ಸಿಎಂ ಆರೋಗ್ಯಕ್ಕಾಗಿ ಮೃತ್ಯುಂಜಯ ಹೋಮ:ಶೃಂಗೇರಿಯಲ್ಲಿ ಎಚ್ಡಿಡಿ
Team Udayavani, Sep 22, 2018, 1:41 PM IST
ಶೃಂಗೇರಿ: ಕುಮಾರಸ್ವಾಮಿ ಅವರಿಗೆ ಆರೋಗ್ಯ ಸಮಸ್ಯೆಯಿರುವ ಹಿನ್ನಲೆಯಲ್ಲಿ ಮೃತ್ಯುಂಜಯ ಹೋಮ ಮತ್ತು ಗಣಹೋಮ ನಡೆಸಿದ್ದೇವೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಶನಿವಾರ ಶೃಂಗೇರಿ ಶ್ರೀ ಶಾರದಾಂಬಾ ದೇಗುಲದಲ್ಲಿ ಎಚ್.ಡಿ.ದೇವೇಗೌಡ,ಪತ್ನಿ ಚೆನ್ನಮ್ಮ,ಸಿಎಂ ಎಚ್.ಡಿ.ಕುಮಾರಸ್ವಾಮಿ,ಪತ್ನಿ ಅನಿತಾ ಮತ್ತು ಸಚಿವ ಎಚ್.ಡಿ.ರೇವಣ್ಣ ಅವರು ವಿಶೇಷ ಹೋಮದಲ್ಲಿ ಭಾಗಿಯಾದರು.
ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಜಗದ್ಗುರು ಶ್ರೀ ಭಾರತೀ ತೀರ್ಥ ಶ್ರೀಗಳ ಆಶೀರ್ವಾದ ಪಡೆದರು.
ಸಿಎಂ ಕುಮಾರಸ್ವಾಮಿ ಅವರು ಕುರ್ಚಿ ಉಳಿಸಿಕೊಳ್ಳಲು ಯಾಗ ನಡೆಸಿದ್ದಲ್ಲ. ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿ ಎಂದರು.