ಕಾಂಗ್ರೆಸ್‌ನಲ್ಲಿ ಮತ್ತೆ “ಹಿಡಿತ’ ಹೆಚ್ಚಿಸಿಕೊಂಡ ಸಿದ್ದರಾಮಯ್ಯ


Team Udayavani, Sep 24, 2018, 6:20 AM IST

sidda-kgaf-621x414livemint.jpg

ಬೆಂಗಳೂರು:ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್‌ ಹಾಗೂ ಸರ್ಕಾರದಲ್ಲಿ ಮತ್ತೆ ತಮ್ಮ ಹಿಡಿತಕ್ಕೆ ಹೆಚ್ಚಿಸಿಕೊಳ್ಳಲು ಆರಂಭಿಸಿದ್ದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತೆರೆಮರೆಗೆ ಸರಿಯುವಂತಾಗಿದೆ.

ಇತ್ತೀಚೆಗಿನ ವಿದ್ಯಮಾನಗಳಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಹ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಬಂಡಾಯ ಸಾರಿರುವ ಪಕ್ಷದ ಶಾಸಕರನ್ನು ಸಮಾಧಾನಪಡಿಸಿಲು ಅಂತಿಮವಾಗಿ ಸಿದ್ದರಾಮಯ್ಯ ಮೊರೆ ಹೋಗಿದ್ದು ಇದಕ್ಕೆ ಸಾಕ್ಷಿ.

ಆಪರೇಷನ್‌ ಕಮಲ ಕಾರ್ಯಾಚರಣೆ ತಡೆಯುವ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಪೂರ್ಣಪ್ರಮಾಣದಲ್ಲಿ ಸಫ‌ಲವಾಗಲಿಲ್ಲ. ಇದನ್ನು ಮನಗಂಡ ಹೈಕಮಾಂಡ್‌ ಸಿದ್ದರಾಮಯ್ಯ ಅವರ ಹೆಗಲಿಗೆ ಹೊಣೆ ಹೊರಿಸಿದೆ ಎಂದು ಹೇಳಲಾಗಿದೆ.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸಹ ದೆಹಲಿಗೆ ಕರೆಸಿಕೊಂಡು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾಗಬಾರದು. ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಹೋಗದಂತೆ ತಡೆಯಬೇಕು. ರಾಜ್ಯ ನಾಯಕರ ಜತೆಗೂಡಿ ನೀವೇ ಆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌, ಕಾರ್ಯಾಧ್ಯಕ್ಷ  ಈಶ್ವರ್‌ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ದೌಡಾಯಿಸಿದರು. ಸಿದ್ದರಾಮಯ್ಯ ಅವರ ರಂಗಪ್ರವೇಶದ ನಂತರವಷ್ಟೇ ಜಾರಕಿಹೊಳಿ ಸಹೋದರರ ಅಸಮಾಧಾನ ಸೇರಿ ಅತೃಪ್ತ ಕಾಂಗ್ರೆಸ್‌ ಶಾಸಕರ ಬಂಡಾಯ ತಣ್ಣಗಾಯಿತು.

ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ  ಒಂದು ಹಂತದಲ್ಲಿ ಸಿದ್ದರಾಮಯ್ಯ ಮೂಲೆಗುಂಪಾದಂತೆ ಕಂಡುಬಂದಿತ್ತು. ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾದ ಡಾ.ಜಿ.ಪರಮೇಶ್ವರ್‌ ಅವರು ಪಕ್ಷದಲ್ಲೂ ತಮ್ಮ ಹಿಡಿತ ಸಾಧಿಸಲು ಲೋಕಸಭೆ ಚುನಾವಣೆವರೆಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಯತ್ನಿಸಿದರು. ಅದು ಸಾಧ್ಯವಾಗದಿದ್ದಾಗ ಉಪ ಮುಖ್ಯಮಂತ್ರಿಯಾಗಿ ಪಕ್ಷ ಹಾಗೂ ಸರ್ಕಾರದ ಮೇಲೂ ಹಿಡಿತ ಇಟ್ಟುಕೊಂಡು ಶಕ್ತಿಕೇಂದ್ರವಾಗಲು ಯತ್ನಿಸಿದರು.

ಆದರೆ, ಕ್ಷೇತ್ರಗಳ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ಡಾ.ಜಿ.ಪರಮೇಶ್ವರ್‌ ಅವರ ಬಳಿ ಹೋದರೆ ಸ್ಪಂದಿಸುವುದಿಲ್ಲ ಎಂಬ ಆರೋಪ ಹೆಚ್ಚಾಯಿತು. ಅತ್ತ ಕೆಪಿಸಿಸಿ ಅಧ್ಯಕ್ಷರೂ ಮಾತೂ ಸರ್ಕಾರ ಹಾಗೂ ಪಕ್ಷದಲ್ಲಿ ನಡೆಯುತ್ತಿಲ್ಲ ಎಂಬಂತಾಯಿತು.

ಹೀಗಾಗಿ ಬೇಸತ್ತ ಶಾಸಕರು ತಮ್ಮ ಕೆಲಸ ಕಾರ್ಯಗಳಿಗೆ, ಅಳಲು ತೋಡಿಕೊಳ್ಳಲು ಸಿದ್ದರಾಮಯ್ಯನ ಮೊರೆ ಹೋದರು ಎನ್ನಲಾಗುತ್ತಿದೆ. ಅಲ್ಲದೇ ಸಿದ್ದರಾಮಯ್ಯ ತಮ್ಮನ್ನು ನಂಬಿ ಬಂದ ಶಾಸಕರಿಗೆ ಆತ್ಮವಿಶ್ವಾಸ ಮೂಡಿಸುವ ಮೂಲಕ ಪಕ್ಷದ ನಾಯಕತ್ವವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುವ ಕಾರ್ಯವನ್ನು ಸದ್ದಿಲ್ಲದೆ ನಡೆಸಿದರು.

ಪರಂ ಪರದಾಟ
ಈ ಮಧ್ಯೆ, ಉಪ ಮುಖ್ಯಮಂತ್ರಿಯಾಗಿ ಪಕ್ಷ ಹಾಗೂ ಸರ್ಕಾರದಲ್ಲಿ ತಮ್ಮದೇ ಆದ ಹಿಡಿತ ಸಾಧಿಸಲು ಪರಮೇಶ್ವರ್‌ ಪರದಾಡುತ್ತಿದ್ದಾರೆ.  ಪಕ್ಷ ಹಾಗೂ ಸರ್ಕಾರದಲ್ಲಿ ನಡೆಯುವ  ಬೆಳವಣಿಗೆಗಳು ನಡೆದರೂ ಅವರ ಗಮನಕ್ಕೆ ಬಾರದೇ ನಡೆಯುತ್ತಿರುವುದು ಕಂಗೆಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿದ್ದಾಗ  ಪರಮೇಶ್ವರ್‌ ಬೆಳಗಾವಿ ಜಿಲ್ಲಾ ನಾಯಕರ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸದೇ ಇರುವುದಕ್ಕೆ ಪಕ್ಷದಲ್ಲಿ ದೊಡ್ಡ ಮಟ್ಟದ ಬಂಡಾಯ ಭುಗಿಲೇಳಲು ಕಾರಣವಾಯಿತು  ಎಂಬ ಆರೋಪ ಪಕ್ಷದ ವಲಯದಲ್ಲಿದೆ.

ಜಾರಕಿಹೊಳಿ ಸಹೋದರರ ಬಂಡಾಯ ಆರಂಭವಾದಾಗ ಸರ್ಕಾರದ ಪ್ರಮುಖರಾಗಿ ರಮೇಶ್‌ ಜಾರಕಿಹೊಳಿಯನ್ನು ಕರೆದು ಸಮಾಧಾನ ಪಡಿಸುವ ಪ್ರಯತ್ನ ಮಾಡಿದರೂ, ಇವರ ಮಾತಿಗೆ ಜಾರಕಿಹೊಳಿ ಬೆಲೆ ಕೊಡದೇ ಸಿದ್ದರಾಮಯ್ಯ ಬರುವವರೆಗೂ ತಮ್ಮ ಹಠ ಹಿಡಿಕೊಂಡು ಕುಳಿತರು.  ಈ ಎಲ್ಲ ಘಟನೆಗಳು ಪರಮೇಶ್ವರ್‌ ಪಕ್ಷದ ಶಾಸಕರ ಮೇಲೆ ಹಿಡಿತಹೊಂದಿಲ್ಲ ಎಂಬ ಸಂದೇಶ ರವಾನೆಯಾಗಲು ಕಾರಣವಾಗಿವೆ ಎಂದು ಹೇಳಲಾಗಿದೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.