ಸಿಎಂ “ದಂಗೆ’ ಏಟು ಸರಿಯಾಗಿದೆ: ಮನಗೂಳಿ
Team Udayavani, Sep 22, 2018, 6:15 AM IST
ಹಾವೇರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ದಂಗೆ ಏಳಬೇಕು ಎಂದು ಹೇಳುವ
ಮೂಲಕ ಯಡಿಯೂರಪ್ಪ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೆ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ, ಶಾಸಕರಿಗೆ ಆಮಿಷವೊಡ್ಡುವ ಕೆಲಸ ಮಾಡುತ್ತಿರುವವರಿಗೆ ಮುಖ್ಯಮಂತ್ರಿ ದಂಗೆ ಏಳಲು ಹೇಳಿದ್ದು ಸರಿಯಾಗಿಯೇ ಇದೆ ಎಂದರು.
ಮುಖ್ಯಮಂತ್ರಿಯಾಗಿ ಈ ರೀತಿ ಹೇಳುವುದು ಎಷ್ಟು ಸರಿ ಎಂದು ಪತ್ರಕರ್ತರು ಕೇಳಿದಾಗ, ತಕ್ಷಣ ಉಲ್ಟಾ ಹೊಡೆದ
ಸಚಿವರು, ಸಿಎಂ ಕುಮಾರಸ್ವಾಮಿ ನನ್ನ ಪ್ರಕಾರ ಹಾಗೆ ಹೇಳಿಯೇ ಇಲ್ಲ ಎಂದರು. ಬಳಿಕ ಪತ್ರಕರ್ತರು “ದಂಗೆ’
ಹೇಳಿಕೆಯನ್ನು ಸ್ವತಃ ಮುಖ್ಯಮಂತ್ರಿಯವರು ಸಮರ್ಥಿಸಿಕೊಂಡಿದ್ದಾರೆ ಎಂದಾಗ “ಅವರು ಹಾಗೆ ಹೇಳಿದ್ದರೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ’ಎಂದು ಜಾರಿಕೊಂಡರು. ಯಡಿಯೂರಪ್ಪನವರ ಸದ್ಯದ ಪರಿಸ್ಥಿತಿ ನೀರಿನಿಂದ ಹೊರ ತೆಗೆದ ಮೀನಿನಂತಾಗಿದೆ.
ಶತಾಯಗತಾಯ ಅಧಿಕಾರ ಹಿಡಿಯಬೇಕೆಂಬ ಧಾವಂತದಲ್ಲಿದ್ದು ಅದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಯಾವುದೇ ಕಾರಣಕ್ಕೂ ಉರುಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ