ವಿಧಾನಪರಿಷತ್ಗೆ ಕೈ ಪಟ್ಟಿ ಸಿದ್ಧ
Team Udayavani, Sep 17, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ನ ಮೂರು ಸ್ಥಾನ ಹಾಗೂ ಸರ್ಕಾರದಿಂದ ನಾಮನಿರ್ದೇಶನ ಮಾಡುವ ಮೂರು ಸ್ಥಾನಗಳ ಭರ್ತಿ ಬಗ್ಗೆ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯ ಜತೆ ಚರ್ಚಿಸಿದರು. ಒಟ್ಟು ಆರು ಸ್ಥಾನಗಳಲ್ಲಿ ನಾಲ್ಕು ಕಾಂಗ್ರೆಸ್ ಹಾಗೂ ಎರಡು ಸ್ಥಾನ ಜೆಡಿಎಸ್ಗೆ ಬಿಟ್ಟಕೊಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್ನಿಂದ ನಿವೇದಿತ್ ಆಳ್ವಾ, ಎಂ.ಸಿ.ವೇಣುಗೋಪಾಲ್, ಯು.ಬಿ.ವೆಂಕಟೇಶ್, ಮಲ್ಲಾಜಮ್ಮ, ವಾಸಂತಿ ಶಿವಣ್ಣ, ಪ್ರೊ.ಬರಗೂರು ರಾಮಚಂದ್ರ ಅವರ ಹೆಸರು ಅಂತಿಮ ಮಾಡಲಾಯಿತು. ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿಯವರ ಜತೆ ಚರ್ಚಿಸಿ ನಾಲ್ವರ ಹೆಸರು ಅಂತಿಮಗೊಳಿಸಲು ತೀರ್ಮಾನಿಸಲಾಯಿತು.
ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಬಗ್ಗೆಯೂ ಚರ್ಚಿಸಿ ಸೆಪ್ಟೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸಿ, ಪಟ್ಟಿಯೊಂದಿಗೆ ದೆಹಲಿಗೆ ಬನ್ನಿ ಎಂದು ವೇಣುಗೋಪಾಲ್ ಹೇಳಿದರು. ಸಿದ್ದರಾಮಯ್ಯ ಅವರ ಜತೆಗಿನ ಭೇಟಿ ನಂತರ ವೇಣುಗೋಪಾಲ್ ವಿಧಾನಪರಿಷತ್ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ