ ನಿರಂತರವಾಗಿ ಅಹವಾಲು ಆಲಿಸುವುದನ್ನು ಕಂಡ ಜನರು ತಮ್ಮ ಸಮಸ್ಯೆಯನ್ನು ಅವರಿಗೆ ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.