ಡಿಕೆಶಿಗೆ ಕೆಸಿವಿ ಕ್ಲಾಸ್, ಪರಂಗೆ ಸಮಾಧಾನ
Team Udayavani, Sep 17, 2018, 6:00 AM IST
ಬೆಂಗಳೂರು: ಸಿದ್ದರಾಮಯ್ಯ ಅವರ ಬಣದವರ ವಿರುದ್ಧ ದೂರು ಹೇಳಲು ಹೋದ ಸಚಿವ ಡಿ.ಕೆ.ಶಿವಕುಮಾರ್ಗೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಕ್ಲಾಸ್ ತೆಗೆದುಕೊಂಡರು ಎಂದು ಹೇಳಲಾಗಿದೆ.
ಶನಿವಾರ ತಡರಾತ್ರಿ ಕುಮಾರಕೃಪ ಅತಿಥಿಗೃಹದಲ್ಲಿ ವೇಣುಗೋಪಾಲ್ ಭೇಟಿ ಮಾಡಿದ್ದ ಅವರು, ಸರ್ಕಾರದ ವಿರುದ್ಧ ಮಾತನಾಡುತ್ತಿರುವವರೆಲ್ಲಾ ಸಿದ್ದರಾಮಯ್ಯ ಆಪ್ತ ಶಾಸಕರೇ. ಮನಸ್ಸು ಮಾಡಿದರೆ ಅವರನ್ನು ಯಾವತ್ತೋ ಸುಮ್ಮನಾಗಿಸಬಹುದಿತ್ತು. ಸಮಸ್ಯೆ ಈಗ ಬೀದಿಗೆ ಬಂದಿದೆ. ಸಿದ್ದರಾಮಯ್ಯ ಕೈಲಿ ಎಲ್ಲವೂ ಇದೆ ಎಂದು ಹೇಳಿದರು.
ಇದನ್ನು ಸಮಾಧಾನವಾಗಿಯೇ ಕೇಳಿಸಿಕೊಂಡ ಕೆ.ಸಿ.ವೇಣುಗೋಪಾಲ್, ಡಿ.ಕೆ.ಶಿವಕುಮಾರ್ಗೆ ಕ್ಲಾಸ್ ತೆಗೆದುಕೊಂಡರು . ನೀವು ಬೆಳಗಾವಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿದ್ದರಿಂದಲೇ ಜಾರಕಿಹೊಳಿ ಸಹೋದರರು ರೆಬೆಲ್ ಆಗಲು ಕಾರಣ. ನಿಮಗೆ ಯಾಕೆ ಬೆಳಗಾವಿ ವಿಚಾರದಲ್ಲಿ ಯಾಕೆ ಅಷ್ಟು ಆಸಕ್ತಿ. ನೀವು ಬೆಳಗಾವಿ ವಿಚಾರದಲ್ಲಿ ಮೂಗು ತೂರಿಸಬೇಡಿ. ನಿಮ್ಮಿಂದ ಬಳ್ಳಾರಿ ಶಾಸಕರು ಬಂಡಾಯ ಏಳುವಂತಾಗಿದೆ. ನಿಮ್ಮ ಡಾಮಿನೇಷನ್ ಆಪರೇಷನ್ ಕಮಲಕ್ಕೆ ಅನುಕೂಲವಾಗುತ್ತಿದೆ. ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ ಎಂದು ಹೇಳಿದರು ಎಂದು ಹೇಳಲಾಗಿದೆ.
ಈ ಮಧ್ಯೆ, ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನಗೊಂಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರು 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದರು. ಅದಕ್ಕೂ ಮುನ್ನ ಗೃಹ ಸಚಿವರಾದ ತಮ್ಮ ಜತೆ ಚರ್ಚಿಸಿಲ್ಲ. ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದಾರೆ. ಹೀಗಾದರೆ ಹೇಗೆ ಎಂದು ವೇಣುಗೋಪಾಲ್ ಬಳಿಯೂ ಅಸಮಾಧಾನ ಹೊರ ಹಾಕಿದರು. ಪರಮೇಶ್ವರ್ ಅವರನ್ನು ವೇಣುಗೋಪಾಲ್ ಸಮಾಧಾನಪಡಿಸಿ ನಾನು ಮುಖ್ಯಮಂತ್ರಿಯವರ ಬಳಿ ಮಾತಾನಡುತ್ತೇನೆ ಎಂದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ