7 ಐಎಎಸ್ ಅಧಿಕಾರಿಗಳ ವರ್ಗ
Team Udayavani, Sep 20, 2018, 6:40 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ಬೆಳಗಾವಿಯ ಜಾರಕಿಹೊಳಿ ಸಹೋದರರು ತಣ್ಣಗಾಗುತ್ತಿದ್ದಂತೆ ಬೆಳಗಾವಿ ಜಿಲ್ಲಾಧಿಕಾರಿಯನ್ನು ಬದಲಾವಣೆ ಮಾಡಿರುವ ಸರ್ಕಾರ, ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿದೆ.
ಬುಧವಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ ಎಸ್.ಜಿಯಾವುಲ್ಲಾ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಎಸ್.ಬಿ.ಬೊಮ್ಮನಹಳ್ಳಿ ಅವರನ್ನು ನೇಮಕ ಮಾಡಿದೆ.
ಉಳಿದಂತೆ ತನುಶ್ರೀ ದೇಬ್ ವರ್ಮಾ- ನಿರ್ದೇಶಕರು (ಮಾಹಿತಿ ತಂತ್ರಜ್ಞಾನ), ಬಿಎಂಟಿಸಿ; ಆರ್.ಗಿರೀಶ್- ಜಿಲ್ಲಾಧಿಕಾರಿ, ಚಿತ್ರದುರ್ಗ; ಡಾ.ಬಿ.ಸಿ.ಸತೀಶ್- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಧಾರವಾಡ ಜಿಲ್ಲಾ ಪಂಚಾಯ್ತಿ; ಡಾ.ಎಂ.ಆರ್.ರವಿ- ಜವಳಿ ಇಲಾಖೆ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರು; ಕವಿತಾ ಎಸ್.ಮಣ್ಣಿಗೇರಿ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಯಾದಗಿರಿ ಜಿಲ್ಲಾ ಪಂಚಾಯ್ತಿ; ಮಹಂತೇಶ್ ಬೀಳಗಿ- ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿದರ್ ಜಿಲ್ಲಾ ಪಂಚಾಯ್ತಿ.
ಇದಲ್ಲದೆ, ಮೈಸೂರು ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ (ಆಡಳಿತ) ಆಗಿದ್ದ ಕೆ.ಶಿವರಾಮೇಗೌಡ ಅವರನ್ನು ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.