ವಿಟಿಯು ಅವ್ಯವಹಾರ: ಯೋಗಾನಂದ ಬಂಧನ
Team Udayavani, Sep 21, 2018, 6:30 AM IST
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಿಗೆ ಲ್ಯಾಬ್ ಪರಿಕರ ಖರೀದಿಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿ ಸ್ನಾತಕೋತ್ತರ ಕೇಂದ್ರದ ಮಷಿನ್ ಡಿಸೈನ್ ವಿಭಾಗದ ಪ್ರಾಧ್ಯಾಪಕ ಪ್ರೊ.ಯೋಗಾನಂದ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿ ಗುರುವಾರ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಜತೆಗೆ ಆಗಿನ ರೆಸಿಡೆಂಟ್ ಎಂಜಿನಿಯರ್ ಶಾಂತಪ್ಪ, ಕುಲಸಚಿವ ಹಾಗೂ ಹಣಕಾಸು ಅಧಿಕಾರಿಯಾಗಿದ್ದ ಕೆ.ವಿ. ಪ್ರಕಾಶ ಹಾಗೂ ಉಪ ಕುಲಪತಿಯಾಗಿದ್ದ ಡಾ.ಮಹೇಶಪ್ಪ ವಿರುದ್ಧವೂ ಸಿಸಿಬಿ ಪೊಲೀಸರು ದೂರು ದಾಖಲಿಸಿ ವಿಚಾರಣೆಗೊಳಪಡಿಸಿದ್ದಾರೆ.
2015ರಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕಾಲೇಜುಗಳಲ್ಲಿ ಲ್ಯಾಬ್ ಪರಿಕರಗಳ ಖರೀದಿಗಾಗಿ ಟೆಂಡರ್ ಕರೆದು ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ಕೋ ಆರ್ಡಿನೇಟರ್ ಆಗಿದ್ದ ಯೋಗಾನಂದ್ ಪರಿಕರಗಳನ್ನು ದಾವಣಗೆರೆ ವಿಟಿಯು ಉಗ್ರಾಣದಲ್ಲಿರಿಸಿದ್ದು, ಬಳಿಕ ಎಲ್ಲ ಕಡೆ ಪರಿಕರ ಅಳವಡಿಸಲಾಗಿದೆ ಎಂದು ಪ್ರಮಾಣ ಪತ್ರ ನೀಡಿರುವುದು ತಿಳಿದು
ಬಂದಿದೆ. ಇದನ್ನು ಪರಿಗಣಿಸಿ ಮೊದಲ ಹಂತದ ಹಣ ಬಿಡುಗಡೆಯಾಗಿದೆ.
ಏತನ್ಮಧ್ಯೆ ರಾಜ್ಯಪಾಲರಿಗೆ ಅನೇಕ ದೂರು ಬಂದಿರುವ ಹಿನ್ನೆಲೆ ಸಮಿತಿ ರಚಿಸಿ ಕಾರ್ಯಾಚರಣೆ ನಡೆಸಿದಾಗ ಅಪರಾಧ
ಪತ್ತೆಯಾಗಿದೆ. ಬಳಿಕ ದೂರಿನನ್ವಯ ಸಿಸಿಬಿ ಪೊಲೀಸರು ಯೋಗಾನಂದ ಅವರನ್ನು ಕರೆಸಿ ವಿಚಾರಿಸಿದಾಗ ಅಪರಾಧ ಸಾಬೀತಾಗಿದ್ದು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ