ಸಮ್ಮಿಶ್ರ ಸರಕಾರ ಸ್ಥಿರ: ಪರಮೇಶ್ವರ್‌


Team Udayavani, Sep 23, 2018, 6:00 AM IST

g-parameshwara-2222.jpg

ಕಾರವಾರ: ಪ್ರಸಿದ್ಧ ಶಕ್ತಿದೇವತೆ ಸಾತೇರಿ ದೇವಿ ದರ್ಶನಕ್ಕೆ ಬಂದಿದ್ದೇನೆ. ಸರ್ಕಾರ ಉಳಿಸಿ ಎಂದು ಪ್ರಾರ್ಥಿಸಲು ಅಲ್ಲ. ಸರ್ಕಾರ ಸ್ಥಿರವಾಗಿದೆ. ಇದು ನನ್ನ ಖಾಸಗಿ ಭೇಟಿ ಎಂದು ಉಪ ಮುಖ್ಯಮಂತ್ರಿ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ಕಾರವಾರ ತಾಲೂಕಿನ ಹಣಕೋಣ ಸಮೀಪದ ಸಾತೇರಿ ದೇವಿ ದರ್ಶನಕ್ಕೆ ತೆರಳುವ ಮುನ್ನ ಕಾರವಾರ-ಗೋವಾ ಗಡಿಯಲ್ಲಿ ಮಾಜಾಳಿ ಚೆಕ್‌ಪೋಸ್ಟ್‌ ಬಳಿ ಸುದ್ದಿಗಾರರ ಜತೆ ಮಾತನಾಡಿ, ಸಾತೇರಿ ದೇವಿ ಶಕ್ತಿ ದೇವತೆ ಎಂದು ನಮ್ಮ ಪಕ್ಷದವರು ಹೇಳುತ್ತಿದ್ದರು. ಅದಕ್ಕಾಗಿ ಆಶೀರ್ವಾದ ಪಡೆಯಲು ಬಂದಿರುವೆ. ಮುಖ್ಯಮಂತ್ರಿ ಕುಮಾರಸ್ವಾಮಿ ಶೃಂಗೇರಿ ಹೋದದ್ದಕ್ಕೂ, ನಾನು ಇಲ್ಲಿ ಬಂದದ್ದಕ್ಕೂ ಸಂಬಂಧವಿಲ್ಲ. ಸರ್ಕಾರದ ಸ್ಥಿರತೆಗೆ ಹರಕೆ ಮಾಡಿಕೊಳ್ಳಲು ಬಂದಿಲ್ಲ. ಸಾತೇರಿಯಲ್ಲಿ ಪ್ರಾರ್ಥಿಸಲು ಬಂದಿರುವೆ ಎಂದರು.

ನಮ್ಮ ಪಕ್ಷದ ಶಾಸಕರು, ಜೆಡಿಎಸ್‌ ಶಾಸಕರು ಸ್ಥಿರವಾಗಿದ್ದಾರೆ. ಅವರು ಮುಂಬೈಗೆ ಹೋಗಿದ್ದರೆ ಅದು ಸ್ವಂತ ಕೆಲಸದ ಮೇಲೆ. ಎಲ್ಲದಕ್ಕೂ ಕತೆ ಕಟ್ಟುವುದು ಸರಿಯಲ್ಲ. ಸರ್ಕಾರವನ್ನು ಯಡಿಯೂರಪ್ಪ ಅಸ್ಥಿರಗೊಳಿಸಲು ಯತ್ನಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಅದರಲ್ಲಿ ಅವರು ಯಶಸ್ಸು ಪಡೆಯುವುದಿಲ್ಲ. ಶಾಸಕರಿಗೆ ಆಮಿಷ ಒಡ್ಡುವ ಮಟ್ಟಕ್ಕೆ ಬಿಜೆಪಿ ಇಳಿದಿದೆ ಎಂದು ಆರೋಪಿಸಿದರು.ನಿರಂತರವಾಗಿ ಬಿಜೆಪಿ ನಮ್ಮ ಸರ್ಕಾರಕ್ಕೆ ಕಿರುಕುಳ ಕೊಡುತ್ತಿದೆ. 

ಕುಮಾರಸ್ವಾಮಿಯನ್ನು ಅಸ್ಥಿರ ಮಾಡಲು ಯತ್ನಿಸುತ್ತಿದೆ. ಆ ಸಿಟ್ಟಿನಲ್ಲಿ ಜನ ದಂಗೆ ಏಳುತ್ತಾರೆ ಎಂದಿದ್ದಾರೆ. ಎಲ್ಲವನ್ನೂ ಅಕ್ಷರಶಃ ಅರ್ಥೈಸಬಾರದು. ಭಾವೋದ್ವೇಗದಲ್ಲಿ ಹೇಳಿದ ಮಾತಿಗೆ ಏನೇನೋ ಕಲ್ಪಿಸಿಕೊಳ್ಳುವುದು ಸರಿಯಲ್ಲ. ದೇಶಪಾಂಡೆ ಹಿರಿಯರು, ಸಚಿವರಾಗಿದ್ದಾರೆ. ಹಾಗೆಯೇ ಶಿವರಾಮ ಹೆಬ್ಟಾರ ಸರದಿ ಬರಲಿದೆ. ಅವರು ಕಾಯಬೇಕು. ಕಾಂಗ್ರೆಸ್‌ನಲ್ಲಿ ಮಾತ್ರ ಎಲ್ಲರಿಗೂ ಅವಕಾಶ ಸಿಗಲು ಸಾಧ್ಯ. ಎಲ್ಲರಿಗೂ ಸಮಾನ ಅವಕಾಶ ಕಾಂಗ್ರೆಸ್‌ ಪಕ್ಷದಲ್ಲಿದೆ ಎಂದರು.

ಮೂಗುತಿ ಪಡೆದ ಪರಮೇಶ್ವರ
ಹಣಕೋಣದ ಸಾತೇರಿ ದೇವಿ ಜಾತ್ರೆಯಲ್ಲಿ ಪಾಲ್ಗೊಂಡ ಅವರು ದೇವರಿಗೆ ಬಂದ ಕಾಣಿಕೆಗಳ ಹರಕೆಯ ಸಂಪ್ರದಾಯದಲ್ಲಿ ಭಾಗಿಯಾದರು. ವರ್ಷದಲ್ಲಿ ಏಳು ದಿನ ಮಾತ್ರ ಬಾಗಿಲು ತೆರೆಯುವ ಸಂಪ್ರದಾಯದ ಸಾತೇರಿ ದೇವಿಯ ಜಾತ್ರೆಯಲ್ಲಿ ದೇವಿಗೆ ಹರಕೆ ರೂಪದಲ್ಲಿ ಬಂದ ಬಂಗಾರದ ಆಭರಣ ಮತ್ತು ಸೀರೆಯನ್ನು ಭಕ್ತರಿಗೆ ಹರಾಜು ಹಾಕುವ ಪದ್ಧತಿ ಇದೆ. ಹರಾಜು ಕ್ರಿಯೆಯನ್ನು ಗಮನಿಸಿದ ಉಪ ಮುಖ್ಯಮಂತ್ರಿಗಳು ತಾವೂ ದೇವಿಗೆ ಹರಕೆ ರೂಪದಲ್ಲಿ ಬಂದಿದ್ದ ಮೂಗುತಿ ಖರೀದಿಸಿದರು. 15,101 ರೂ.ಗಳಿಗೆ ಮೂಗುತಿ ಪರಮೇಶ್ವರ ಕೈಗೆ ಬಂತು. ಅದನ್ನು ಅವರು ಭಕ್ತಿಯಿಂದ ಸ್ವೀಕರಿಸಿದರು.

ಸಾತೇರಿ ದೇವಿಗೆ ಇದೇ ವೇಳೆ ಅವರು ಹರಕೆ ಹೊತ್ತಿದ್ದು, ಆ ಗುಟ್ಟನ್ನು ಮಾತ್ರ ಬಿಟ್ಟು ಕೊಟ್ಟಿಲ್ಲ. ಸರ್ಕಾರದ ರಕ್ಷಣೆಯ ಬೇಡಿಕೆಯನ್ನು ಸಾತೇರಿ ದೇವಿಯಲ್ಲಿ ಕೋರಲಾಗಿದೆ. ದೇವಿಯಲ್ಲಿ ಹೊತ್ತ ಹರಕೆ ಇದುವರೆಗೆ ಸುಳ್ಳಾಗಿಲ್ಲ ಎಂಬ ಬಲವಾದ ನಂಬಿಕೆ ಇಲ್ಲಿನ ಜನರಲ್ಲಿದೆ. ಸರ್ಕಾರದ ರಕ್ಷಣೆಗಾಗಿಯೇ ಡಿಸಿಎಂ ಅವರನ್ನು ಸಾತೇರಿ ದೇವಿಯ ದರ್ಶನಕ್ಕೆ ಕರೆಸಿದ್ದೆವು ಎಂದು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಹೇಳಿಕೊಂಡರು.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.