ಎಚ್ಡಿಕೆ ಕೆಟ್ಟ, ಕ್ರೂರ ಸಿಎಂ: ಈಶ್ವರಪ್ಪ
Team Udayavani, Sep 23, 2018, 6:20 AM IST
ಕೊಪ್ಪಳ: ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಂಡ ಅತ್ಯಂತ ಕೆಟ್ಟ-ಕ್ರೂರ ಮುಖ್ಯಮಂತ್ರಿಯಾಗಿದ್ದಾರೆ. ಗೂಂಡಾಗಿರಿ ಸರ್ಕಾರದ ವೈಖರಿಗೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ದಂಗೆ ಏಳುವ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕುಮಾರಸ್ವಾಮಿ ಅವರ ಇನ್ನೊಂದು ಮುಖ ನೋಡಿದ್ದಾರೆ. ಎಲ್ಲ ಅಧಿ ಕಾರವೂ ನನಗೇ ಬೇಕು ಎನ್ನುವ ಸ್ವಭಾವದವರಾಗಿದ್ದಾರೆ. ಇವರೊಬ್ಬ ಗೂಂಡಾ ಸಿಎಂ, ಗೂಂಡಾ ಸರ್ಕಾರವಾಗಿದೆ ಎಂದರು.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ದಂಗೆ ಹೇಳಿಕೆ ಬಗ್ಗೆ ಮೌನ ವಹಿಸಿರುವುದೇಕೆ? ಸಿಎಂ ಹೇಳಿಕೆಗೆ ನಿಮ್ಮ ಬೆಂಬಲ ಇದೆಯೋ? ಇಲ್ಲವೋ ಎನ್ನುವುದನ್ನು ಜನರ ಮುಂದೆ ತಿಳಿಸಬೇಕು. ಇಷ್ಟಾದರೂ ಸಿದ್ದರಾಮಯ್ಯ ಅವರು ಅಹಂಕಾರದಿಂದ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ಅವಕಾಶವಾದಿ ರಾಜಕಾರಣ ಮಾಡಿ, ಗೂಂಡಾಗಳಿಂದ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಿಸಿದೆ ಎಂದರು.
ದಂಗೆ ಹೇಳಿಕೆಯ ಬಗ್ಗೆ ಹಿರಿಯರಾದ ದೇವೇಗೌಡರಾದರೂ ಖಂಡಿಸಬಹುದಿತ್ತು. ಆದರೆ, ಅವರೂ ಖಂಡಿಸಿಲ್ಲ. ಈ ಕುರಿತು ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದ್ದು, ಅವರು ಕೂಡಲೇ ಮಧ್ಯಪ್ರವೇಶಿಸಲಿ. ಸಿಎಂ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲಿ. ಮೈತ್ರಿ ಸರ್ಕಾರ ಬಿದ್ದರೆ ನಾವೇನು ಮೌನ ವಹಿಸಲ್ಲ. ನಾವೇನು ಸನ್ಯಾಸಿಗಳಲ್ಲ, ಯಾವುದೇ ಶಾಸಕರಿಗೂ ನಾವು ಆಫರ್ ಕೊಟ್ಟಿಲ್ಲ. ಒಂದು ವೇಳೆ ಬಿಜೆಪಿಗೆ ಬರುತ್ತೇನೆ ಎಂದರೆ ನಾವು ಬೇಡ ಅನ್ನೊದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ