ಮಾಸಾಶನ ಹೆಚ್ಚಳಕ್ಕೆ ಪ್ರಸ್ತಾವನೆ ಸಿದ್ಧ
Team Udayavani, Sep 22, 2018, 6:00 AM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಹಿತಿ ಮತ್ತು ಕಲಾವಿದರಿಗೆ ನೀಡುತ್ತಿರುವ 1500 ರೂ. ಮಾಸಾಶನ 2000 ರೂ.ಗೆ ಏರಿಸಲು ಪ್ರಸ್ತಾವನೆ ಸಿದ್ಧಗೊಂಡಿದೆ.
ಸಾಹಿತಿ -ಕಲಾವಿದರ ಮಾಸಾಶನ 2000 ರೂ.ಗೆ ಹೆಚ್ಚಿಸುವಂತೆ ಸಾಂಸ್ಕೃತಿ ನೀತಿಯಲ್ಲಿ ಪ್ರಸ್ತಾಪಿಸಲಾಗಿತ್ತು. ಇದೀಗ ರಾಜ್ಯ ಸರ್ಕಾರ ಸಾಂಸ್ಕೃತಿಕ ನೀತಿ ಹಂತ ಹಂತವಾಗಿ ಜಾರಿಗೊಳಿಸುತ್ತಿರುವುದರಿಂದ ಮಾಸಾಶನ ಹೆಚ್ಚಳ ಶಿಫಾರಸು ಸಹ ಜಾರಿಗೆ ಬರಲಿದೆ.
ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಸಾಶನ ಹೆಚ್ಚಳ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ 13 ಸಾವಿರ ಮಂದಿ ಮಾಸಾಶನ ಪಡೆದುಕೊಳ್ಳುತ್ತಿದ್ದಾರೆ. ಇದೀಗ ಮಾಸಾಶನ 1500 ರಿಮದ 2000 ರೂ.ಗೆ ಹೆಚ್ಚಿಸಿದರೆ ವಾರ್ಷಿಕ ವೆಚ್ಚ 20 ರಿಂದ 25 ಕೋಟಿ ರೂ.ಗೆ ಏರಲಿದೆ. ಆದರೆ, ಸಾವಿರಾರು ಕುಟುಂಬಗಳಿಗೆ ಅನುಕೂಲವಾಗುವುದರಿಂದ ತಕ್ಷಣ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಬೇಕು ಎಂದು ಮನವಿ ಮಾಡಲಾಗಿದೆ
ನಿಯಮಾವಳಿ ಪ್ರಕಾರ 58 ವರ್ಷ ಮೀರಿದ ಸಾಹಿತಿ-ಕಲಾವಿದರಿಗೆ ಮಾಸಾಶನ ನೀಡಲಾಗುತ್ತಿದ್ದುಅನಾರೋಗ್ಯದಿಂದ ಬಳಲುತ್ತಿರುವ 50 ವರ್ಷ ಮೀರಿದ ಸಾಹಿತಿ, ಕಲಾವಿದರಿಗೂ ಮಾಸಾಶನ ನೀಡಲು ತೀರ್ಮಾನಿಸಲಾಗಿದೆ.
ಅಲ್ಲದೆ, ಮಾಸಾಶನ ಪಡೆದುಕೊಳ್ಳುತ್ತಿದ್ದ ಕಲಾವಿದರು ಮೃತಪಟ್ಟ ನಂತರ ಅವರ ಪತ್ನಿಗೆ ನೀಡುತ್ತಿದ್ದ 500 ರೂ. ಮಾಸಾಶನವನ್ನು 1 ಸಾವಿರ ರೂ.ಗೆ ಹೆಚ್ಚಿಸುವ ಬಗ್ಗೆಯೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.
ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ತಮ್ಮ ಜೀವನ ಮುಡುಪಾಗಿಡುವ ಸಾಹಿತಿ, ಕಲಾವಿದರು ವೃದ್ಧಾಪ್ಯದಲ್ಲಿ ಜೀವನ ನಡೆಸಲು ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 58 ವರ್ಷ ಮೀರಿದ ಸಾಹಿತಿ ಕಲಾವಿದರಿಗೆ ಗೌರವಧನ ನೀಡುವ ಯೋಜನೆ ಜಾರಿಗೆ ತಂದಿತ್ತು. ನಂತರದಲ್ಲಿ ಅದನ್ನು ಮಾಸಾಶನ ಎಂದು ಬದಲಿಸಲಾಯಿತು.ವಿಶೇಷವೆಂದರೆ, ಇಲಾಖೆಯಿಂದ ಮೊಟ್ಟ ಮೊದಲ ಗೌರವಧನ ಪಡೆದುಕೊಂಡವರು ರಾಷ್ಟ್ರಕವಿ ಕುವೆಂಪು.
ಸಾಂಸ್ಕೃತಿಕ ನೀತಿ ಶಿಫಾರಸು
ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ರೂಪಿಸಿರುವ ಸಾಂಸ್ಕೃತಿಕ ನೀತಿಯಲ್ಲಿ ಸಾಹಿತಿ, ಕಲಾವಿದರಿಗೆ ನೀಡುತ್ತಿರುವ ಮಾಸಾಶನವನ್ನು 2 ಸಾವಿರ ರೂ.ಗೆ ಏರಿಸಬೇಕು ಎಂದು ಹೇಳಿತ್ತಲ್ಲದೆ, 50 ವರ್ಷ ಮೀರಿದ ಕಲಾವಿದರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೆ ಅವರನ್ನೂ ಮಾಸಾಶನಕ್ಕೆ ಪರಿಗಣಿಸಬೇಕು ಎಂದು ಶಿಫಾರಸು ಮಾಡಿತ್ತು.
2018-19ನೇ ಸಾಲಿನಲ್ಲಿ ಹೊಸದಾಗಿ ಮಾಸಾಶನಕ್ಕೆ ಒಂದೂವರೆ ಸಾವಿರಕ್ಕಿಂತ ಹೆಚ್ಚಿನ ಅರ್ಜಿಗಳು ಬಂದಿವೆ. ಅವುಗಳನ್ನು ಜಿಲ್ಲಾ ಸಹಾಯಕ ನಿರ್ದೇಶಕರು ಪರಿಶೀಲಿಸಿ ಅಕಾಡೆಮಿಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಅಕಾಡೆಮಿಯಿಂದ ಕಲಾವಿದರ ಸಂದರ್ಶನ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅರ್ಜಿಗಳನ್ನು ಕೇಂದ್ರ ಕಚೇರಿಗೆ ಪರಿಶೀಲಿಸಲು ಕಳುಹಿಸಲಾಗುತ್ತದೆ. ಕೇಂದ್ರ ಕಚೇರಿ ಮಸಾಶನ ನೀಡುವ ಸಮಿತಿಯಲ್ಲಿ ಅರ್ಜಿಗಳ ಕುರಿತು ಚರ್ಚಿಸಿ ಮಸಾಶನ ಮಂಜೂರು ಮಾಡಲಿದೆ.
ಕಲಾವಿದರು ಬಹಳ ದಿನಗಳಿಂದ ಮಸಾಶನ ಹೆಚ್ಚಳ ಮಾಡುವಂತೆ ಹಲವು ದಿನಗಳಿಂದ ಮನವಿ ಮಾಡುತ್ತಿದ್ದಾರೆ. ಸರ್ಕಾರಕ್ಕೂ ಹೊರೆಯಾಗದಂತೆ ಮಾಸಾಶನ ಹೆಚ್ಚಳ ಮಾಡಲು ಉದ್ದೇಶಿಸಲಾಗಿದೆ ಈ ಬಗ್ಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
– ಡಾ.ಜಯಮಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ.
– ಶೃತಿ ಮಲೆನಾಡತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್