ರೇವಣ್ಣ ಕುಟುಂಬದಿಂದ 55 ಎಕರೆ ಸರ್ಕಾರಿ ಭೂಮಿ ಕಬಳಿಕೆ
Team Udayavani, Sep 18, 2018, 6:00 AM IST
ಹಾಸನ: ನಗರದ ಹೊರ ವಲಯದ ಗೌರಿಪುರ ಮತ್ತು ಸೋಮನಹಳ್ಳಿ ಕಾವಲ್ನಲ್ಲಿ ಸರ್ಕಾರಿ ಭೂಮಿಯ ದಾಖಲೆಗಳನ್ನು ತಿರುಚಿ 54.29 ಎಕರೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಕುಟುಂಬದವರು ಕಬಳಿಸಿ
ದ್ದಾರೆಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎ.ಮಂಜು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ತಾಲೂಕಿನ ಗೌರಿಪುರ ಮತ್ತು ಸೋಮನಹಳ್ಳಿ ಕಾವಲ್ 10 ಕ್ಕೂ ಹೆಚ್ಚು ಸರ್ವೇ ನಂಬರ್ಗಳ 54.29 ಎಕರೆಯನ್ನು ಯಾರ್ಯಾರ ಹೆಸರಿಗೋ ದಾಖಲೆಗಳನ್ನು ಮಾಡಿಸಿ ಅವರಿಂದ ದೇವೇಗೌಡರ ಅತ್ತೆ ಕಾಳಮ್ಮ ಮತ್ತು ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ಹೆಸರಿಗೆ 2014 -15ನೇ ಸಾಲಿನಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಅಕ್ರಮ, ಅವ್ಯವಹಾರಕ್ಕೆ ರೇವಣ್ಣ ರಾಜಕೀಯ ಪ್ರಭಾವ ಬಳಸಿಕೊಂಡಿದ್ದರೆ ಕಂದಾಯ ಇಲಾಖೆ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಈ ಸಂಬಂಧ ಹಾಸನ ಡೀಸಿಗೆ ಹಾಗೂ ಕಂದಾಯ ಸಚಿವರಿಗೆ ದೂರು ನೀಡುತ್ತೇನೆ. ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸುವೆ ಎಂದು ಎಚ್ಚರಿಸಿದರು.
ದೈವ ಬಲದಿಂದ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿಯವರನ್ನು ಪದಚ್ಯುತಿಗೊಳಿಸಿದರೆ ದೈವಕ್ಕೆ ಬಗೆದ ದ್ರೋಹವಾಗುತ್ತದೆ ಎಂದು ಆದಿಚುಂಚನಗಿರಿ ಶ್ರೀಗಳು ಹೇಳಿಕೆ ನೀಡಿರುವುದು ತಪ್ಪು. ಇದರಿಂದ ಮಠದ ಭಕ್ತನಾಗಿರುವ ನನಗೂ ನೋವಾಗಿದೆ.
– ಎ.ಮಂಜು, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ