ಠೇವಣಿ ಇದ್ದರೂ ಸಾಲ ಮನ್ನಾ ಖಚಿತ
Team Udayavani, Sep 19, 2018, 6:00 AM IST
ಬೆಂಗಳೂರು: ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿ ಠೇವಣಿ ಇಟ್ಟ ರೈತರಿಗೆ ರಾಜ್ಯ ಸರಕಾರದ ಸಾಲ ಮನ್ನಾ ಯೋಜನೆ ಅನ್ವಯ ಆಗುವುದಿಲ್ಲ ಎಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು ರಾಜ್ಯ ಸರಕಾರ ನಿರ್ಧರಿಸಿದೆ. ಠೇವಣಿ ಇದ್ದರೆ ಸಾಲ ಮನ್ನಾ ಇಲ್ಲ ಎಂಬ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮಂಗಳವಾರ ಸಹಕಾರ ಇಲಾಖೆಯ ಅಧಿಕಾರಿಗಳು ಹಾಗೂ ಸಹಕಾರ ಸಂಘಗಳ ಪ್ರಧಾನ ನಿಬಂಧಕರ ಸಭೆ ನಡೆಸಿ ಈ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸರಕಾರದ ಉನ್ನತ ಮೂಲಗಳ ಪ್ರಕಾರ ರಾಜ್ಯದ 21 ಜಿಲ್ಲಾ ಸಹಕಾರಿ ಬ್ಯಾಂಕ್ಗಳು ಹಾಗೂ ಅಪೆಕ್ಸ್ ಬ್ಯಾಂಕ್ನಲ್ಲಿ ಸುಮಾರು 30 ಸಾವಿರ ಕೋಟಿ ರೂಪಾಯಿ ಠೇವಣಿ ಇಡಲಾಗಿದೆ. ಇದರಲ್ಲಿ ಬಹುತೇಕ ಸಣ್ಣ ಹಿಡುವಳಿದಾರರೇ ಸಣ್ಣ ಪ್ರಮಾಣದ ಹಣ ಠೇವಣಿ ಇಟ್ಟಿರುವುದರಿಂದ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯ ಪ್ರಯೋಜನದಿಂದ ವಂಚಿತರಾಗುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಸಚಿವರು ಈ ನಿರ್ಧಾರ ಕೈಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ಠೇವಣಿ ಇಟ್ಟ ರೈತರದ್ದೂ ಸಾಲ ಮನ್ನಾ ಮಾಡುವ ಹೊಸ ಅಧಿಸೂಚನೆ ಹೊರಡಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ