ತೈಲ ಬೆಲೆ ಕಡಿಮೆ ಮಾಡಿದ್ದು 46 ಪೈಸೆ ಮಾತ್ರ: ಯಡಿಯೂರಪ್ಪ
Team Udayavani, Sep 18, 2018, 6:25 AM IST
ಬೆಂಗಳೂರು:ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಜೆಟ್ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 1.58 ರೂ. ಹೆಚ್ಚಳ ಮಾಡಿದ್ದರು. ಇದೀಗ ಎರಡೂ ರೂ. ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಆದರೆ, ನಿಜಕ್ಕೂ ಕಡಿಮೆ ಆಗಿದ್ದು ಕೇವಲ 46 ಪೈಸೆ ಅಷ್ಟೇ ಎಂದು ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, 46 ಪೈಸೆ ಕಡಿಮೆ ಮಾಡಿ ದೊಡ್ಡ ಸಾಧನೆ ಎಂದು ಹೇಳಿಕೊಂಡು ಓಡಾಡುವ ಪ್ರಯತ್ನವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ವಿರುದ್ಧ ರೇವಣ್ಣ ಹಾಗೂ ಇತರರು ಹತಾಶರಾಗಿ ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ನಾವಂತೂ ಒಂದು ಶಬ್ಧ ಮಾತಾಡುತ್ತಿಲ್ಲ. ಮುಖ್ಯಮಂತ್ರಿಯವರು ಅಭಿವೃದ್ಧಿ ಕೆಲಸ ಮರೆತು ದೇವಾಸ್ಥಾನಗಳಿಗೆ ಓಡಾಡುತ್ತಿದ್ದಾರೆ ಎಂದು ಹೇಳಿದರು.
ವಿಧಾನಸೌಧದಲ್ಲಿ ಯಾವ ಸಚಿವರೂ ಕೂಡ ಸಿಗುತ್ತಿಲ್ಲ. ಮುಖ್ಯಮಂತ್ರಿಯವರಿಗೆ ಸರ್ಕಾರ ಅಸ್ತಿತ್ವದಲ್ಲಿರುವ ನಂಬಿಕೆಯಿಲ್ಲ. ಇಂತಹ ವಾತಾವರಣದಲ್ಲಿ ಸರ್ಕಾರ ಮುಂದುವರಿದಿರುವುದು ನೋವಿನ ಸಂಗತಿ ಎಂದರು.
ಇನ್ನಾದರೂ ಸರ್ಕಾರದ ಕೆಲಸದತ್ತ ಗಮನಹರಿಸಲಿ. ಅವರ ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಂಡು ಬಿಜೆಪಿ ಮೇಲೆ ಆರೋಪ ಮಾಡದೆ ಅಭಿವೃದ್ಧಿ ಕೆಲಸದತ್ತ ಗಮನಹರಿಸಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ