ದಕ್ಷಿಣ ರಾಜ್ಯಗಳ ಸಭೆ ಯಶಸ್ವಿ: ರಾಜನಾಥ ಸಿಂಗ್‌


Team Udayavani, Sep 19, 2018, 6:00 AM IST

x-21.jpg

ಬೆಂಗಳೂರು: ಆಂತರಿಕ ಭದ್ರತೆ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತ ದಕ್ಷಿಣ ವಲಯ ಪರಿಷತ್‌ ಸಭೆ ಯಶಸ್ವಿಯಾಗಿದ್ದು, 27 ವಿಷಯಗಳಲ್ಲಿ 22 ವಿಷಯಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ಹೇಳಿದರು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಪುದುಚೇರಿ ಮತ್ತು ಅಂಡಮಾನ್‌ ನಿಕೋ ಬಾರ್‌ ದ್ವೀಪಗಳ ರಾಜ್ಯಗಳ ಪ್ರಮುಖರ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ರಾಜ್ಯಗಳಲ್ಲಿ ಪ್ರಮುಖವಾಗಿ ಮೀನುಗಾರರ ರಕ್ಷಣೆ ಕುರಿತು ಚರ್ಚಿಸಲಾಗಿದ್ದು, ಭಾರತದ ಮೀನುಗಾರರಿಗೆ ಶೇ.96ರಷ್ಟು ಬಯೋಮೆಟ್ರಿಕ್‌ ಕಾರ್ಡ್‌ ವಿತರಿಸಲಾಗಿದೆ. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌  ನೀಡುವಿಕೆಯಲ್ಲಿ ಏಕರೂಪತೆ ತರಲು ತೀರ್ಮಾನಿಸಲಾಯಿತು ಎಂದರು.

2016ರಲ್ಲಿ ತಮಿಳುನಾಡಿನಲ್ಲಿ ನಡೆದ ಸಭೆಯ ನಿರ್ಣಯಗಳ ಕಾರ್ಯ ಪ್ರಗತಿ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ರಾಜ್ಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ ಕುರಿತು ಚರ್ಚಿಸಲಾಗಿದ್ದು, ರಾಜ್ಯಗಳ ಪೊಲೀಸ್‌ ವ್ಯವಸ್ಥೆ ಆಧುನೀಕರಣ ಕುರಿತಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡಿದ ಹಣವನ್ನು ಪೊಲಿಸ್‌ ವ್ಯವಸ್ಥೆ ಆಧುನೀಕರಣಕ್ಕೆ ಬಳಸಿಕೊಂಡ ವೆಚ್ಚದ ಪ್ರಮಾಣ ಪತ್ರ ಸಲ್ಲಿಸಿದರೆ, ಕೇಂದ್ರ ಹೆಚ್ಚಿನ ಅನುದಾನ ನೀಡಲಿದೆ ಎಂದು ಹೇಳಿದರು.

ಮಂಗಳವಾರದ ಸಭೆಯಲ್ಲಿ ಐದು ವಿಷಯಗಳನ್ನು ಇತ್ಯರ್ಥಗೊಳಿಸದೇ ಉಳಿಸಿಕೊಳ್ಳಲಾಗಿದ್ದು, ಪುದುಚೇರಿ ವಿಮಾನ ನಿಲ್ದಾಣ ಆರಂಭ ಮಾಡುವ ಕುರಿತು ತಮಿಳುನಾಡು ಹಾಗೂ ಪುದುಚೇರಿ ನಡುವೆ ಭೂ ವ್ಯಾಜ್ಯ ಗೊಂದಲ ಇರುವುದರಿಂದ ಪ್ರಕರಣ ಇತ್ಯರ್ಥಗೊಳಿಸಲು ಸಾಧ್ಯವಾಗಿಲ್ಲ ಎಂದರು. ಆಂಧ್ರ ಪ್ರದೇಶದ ಶೇಷಾಚಲಂ ಬೆಟ್ಟದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿರುವ ರಕ್ತ ಚಂದನ ಮಾರಾಟ ತಡೆಯುವ ಕುರಿತು ಸಂಪೂರ್ಣ ಮಾಹಿತಿ ಪಡೆಯಲು ಸಮಿತಿ ರಚಿಸಲಾಗಿದೆ. ಅದೇ ರೀತಿ ತಮಿಳು ನಾಡು ರಾಜಧಾನಿ ಚೆನ್ನೈಗೆ ತೆಲಗು-ಗಂಗಾ ಯೋಜನೆ ಅಡಿಯಲ್ಲಿ ಕುಡಿಯುವ ನೀರು ಬಿಡುವ ಕುರಿತಂತೆಯೂ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಿತಿ ವರದಿ ನೀಡಿದ ನಂತರ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಅದರಂತೆ ಆಂಧ್ರಪ್ರದೇಶ ವಿಧಾನಸಭೆ ಸದಸ್ಯರ ಸಂಖ್ಯೆಯನ್ನು 175 ರಿಂದ 225 ಕ್ಕೆ ಹೆಚ್ಚಳ ಮಾಡುವ ಕುರಿತಂತೆ ಶೀಘ್ರವೇ ಸಂವಿಧಾನ ತಿದ್ದುಪಡಿ ತಂದು ನಿರ್ಣಯ ಕೈಗೊಳ್ಳಲು ನಿರ್ಧರಿಸಲಾಗಿದೆ. ಆಂಧ್ರ ಮತ್ತು ತಮಿಳುನಾಡು ಭಾಗದ ಪುಲಿಕಟ್‌ ಭಾಗದಲ್ಲಿ ಮೀನುಗಾರರಿಗೆ ಮೀನುಗಾರಿಕೆ 
ನಡೆಸುವ ಕುರಿತು ಎರಡೂ ರಾಜ್ಯಗಳು ಮಾತುಕತೆ ಮೂಲಕ ಚರ್ಚಿಸಿ ಬಗೆಹರಿಸಿಕೊಳ್ಳಲು ಅವಕಾಶ ಹಾಗೂ ಸಿಗಡಿ ಮೀನಿನಲ್ಲಿ ಆಂಟಿ ಬಯೋಟಿಕ್‌ ಅಂಶ ಪತ್ತೆಯಾಗಿರುವುದರಿಂದ ಅದನ್ನು ವಿದೇಶಕ್ಕೆ ರಪು¤ ಮಾಡಲು ಸೂಕ್ತ ನಿಯಮ ಜಾರಿಗೆ ತರುವ ಬಗ್ಗೆಯೂ ಸಭೆಯಲ್ಲಿ
ಚರ್ಚೆಯಾಗಿದ್ದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದರು. ಇದೇ ವೇಳೆ, ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳುವುದು ರಾಜ್ಯ ಸರ್ಕಾರದ ಕರ್ತವ್ಯ. ವಿದೇಶಿ ಹಾಗೂ ಸ್ವದೇಶಿ ಪ್ರಜೆಗಳಿದ್ದಾರೆ ಎಂದು ತಿಳಿದುಕೊಳ್ಳು ವುದು ಅಗತ್ಯ ಎಂದು ಹೇಳಿದರು.

ವರದಿ ಆಧರಿಸಿ ಅನುದಾನ ಬಿಡುಗಡೆ 
ಕೇರಳ ಹಾಗೂ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಕೇಂದ್ರ ತಂಡ ಪರಿಶೀಲನೆ ನಡೆಸಿ ವರದಿ ನೀಡಲಿದೆ. ಕೇಂದ್ರ ಅಗತ್ಯ ನೆರವು ನೀಡುವ ಭರವಸೆ ನೀಡಿದೆ. ಕೇಂದ್ರ ತಂಡದ ವರದಿ ಆಧರಿಸಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ರಾಜನಾಥ ಸಿಂಗ್‌ ಹೇಳಿದರು. ಇನ್ನು ಐಟಿ, ಇಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಅವರು, ಕೇಂದ್ರಿಯ ತನಿಖಾ ಸಂಸ್ಥೆಗಳು ತಮ್ಮ ಕಾರ್ಯ  ನಿರ್ವಹಿಸಲು ಸ್ವತಂತ್ರವಾಗಿದೆ. ಪ್ರತಿಪಕ್ಷ ಕಾಂಗ್ರೆಸ್‌ ಸುಮ್ಮನೇ ಆರೋಪ ಮಾಡುತ್ತಿದೆ ಎಂದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.