ಅತೃಪ್ತರ ಹಿಡಿದಿಟ್ಟುಕೊಳ್ಳಲು ಮುಂದುವರಿದ ಕಸರತ್ತು


Team Udayavani, Sep 24, 2018, 6:15 AM IST

ban24091807medn.jpg

ಬೆಂಗಳೂರು: ಅತೃಪ್ತ ಕಾಂಗ್ರೆಸ್‌ ಶಾಸಕರ ಮನವೊಲಿಕೆ ಹಾಗೂ ಹಿಡಿದಿಟ್ಟುಕೊಳ್ಳುವ ಕಸರತ್ತು ಭಾನುವಾರವೂ ಮುಂದುವರಿದಿದ್ದು, ಚೆನ್ನೈಗೆ ಹೋಗಿದ್ದ ಮೂವರು ಶಾಸಕರು ನಗರಕ್ಕೆ ವಾಪಸ್‌ ಆಗಿದ್ದಾರೆ.

ಎಂ.ಟಿ.ಬಿ.ನಾಗರಾಜ್‌ ಜತೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಸುಧಾಕರ್‌ ಜತೆ ಸಿದ್ದರಾಮಯ್ಯ ಮಾತನಾಡಿ ಆತುರದ ತೀರ್ಮಾನ ಕೈಗೊಳ್ಳದಂತೆ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ.

ಮತ್ತೂಂದೆಡೆ ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್‌ ಜತೆಗೂ ಸಿದ್ದರಾಮಯ್ಯ ಮಾತನಾಡಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಚೆನ್ನೈನತ್ತ ಹೊರಟಿದ್ದ ಮೂವರು ಶಾಸಕರನ್ನು ಶನಿವಾರ ರಾತ್ರಿಯೇ ಸಂಪರ್ಕಿಸಿದ್ದ ಸಿದ್ದರಾಮಯ್ಯ ವಾಪಸ್‌ ಬರುವಂತೆ ತಿಳಿಸಿದ್ದರು. ದೇವಾಲಯಕ್ಕೆ ಹೋಗಿರುವುದಾಗಿ ಸಮಜಾಯಿಷಿ ನೀಡಿದ್ದ ಅವರು ಭಾನುವಾರ ಮುಂಜಾನೆ ಬೆಂಗಳೂರಿಗೆ ವಾಪಸ್ಸಾದರು.

ನಂತರ ಸಚಿವರಾದ ಡಿ.ಕೆ.ಶಿವಕುಮಾರ್‌, ಕೃಷ್ಣ ಬೈರೇಗೌಡ, ಜಮೀರ್‌ ಅಹಮದ್‌ ಅವರು ಎಂ.ಟಿ.ಬಿ.ನಾಗರಾಜ್‌ ಅವರ ನಿವಾಸಕ್ಕೇ ಹೋಗಿ ಸಂಧಾನ ಮಾತುಕತೆ ನಡೆಸಿದರು. ಮತ್ತೂಂದೆಡೆ ಸುಧಾಕರ್‌ ನಿವಾಸಕ್ಕೆ ಜಮೀರ್‌ ಅಹಮದ್‌ ಭೇಟಿ ನೀಡಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಅಥವಾ ಬಿಜೆಪಿ ಸೇರುವ ನಿರ್ಧಾರ ಕೈಗೊಳ್ಳಬೇಡಿ ಎಂದು ಮನವೊಲಿಸಿದರು.

ನಂತರ ಎಂ.ಟಿ.ಬಿ.ನಾಗರಾಜ್‌ ಅವರನ್ನು ಕುಮಾರಕೃಪ ಅತಿಥಿಗೃಹಕ್ಕೆ ಕರೆಸಿ ಕೆ.ಸಿ.ವೇಣುಗೋಪಾಲ್‌ ಜತೆ ಮಾತನಾಡಿಸಿದರು. ದಿನೇಶ್‌ಗುಂಡೂರಾವ್‌ ಸಹ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವೇಣುಗೋಪಾಲ್‌ ಅವರು ನಾಗರಾಜ್‌ ಅವರಿಗೆ ಸೂಕ್ತ ಅವಕಾಶದ ಭರವಸೆ ನೀಡಿದರು. ಮತ್ತೂಂದೆಡೆ ಸುಧಾಕರ್‌, ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಸುಧಾಕರ್‌ ನಡೆ ಬಗ್ಗೆ ಸಿದ್ದರಾಮಯ್ಯ ಅತೃಪ್ತಿ ವ್ಯಕ್ತಪಡಿಸಿದರು. ನೀನು ನನ್ನ ಜತೆ ಗುರುತಿಸಿಕೊಂಡು ಈ ರೀತಿ ಮಾಡಿದರೆ ಹೇಗೆ? ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವ ಹೊಣೆ ನನಗೆ ಪಕ್ಷ ಕೊಟ್ಟಿದೆ. ನಿನ್ನ ಸಮಸ್ಯೆ ಇದ್ದರೆ ಬಗೆಹರಿಸಲಾಗುವುದು. ಪಕ್ಷದ ಜತೆ ಇರಬೇಕೆಂದು ಕಿವಿಮಾತು ಹೇಳಿದರು ಎಂದು ತಿಳಿದು ಬಂದಿದೆ.

ಕಾರ್ಯತಂತ್ರ: ಈ ಮಧ್ಯೆ, ವಿಧಾನಪರಿಷತ್‌ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ 8 ಶಾಸಕರನ್ನು ಸೆಳೆಯುವ ಬಿಜೆಪಿ ತಂತ್ರ ವಿಫ‌ಲಗೊಳಿಸುವ ಬಗ್ಗೆಯೂ ಕೆ.ಸಿ.ವೇಣುಗೋಪಾಲ್‌, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಜಮೀರ್‌ ಅಹಮದ್‌, ದಿನೇಶ್‌ ಗುಂಡೂರಾವ್‌ ಚರ್ಚಿಸಿದರು.

ಬಿಜೆಪಿ ನಾಯಕರು ಯಾರನ್ನು ಸಂಪರ್ಕಿಸಿದ್ದಾರೋ ಅವರ ಮೇಲೆ ನಿಗಾ ಇಡುವುದು. ಜತೆಗೆ ಬಿಜೆಪಿಗೆ ಅಡ್ಡ ಮತದಾನ ಮಾಡದಂತೆ ಮನವೊಲಿಸಲು ತೀರ್ಮಾನಿಸಲಾಯಿತು. ಪರಿಷತ್‌ ಚುನಾವಣೆ ಸಮ್ಮಿಶ್ರ ಸರ್ಕಾರಕ್ಕೆ ಪ್ರತಿಷ್ಠೆಯಾಗಿದ್ದು ಯಾವುದೇ ಕಾರಣಕ್ಕೂ ಹಿನ್ನಡೆಯುಂಟಾಗಬಾರದು. ಅಲ್ಲಿ ಹಿನ್ನೆಡೆಯಾದರೆ ಅದು ನಂತರ ಸಮ್ಮಿಶ್ರ ಸರ್ಕಾರಕ್ಕೂ ಕಂಟಕವಾಗಬಹುದೆಂಬ ಅಭಿಪ್ರಾಯ ವೇಣುಗೋಪಾಲ್‌ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದು ಹೇಳಲಾಗಿದೆ.

ಪಕ್ಷದ ಮುಂಚೂಣಿ ಘಟಕಗಳ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಕೆ.ಸಿ.ವೇಣುಗೋಪಾಲ್‌ ಅವರು ಡಾ.ಜಿ.ಪರಮೇಶ್ವರ್‌ ಹಾಗೂ ದಿನೇಶ್‌ಗುಂಡೂರಾವ್‌ ಅವರ ಜತೆಯೂ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿ ಎಲ್ಲರೂ ಜತೆಯಾಗಿ ಬಿಜೆಪಿ ಎದುರಿಸಿ ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡಬೇಡಿ ಎಂದು ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ನಾನೂ ಸಚಿವ ಸ್ಥಾನದ ಆಕಾಂಕ್ಷಿ, ಅಧಿಕಾರ ಬೇಡ ಎನ್ನಲು ನಾನು ಸನ್ಯಾಸಿಯಲ್ಲ. ಕೆಲವೊಂದು ಸಮಸ್ಯೆಗಳ ಬಗ್ಗೆ ವೇಣುಗೋಪಾಲ್‌ ಅವರ ಬಳಿ ಚರ್ಚಿಸಿದ್ದೇನೆ. ಭರವಸೆ ದೊರೆತಿದೆ. ಸಿದ್ದರಾಮಯ್ಯ ಅವರು ಮೊದಲಿನಿಂದಲೂ ನನಗೆ ಆತ್ಮೀಯ ಸ್ನೇಹಿತರು. ಸೋಮವಾರ ಅವರನ್ನೂ ಭೇಟಿ ಮಾಡಿ ಮಾತನಾಡಲಿದ್ದೇನೆ.
– ಎಂ.ಟಿ.ಬಿ.ನಾಗರಾಜ್‌,  ಶಾಸಕ

ರಾಹುಲ್‌ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ನಮ್ಮ ನಾಯಕರು. ನಮ್ಮ ಸಮಸ್ಯೆಗಳನ್ನು ಅವರ ಬಳಿ ಹೇಳಿಕೊಳ್ಳುತ್ತೇವೆ. ನನಗೆ ಬ್ಲಾಕ್‌ವೆುàಲ್‌ ಗೊತ್ತಿಲ್ಲ, ನನಗೆ ಗೊತ್ತಿರುವುದು  ಈ ಮೇಲ್‌ ಮಾತ್ರ.
– ಸುಧಾಕರ್‌,  ಶಾಸಕ

ಎಂ.ಟಿ.ಬಿ.ನಾಗರಾಜ್‌ ಅವರು ನಿಷ್ಠಾವಂತ ಕಾಂಗ್ರೆಸ್‌ನ ಮುಖಂಡರು. ಹಿರಿಯ ಶಾಸಕರು, ಮೂರು ಬಾರಿ ಗೆದ್ದಿದ್ದಾರೆ. ಹೊಸಕೋಟೆಯಲ್ಲಿ ಮೂರು ಬಾರಿ ಗೆಲ್ಲುವುದು ಸಾಮಾನ್ಯ ವಿಷಯವಲ್ಲ. ಸಚಿವ ಸ್ಥಾನ ಕೇಳುವುದು ಸಹಜ. ಅವರಿಗೆ ಪಕ್ಷದಲ್ಲಿ ಉತ್ತಮ ಭವಿಷ್ಯವಿದೆ. ಅವರು ನಮ್ಮೊಂದಿಗೆ ಇರುತ್ತಾರೆ.
– ಡಿ.ಕೆ.ಶಿವಕುಮಾರ್‌, ಸಚಿವ

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.