ವಲಯವಾರು ಕೃಷಿ ನೀತಿಗೆ ಜಾರಿಗೆ ಚಿಂತನೆ: ಎನ್‌.ಎಚ್‌.ಶಿವಶಂಕರರೆಡ್ಡಿ


Team Udayavani, Sep 23, 2018, 6:00 AM IST

n-h-shivashankara-redd.jpg

ಬೆಂಗಳೂರು: ರಾಜ್ಯದಲ್ಲಿನ ಭೌಗೋಳಿಕ ವೈವಿಧ್ಯತೆ ಹಾಗೂ ಆಗಾಗ ಉಂಟಾಗುತ್ತಿರುವ ಹವಾಮಾನ ವೈಪರಿತ್ಯವನ್ನು ಆಧರಿಸಿ “ವಲಯವಾರು ಕೃಷಿ ನೀತಿ’ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಕೃಷಿ ಸಚಿವ ಎನ್‌.ಎಚ್‌. ಶಿವಶಂಕರ ರೆಡ್ಡಿ ಹೇಳಿದ್ದಾರೆ.

ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಬ್ಯಾಂಕ್‌ ನೆರವಿನ ಸುಜಲ-3 ಯೋಜನೆಯಡಿ “ಭೂ ಸಂಪನ್ಮೂಲ ಮಾಹಿತಿ (ಎಲ್‌ಆರ್‌ಐ) ಪಾಲುದಾರರ’ ರಾಜ್ಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಈಗಗಾಲೇ ರಾಜ್ಯ ಮಟ್ಟದಲ್ಲಿ ಕೃಷಿ ನೀತಿ ಜಾರಿಯಲ್ಲಿದೆ. ಆದರೆ, ಈಗ ಅದರ ಮುಂದುವರಿದ ಭಾಗವಾಗಿ ರಾಜ್ಯದ 10 ಕೃಷಿ ವಲಯಗಳ ಪೈಕಿ ಆಯಾ ವಲಯಗಳ ಹವಾಮಾನ, ಸರಾಸರಿ ಮಳೆ ಪ್ರಮಾಣ, ಮಳೆ ಅವಧಿ, ಹವಾಗುಣ, ಭೌಗೋಳಿಕ ವೈವಿಧ್ಯತೆ, ಮಣ್ಣಿನ ಫ‌ಲವತ್ತತೆ, ಸಾಂಪ್ರದಾಯಿಕ ಬೆಳೆಗಳು, ಇಳುವರಿ ಇವೆಲ್ಲವುಗಳನ್ನು ಆಧರಿಸಿ ವಲಯವಾರು ಕೃಷಿ ನೀತಿ ಜಾರಿಗೆ ಚಿಂತನೆ ನಡೆದಿದೆ. ಸಮಗ್ರ ಕೃಷಿಯ ಬೆಳವಣಿಗೆ ಹಾಗೂ ರೈತನ ಬದುಕು ಸ್ವಾವಲಂಬಿಯನ್ನಾಗಿ ಮಾಡಬೇಕು ಅನ್ನುವುದು ಇದರ ಉದ್ದೇಶ ಎಂದು  ತಿಳಿಸಿದರು.

“ಸುಜಲ’ ವಿಸ್ತರಣೆಗೆ ಮನವಿ: ಸದ್ಯ ರಾಜ್ಯದ ಬೀದರ್‌, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ದಾವಣಗೆರೆ, ಚಾಮರಾಜನಗರ, ವಿಜಯಪುರ, ತುಮಕೂರು, ಚಿಕ್ಕಮಗಳೂರು ಹಾಗೂ ರಾಯಚೂರು ಸೇರಿ 11 ಜಿಲ್ಲೆಗಳಲ್ಲಿ ವಿಶ್ವ ಬ್ಯಾಂಕಿನ ಆರ್ಥಿಕ ನೆರವಿನಿಂದ ಸುಜಲ-3 ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಿಗೆ ಈ ಯೋಜನೆಯನ್ನು ವಿಸ್ತರಿಸುವಂತೆ ಈ ವೇಳೆ ವಿಶ್ವ ಬ್ಯಾಂಕ್‌ ಪ್ರತಿನಿಧಿಗಳಿಗೆ ಮನವಿ ಮಾಡಿದ ಕೃಷಿ ಸಚಿವರು, ಇದಕ್ಕೆ ಬೇಕಾದ ಸಿದ್ಧತೆಗಳನ್ನು ಮುಂದಿನ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದರು.

ಭೂ ಸಂಪನ್ಮೂಲ ಮಾಹಿತಿ ಯೋಜನೆ ಕುರಿತು ಪ್ರಾತ್ಯಾಕ್ಷಿಕೆ ನೀಡಿದ ಯೋಜನಾ ನಿರ್ದೇಶಕ ಪ್ರಭಾಷ್‌ಚಂದ್ರ ರೇ, ರಾಜ್ಯದ 11 ಜಿಲ್ಲೆಗಳಲ್ಲಿ 2013-14ನೇ ಸಾಲಿನಿಂದ ಸುಜಲ ಯೋಜನೆಯನ್ನು ಆಯ್ದ ಜಿಲ್ಲೆಗಳ 2,531 ಕಿರು ಜಲಾಶಯಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಜಲಾನಯನ ಪ್ರದೇಶಗಳಲ್ಲಿನ ಭೂ ಸಂಪನ್ಮೂಲಗಳ ಅಧ್ಯಯನ ಕೈಗೊಂಡು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಮಾಹಿತಿಯನ್ನು ವಿವಿಧ ಅಭಿವೃದ್ಧಿ ಇಲಾಖೆಗಳಿಗೆ, ಸಂಸ್ಥೆಗಳಿಗೆ ಹಾಗೂ ರೈತರಿಗೆ ದೊರೆಯುವಂತೆ ಡಿಜಿಟಲ್‌ ಗ್ರಂಥಾಲಯ, ನಿರ್ಣಯ ಬೆಂಬಲ ವ್ಯವಸ್ಥೆ (ಡಿಎಸ್‌ಎಸ್‌), ಭೂ ಸಂಪನ್ಮೂಲ ಪೋರ್ಟಲ್‌ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಯೋಜನೆಗೆ ಈವರೆಗೆ 250 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಎಂ. ಮಹೇಶ್ವರ್‌ರಾವ್‌  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.