ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ: ಹೆಬ್ಟಾಳ್ಕರ್
Team Udayavani, Sep 18, 2018, 6:30 AM IST
ಹುಬ್ಬಳ್ಳಿ: ನನಗೆ ದೆಹಲಿಗೆ ಬರಲು ಹೈಕಮಾಂಡ್ನಿಂದ ಕರೆ ಬಂದಿಲ್ಲ. ನನ್ನ ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೊರಟಿದ್ದೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಯಾವ ಉದ್ದೇಶವಿಟ್ಟುಕೊಂಡು ಸಮ್ಮಿಶ್ರ ಸರಕಾರ ಪತನಗೊಂಡರೆ ನಾವು ಜವಾಬ್ದಾರರಲ್ಲ ಎಂದು ಹೇಳಿದ್ದಾರೆಂಬುದು ನನಗೆ ಗೊತ್ತಿಲ್ಲ. ಅವರಿಂದ ಸರಕಾರಕ್ಕೆ ಯಾವುದೇ ತೊಂದರೆಯಾಗಲ್ಲ. ಅಲ್ಲದೆ ಕಾಂಗ್ರೆಸ್ಗೆ ಯಾರ ಭಯವೂ ಇಲ್ಲ. ಸಮ್ಮಿಶ್ರ ಸರಕಾರ ಐದು ವರ್ಷ ಸುಸೂತ್ರವಾಗಿ ನಡೆಯಲಿದೆ ಎಂದರು.
ಜಾರಕಿಹೊಳಿ ಸಹೋದರರು ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ನನ್ನ ಮತ್ತು ಅವರ ಮಧ್ಯೆ ಯಾವುದೇ ಸಮಸ್ಯೆಯಿಲ್ಲ. ಅದೆಲ್ಲ ಈಗ ಮುಗಿದ ಅಧ್ಯಾಯ. ಬಿಜೆಪಿಯವರು ಸಮ್ಮಿಶ್ರ ಸರಕಾರ ಪತನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ತಿಳಿಸಿದರು.