ಬಸ್ ದರ ಹೆಚ್ಚಿಸಿ ತಡೆಹಿಡಿದ ಸಿಎಂ; ಗಂಟೆಯಲ್ಲೇ ಆದೇಶ ವಾಪಸ್
Team Udayavani, Sep 18, 2018, 6:00 AM IST
ಬೆಂಗಳೂರು: ಪೆಟ್ರೋಲ್-ಡೀಸೆಲ್ ಮೇಲಿನ ಸೆಸ್ ಹೊರೆ ತಗ್ಗಿಸುವುದಾಗಿ ಘೋಷಿಸಿದ ದಿನವೇ ಸರ್ಕಾರ ಬಸ್ ಪ್ರಯಾಣಿಕರಿಗೆ ದರ ಏರಿಕೆ ಬರೆ ಎಳೆಯಲು ನಿರ್ಧರಿಸಿತ್ತು. ಆದರೆ, ಈ ಸಂಬಂಧ ಆದೇಶ ಹೊರಡಿಸಿದ ಕೆಲವೇ ಹೊತ್ತಿನಲ್ಲಿ ಸ್ವತಃ ಮುಖ್ಯಮಂತ್ರಿ ಈ ಆದೇಶ ತಡೆಹಿಡಿಯಲು ಸೂಚಿಸಿದರು.
ನಿರಂತರವಾಗಿ ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ಗಳ ಪ್ರಯಾಣ ದರವನ್ನು ಸರಾಸರಿ ಶೇ. 18ರಷ್ಟು ಹೆಚ್ಚಿಸಿ, ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಸರ್ಕಾರ ಆದೇಶ ಹೊರಡಿಸಲು ಸಾರಿಗೆ ನಿಗಮಗಳಿಗೆ ಅನುಮತಿ ನೀಡಿತ್ತು. ಆದರೆ, “ದರ ಏರಿಕೆ ಸದ್ಯಕ್ಕೆ ಬೇಡ. ಆದೇಶ ತಡೆಹಿಡಿಯಿರಿ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದರು. ಈ ಹಿನ್ನೆಲೆಯಲ್ಲಿ ಪ್ರಯಾಣ ದರ ಯಥಾಸ್ಥಿತಿ ಮುಂದುವರಿಯಲಿದೆ.
ಕೆಎಸ್ಆರ್ಟಿಸಿಯು ಶೇ. 18ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸೇರಿದಂತೆ ನಾಲ್ಕೂ ನಿಗಮಗಳಿಗೆ ಅನ್ವಯ ಆಗುವಂತೆ ದರ ಹೆಚ್ಚಳಕ್ಕೆ ಅನುಮೋದನೆಯೂ ದೊರಕಿತ್ತು. ಅಧಿಕಾರಿಗಳು ಇದರ ಲೆಕ್ಕಾಚಾರದಲ್ಲಿ ತೊಡಗಿದ್ದರು. ಮುಖ್ಯಮಂತ್ರಿ ಆದೇಶದ ಮೇರೆಗೆ ಕೈಬಿಡಲಾಗಿದೆ.
2013ರಲ್ಲಿ ಪ್ರಯಾಣ ದರವನ್ನು ಶೇ. 10.50ರಷ್ಟು ಹೆಚ್ಚಳ ಮಾಡಲಾಗಿತ್ತು. 2014ರಲ್ಲಿ ಮತ್ತೆ ಸರಾಸರಿ ಶೇ. 7.96ರಷ್ಟು ದರ ಏರಿಕೆ ಶಾಕ್ ನೀಡಲಾಗಿತ್ತು. ಇದಾದ ನಂತರ ಅಂದರೆ ಕಳೆದ ನಾಲ್ಕು ವರ್ಷಗಳು ದರ ಏರಿಕೆ ಮಾಡಿರಲಿಲ್ಲ. ಈ ಮಧ್ಯೆ 2015ರಲ್ಲಿ ಪ್ರಯಾಣಿಕರಿಗೆ ಶೇ. 2ರಷ್ಟು ದರ ಇಳಿಕೆ ಮಾಡುವ ಮೂಲಕ ಕೊಂಚ “ರಿಲೀಫ್’ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ