ಬಿಜೆಪಿಯವರು ನನ್ನನ್ನು ಸಂಪರ್ಕಿಸಿಲ್ಲ
Team Udayavani, Sep 18, 2018, 6:55 AM IST
ಯಾದಗಿರಿ: ನನ್ನನ್ನು ಯಾವ ಬಿಜೆಪಿ ನಾಯಕರೂ ಸಂಪರ್ಕಿಸಿಲ್ಲ ಎಂದು ಗಣಿಮತ್ತು ಭೂ ವಿಜ್ಞಾನ, ಮುಜರಾಯಿ,
ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ. ಪಾಟೀಲ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವುದು ಊಹಾಪೋಹ ಎಂದರು.
ಕಾಂಗ್ರೆಸ್ ಬೆಂಬಲದಿಂದ ಅಧಿಕಾರಕ್ಕೆ ಬಂದ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದೆ. ಯಾವುದೇ
ಕಾರಣಕ್ಕೂ ಉರುಳುವ ಪ್ರಶ್ನೆಯೇ ಇಲ್ಲ ಎಂದರು.
ಜಾರಕಿಹೊಳಿ ಬ್ರದರ್ನಿಂದ ಸರ್ಕಾರ ಉರುಳುತ್ತಾ ಎಂಬ ಪ್ರಶ್ನಿಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನಾನೇನೂ ಹೇಳಲ್ಲ. 79 ಶಾಸಕರಿಗೆ ಸಿದ್ದರಾಮಯ್ಯ ಅವರೇ ನಾಯಕರು ಎಂದರು.