ರಾಜ್ಯಪಾಲರಿಂದ ಕೇಂದ್ರಕ್ಕೆ ವರದಿ?
Team Udayavani, Sep 22, 2018, 6:00 AM IST
ಬೆಂಗಳೂರು: ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಜ್ಯಪಾಲ ವಜೂಭಾಯ್ ವಾಲಾ ಅವರು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ.ಶಾಸಕರಿಗೆ ಹಣ ಹಾಗೂ ಸಚಿವ ಸ್ಥಾನದ ಆಮಿಷ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸುವ ಪ್ರಯತ್ನದಂತಹ ಘಟನೆಗಳಿಂದ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಂಥದ್ದೊಂದು ವರದಿ ನೀಡಲಾಗಿದೆ ಎಂದು ಹೇಳಲಾಗಿದೆ.
ಶಾಸಕರಿಗೆ ಆಮಿಷವೊಡ್ಡಲಾಗುತ್ತಿದೆ ಎಂದು ಖುದ್ದು ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರ ಹೇಳಿಕೆಗಳು, ಸಿಎಂ ನೀಡಿರುವ ದಂಗೆ ಹೇಳಿಕೆ ಹಾಗೂ ಅದರ ವಿರುದ್ಧ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆ. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಂದಿರುವ ಮನವಿಗಳ ಬಗ್ಗೆಯೂ ವರದಿಯಲ್ಲಿ ಹೇಳಿದ್ದಾರೆ ಎನ್ನಲಾಗುತ್ತಿದೆ.ಜತೆಗೆ, ಈ ಸಂದರ್ಭದಲ್ಲಿ ರಾಜ್ಯಪಾಲರು ಅಥವಾ ರಾಷ್ಟ್ರಪತಿಯವರು ಮಧ್ಯಪ್ರವೇಶ ಮಾಡಲು ಸಾಧ್ಯತೆ ಇದೆಯೇ ಎಂಬ ಪ್ರಶ್ನೆಯೂ ಮೂಡಿದೆ.
ಎಸ್.ಆರ್.ಬೊಮ್ಮಾಯಿ ಪ್ರಕರಣದ ತೀರ್ಪಿನ ಪ್ರಕಾರ ಯಾವುದೇ ಒಂದು ಸರ್ಕಾರದ ಬಹುಮತ ಸಾಬೀತಾಗುವುದು ವಿಧಾನಸಭೆಯಲ್ಲಿ. ಮೇಲ್ನೋಟಕ್ಕೆ ಸದ್ಯ ತೀರಾ ಸಂವಿಧಾನಾತ್ಮಕ ಬಿಕ್ಕಟ್ಟು ಉಂಟಾಗಿರುವ ಪರಿಸ್ಥಿತಿಯಿಲ್ಲ. ಹೀಗಾಗಿ, ರಾಜ್ಯಪಾಲರು ಕೇಂದ್ರಕ್ಕೆ ವರದಿ ಸಲ್ಲಿಸುವ ಪ್ರಮೇಯ ಬರುವುದಿಲ್ಲ ಎಂದು ಕಾನೂನು ತಜ್ಞರು ಹೇಳುತ್ತಾರೆ.
ಆದರೆ, ಈ ಬೆಳವಣಿಗೆಯ ಬಗ್ಗೆ ರಾಜಭವನದ ಮೂಲಗಳು ವರದಿ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಮನವಿಗೆ ಬಲ ಇಲ್ಲ:
ಸಿಎಂ ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿಗೆ ಹೆಚ್ಚು ಬಲ ಇಲ್ಲ.ಹೀಗಾಗಿ, ಬಿಜೆಪಿಯ ದೂರು ಪ್ರಕಾರ ರಾಜ್ಯಪಾಲರು ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳಲು ಬರುವುದಿಲ್ಲ ಎಂದು ಹೇಳಲಾಗುತ್ತಿದೆ.
ಪೂರಕ ಅಂಶಗಳ ಆಧಾರದ ಮೇಲೆ ರಾಜ್ಯಪಾಲರು ಸೂಕ್ತ ನಿರ್ಧಾರ ಕೈಗೊಳ್ಳಬಹುದು. ಉದಾಹರಣೆಗೆ, ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದರೆ ರಾಜ್ಯಪಾಲರು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಿದ್ದರು. ನಿರ್ದಿಷ್ಟ ಕೋರಿಕೆ ಇಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರೆ ರಾಜ್ಯಪಾಲರು ಸ್ವಯಂ ಪ್ರೇರಿತವಾಗಿ ಕ್ರಮ ಕೈಗೊಳ್ಳುವ ಸಾಧ್ಯತೆ ಕಡಿಮೆ.
– ಬಿ.ವಿ. ಆಚಾರ್ಯ, ಮಾಜಿ ಅಡ್ವೋಕೇಟ್ ಜನರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Vande Bharat: 1.5 ವರ್ಷದಲ್ಲಿ ವಂದೇ ಭಾರತ್ಗೆ 50 ಬಾರಿ ಕಲ್ಲೆಸೆತ
Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು
Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್ಗೆ ದೂರು
Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ