ಬತ್ತಿ ಬರಿದಾದ ಪ್ರವಾಸಿ ತಾಣ ಅಗಸ್ತ್ಯತೀರ್ಥ !


Team Udayavani, Sep 22, 2018, 7:00 AM IST

ban22091807medn.jpg

ಬಾದಾಮಿ: ವಿಶ್ವದ ಗಮನ ಸೆಳೆದಿರುವ ಪ್ರವಾಸಿ ತಾಣ, ಹಲವಾರು ಚಲನಚಿತ್ರಗಳ ಚಿತ್ರೀಕರಣಕ್ಕೆ ಹೇಳಿ ಮಾಡಿಸಿದ ಸ್ಥಳವಾಗಿರುವ ಇಲ್ಲಿನ ಅಗಸ್ತ್ಯತೀರ್ಥ ಹೊಂಡ ಬರೋಬ್ಬರಿ 46 ವರ್ಷಗಳ ಬಳಿಕ ಬತ್ತಿ ಬರಿದಾಗಿದೆ.

ಪಟ್ಟಣದ ಸುತ್ತಲಿನ ಸಿ ಆಕಾರದ ಗುಡ್ಡಗಳ ಮಧ್ಯೆ ಇರುವ ಅಗಸ್ತ್ಯತೀರ್ಥ  ಹೊಂಡಕ್ಕೆ ಇತಿಹಾಸವಿದೆ. ಈ ಹೊಂಡದಲ್ಲೇ ಬಾದಾಮಿ ಚಾಲುಕ್ಯ ಅರಸರ ಕಾಲದ ಕಲ್ಲಿನಲ್ಲಿ ನಿರ್ಮಿಸಲಾದ ಸುಂದರ ಭೂತನಾಥ ದೇವಾಲಯವಿದ್ದು ಪ್ರವಾಸಿಗರ ಆಕರ್ಷಣೀಯ ಸ್ಥಳವಾಗಿದೆ. ಪಕ್ಕದಲ್ಲೇ ಮೇಣಬಸದಿ ಇದ್ದು, ಬಾದಾಮಿಗೆ ಬರುವ ಸಾವಿರಾರು ಪ್ರವಾಸಿಗರು ಅಗಸ್ತ್ಯತೀರ್ಥ ಹೊಂಡ, ಭೂತನಾಥ ದೇವಾಲಯ, ಮ್ಯೂಜಿಯಂ (ವಸ್ತು ಸಂಗ್ರಹಾಲಯ), ಮೇಣಬಸದಿ ನೋಡಿ ಆನಂದ ಪಡುತ್ತಾರೆ.

ಕ್ರಿಕೆಟ್‌ ಮೈದಾನವಾಯ್ತು: 1972ರಲ್ಲಿ ತೀವ್ರ ಬರ ಆವರಿಸಿದ್ದಾಗ ಅಗಸ್ತ್ಯತೀರ್ಥ  ಹೊಂಡ ಬತ್ತಿತ್ತು. ಅದಾದ ಬಳಿಕ ಎಷ್ಟೇ ಮಳೆ ಕೊರತೆ ಕಂಡು ಬಂದರೂ ಹೊಂಡ ಒಮ್ಮೆಯೂ ಬತ್ತಿರಲಿಲ್ಲ. ಆದರೀಗ ಸಂಪೂರ್ಣ ಬತ್ತಿದ್ದು, ಭೂತನಾಥ ದೇವಾಲಯ ಎದುರು ಭಣಗುಡುತ್ತಿದೆ. ಅಗಸ್ತ್ಯತೀರ್ಥ ಹೊಂಡದ ಆವರಣವನ್ನು ಯುವಕರು ಕ್ರಿಕೆಟ್‌ ಮೈದಾನವನ್ನಾಗಿ ಮಾಡಿಕೊಂಡಿದ್ದಾರೆ.

ಮಳೆ ಆದ್ರೆ ನೀರು: ಅಗಸ್ತ್ಯತೀರ್ಥ  ಹೊಂಡಕ್ಕೆ ಕೆರೆ ತುಂಬುವಂತಹ ಯೋಜನೆಗಳು ಕೈಗೊಳ್ಳಲು ಸಾಧ್ಯವೇ ಇಲ್ಲ. ಈಗಾಗಲೇ ಅವಕಾಶ ಇರುವ ಬನಶಂಕರಿ ಹೊಂಡವನ್ನೇ ತುಂಬಿಸಲು ಅಧಿಕಾರಸ್ಥರು ಮುಂದಾಗಿಲ್ಲ. ಇನ್ನು ಸಣ್ಣ ಕೆಲಸಕ್ಕೂ ತಕರಾರು ತೆಗೆಯುವ ಎಎಸ್‌ಐ (ಭಾರತೀಯ ಪುರಾತತ್ವ ಇಲಾಖೆ), ಈ ಹೊಂಡಕ್ಕೆ ನೀರು ತುಂಬಿಸಲು 3 ಅಡಿಯ ಪೈಪ್‌ ಹಾಕಲು ಅನುಮತಿ ಕೊಡಲ್ಲ. ಅಲ್ಲದೇ ಗುಹಾಂತರ ದೇವಾಲಯಗಳ ಮಾರ್ಗವಾಗಿ, ಅಗಸ್ತ್ಯತೀರ್ಥ ಹೊಂಡಕ್ಕೆ  ಪೈಪ್‌ಲೈನ್‌ ಮಾಡಲು ಬೇರೆ ಮಾರ್ಗವಿಲ್ಲ. ಹೀಗಾಗಿ ಕೆರೆ ತುಂಬುವಂತಹ ಯೋಜನೆ ಅಳವಡಿಸುವುದು ದುಸ್ಸಾಹಸದ ಕೆಲಸ ಎನ್ನುತ್ತಾರೆ ಪ್ರಜ್ಞಾವಂತರು.

ಸಿ ಆಕಾರದ ಗುಡ್ಡಗಳೇ ಆಸರೆ: ಅಗಸ್ತ್ಯತೀರ್ಥ ಹೊಂಡದ ಸುತ್ತಲೂ ಸಿ ಆಕಾರದ ಗುಡ್ಡಗಳಿವೆ. ಅದರಲ್ಲಿ ಪೂರ್ವ ಭಾಗದ ಮಹಾಕೂಟ ಭಾಗದ ಗುಡ್ಡ (ಕಾರಂಜಿ)ಗಳು ಸಿ ಆಕಾರದಲ್ಲಿವೆ. ಜತೆಗೆ ಅಕ್ಕ-ತಂಗಿ ದಿಡಗು ಮೂಲಕ ಈ ಹೊಂಡಕ್ಕೆ ನೀರು ಬರುತ್ತದೆ. ಅದು ಬಾದಾಮಿ ಸುತ್ತಲಿನ ಈ ಗುಡ್ಡಗಳ ಮೇಲೆ ಮಳೆ ಆದರೆ ಮಾತ್ರ. ಅದು ಅಕ್ಕ- ತಂಗಿ ದಿಡಗು, ಮಹಾಕೂಟ ಭಾಗದ ಗುಡ್ಡಗಳ ಮೂಲಕ ಬರುವ ಕಾರಂಜಿ ನೀರು ಹೊರತುಪಡಿಸಿದರೆ ಬೇರೆ ಜಲಮೂಲಗಳೇ ಇಲ್ಲ.

ಅಗಸ್ತ್ಯತೀರ್ಥ ಹೊಂಡ ಅದ್ಭುತ ಹಾಗೂ ಐತಿಹಾಸಿಕ ಪ್ರೇಕ್ಷಣೀಯ ಸ್ಥಳ. ನಮ್ಮ ಹಿರಿಯರು ಹೇಳುವಂತೆ ಇದು 1972ರಲ್ಲಿ ಬತ್ತಿತ್ತು. ಆ ಬಳಿಕ ಒಮ್ಮೆಯೂ ಬತ್ತಿರಲಿಲ್ಲ. ಈ ವರ್ಷ ಸಂಪೂರ್ಣ ಖಾಲಿಯಾಗಿದೆ. ಇದಕ್ಕೆ ಕೆರೆ ತುಂಬುವಂತಹ ಯೋಜನೆ ಕೈಗೊಳ್ಳುವುದು ದೂರದ ಮಾತು. ಹೊಂಡ ತುಂಬಲು ಮಳೆರಾಯನ ಕೃಪೆಯೇ ಬೇಕು.
– ಇಷ್ಟಲಿಂಗ ಶಿರಸಿ, ಸಾಮಾಜಿಕ ಹೋರಾಟಗಾರ, ಬಾದಾಮಿ

– ಶಶಿಧರ ವಸ್ತ್ರದ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.