ಅಪಘಾತದಲ್ಲಿ ನಟ ದರ್ಶನ್‌ ಸೇರಿ ಮೂವರಿಗೆ ಗಾಯ​​​​​​​


Team Udayavani, Sep 25, 2018, 6:00 AM IST

challenging-star-darshan.jpg

ಮೈಸೂರು: ನಗರದ ಹೆಬ್ಟಾಳು ರಿಂಗ್‌ರಸ್ತೆಯಲ್ಲಿ ಸೋಮವಾರ ಮುಂಜಾನೆ 3.30ರ ವೇಳೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಡೈನಾಮಿಕ್‌ ಹೀರೋ ದೇವರಾಜ್‌ ಹಾಗೂ ಪ್ರಜ್ವಲ್‌ ದೇವರಾಜ್‌ ಅವರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ದರ್ಶನ್‌ ಅವರ ಬಲಗೈನ ಮೂಳೆ ಮುರಿದಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆ
ನಡೆಸಲಾಗಿದೆ. ದೇವರಾಜ್‌ ಮತ್ತು ಪ್ರಜ್ವಲ್‌ ದೇವರಾಜ್‌ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್‌ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಸ್ತೆ ವಿಭಜಕಕ್ಕೆ ಡಿಕ್ಕಿ: “ಒಡೆಯ’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ನಟ ದರ್ಶನ್‌ ಅವರು ಭಾನುವಾರ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ, ಮೈಸೂರಿನ ಮೃಗಾಲಯಕ್ಕೆ ಭೇಟಿ ನೀಡಿ,ಪ್ರಾಣಿಗಳನ್ನು ದತ್ತು ಪಡೆದಿದ್ದರು. ಅಲ್ಲದೆ, ಅರಮನೆಯಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆ ಮಾವುತರು, ಕಾವಾಡಿಗಳ ಕುಟುಂಬದವರಿಗಾಗಿ ತಾವೇ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದರು. ದರ್ಶನ್‌ ಅವರೊಂದಿಗೆ ನಟ ಪ್ರಜ್ವಲ್‌ ದೇವರಾಜ್‌ ಸೇರಿ ಚಿತ್ರರಂಗದ ಇನ್ನಿತರ ನಟರು ಭಾಗವಹಿಸಿದ್ದರು.

ಇದಾದ ನಂತರ ರಾತ್ರಿ ಮೈಸೂರಿನಲ್ಲಿರುವ ಪರಿಚಿತರೊಬ್ಬರ ಮನೆಯಲ್ಲಿ ಊಟ ಮುಗಿಸಿದ ದರ್ಶನ್‌, ದೇವರಾಜ್‌ ಹಾಗೂ ಪ್ರಜ್ವಲ್‌ ದೇವರಾಜ್‌ ಒಂದೇ ಕಾರಿನಲ್ಲಿ ರಿಂಗ್‌ರಸ್ತೆಯಲ್ಲಿ ಹಿನಕಲ್‌ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದರು. ಹೆಬ್ಟಾಳು ಸಮೀಪದ ರಿಂಗ್‌ರಸ್ತೆಯ ಜೆಎಸ್‌ಎಸ್‌ ಅರ್ಬನ್‌ಹಾತ್‌ ಸಮೀಪದ ಜಂಕ್ಷನ್ನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರು (ಜೆಎ-51,ಜೆಡ್‌ -7999-ಆರ್‌ಡಿ ಕ್ಯೂ 7) ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆಯಿತು.

ಕಾರಿನ ಮುಂಭಾಗದಲ್ಲಿ ಕುಳಿತಿದ್ದ ದರ್ಶನ್‌ ಅವರ ಬಲಗೈನ ಮೂಳೆ ಮುರಿದಿದೆ. ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ದೇವರಾಜ್‌ ಮತ್ತು ಪ್ರಜ್ವಲ್‌ ದೇವರಾಜ್‌ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಹೀಗಾಗಿ, ಮೂವರನ್ನು ಕೂಡಲೇ ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ದರ್ಶನ್‌ ಹಾಗೂ ಗನ್‌ಮ್ಯಾನ್‌ ಲಕ್ಷ್ಮಣ್‌ ದೂರು ನೀಡಿದ್ದಾರೆ.ಪ್ರಕರಣ ಕುರಿತು ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದು, ಬೇರೆಡೆಗೆ ಸಾಗಿಸಿರುವ ಕಾರನ್ನು ಕೂಡಲೇ ವಾಪಸ್‌ ಮೈಸೂರಿಗೆ ತರುವಂತೆ ಸೂಚಿಸಿದ್ದಾರೆ.

ಆಸ್ಪತ್ರೆಗೆ ತಾಯಿ, ಪತ್ನಿ ಭೇಟಿ: ವಿಷಯ ತಿಳಿದು ದರ್ಶನ್‌ ಅವರ ತಾಯಿ ಮೀನಾ ತೂಗುದೀಪ್‌,ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ಆಸ್ಪತ್ರೆಗೆ ಆಗಮಿಸಿದರು. ಇವರೊಂದಿಗೆ ನಿರ್ಮಾಪಕ ಸಂದೇಶ್‌ ನಾಗರಾಜು ಪುತ್ರ ಸಂದೇಶ್‌, ನಟ ದೇವರಾಜ್‌ ಅವರ ಕಿರಿಯ ಪುತ್ರ ಪ್ರಣಮ್‌ ದೇವರಾಜ್‌ ಆಸ್ಪತ್ರೆ ದೌಡಾಯಿಸಿದರು. ನಟ ಸೃಜನ್‌ ಲೋಕೇಶ್‌, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಸಹ ಆಸ್ಪತ್ರೆಗೆ ಆಗಮಿಸಿ ಮೂವರು ನಟರ ಯೋಗಕ್ಷೇಮ ವಿಚಾರಿಸಿದರು. ವಿಷಯ ತಿಳಿಯುತ್ತಿದ್ದಂತೆ ದರ್ಶನ್‌ ಅವರ ಆಪ್ತರು, ಅಭಿಮಾನಿಗಳು ಆಸ್ಪತ್ರೆಯತ್ತ ಆಗಮಿಸಲಾರಂಭಿಸಿದರು. ಹೀಗಾಗಿ, ಆಸ್ಪತ್ರೆಗೆ ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಪ್ರಾಣಕ್ಕೆ ಅಪಾಯವಿಲ್ಲ: ದರ್ಶನ್‌ ಅವರ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ. ಅವರ ಕೈಗೆ ಫ್ರಾಕ್ಚರ್‌ ಆಗಿರುವುದರಿಂದ ಶಸ್ತ್ರಉಚಿಕಿತ್ಸೆ ನಡೆಸಿ, ಕೈಗೆ ಪ್ಲೇಟ್‌ಅಳವಡಿಸಲಾಗಿದೆ. ಕೈಗೆ 25 ಹೊಲಿಗೆ ಹಾಕಲಾಗಿದ್ದು, 24-48 ಗಂಟೆ ಪರಿಶೀಲನೆಯಲ್ಲಿ
ಇಡಲಾಗುವುದು. ನಟ ದೇವರಾಜ್‌ ಅವರ ಕೈಗೆ ಗಾಯಗಳಾಗಿದ್ದು, ಕೈ ಬೆರಳು ನಜ್ಜುಗುಜ್ಜಾಗಿದೆ. ಪ್ಲಾಸ್ಟಿಕ್‌ ಸರ್ಜರಿ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಉಪೇಂದ್ರ ಶೆಣೈ ತಿಳಿಸಿದ್ದಾರೆ.

ಆರಾಮಾಗಿದ್ದೇನೆ…
ಈ ಮಧ್ಯೆ, ಮಧ್ಯಾಹ್ನದ ಹೊತ್ತಿಗೆ ವಾಟ್ಸ್‌ಅಪ್‌ ಮೂಲಕ ಆಡಿಯೋ ರೆಕಾರ್ಡ್‌ ಬಿಡುಗಡೆ ಮಾಡಿದ ನಟ ದರ್ಶನ್‌, “ಎಲ್ಲರಿಗೂ ನಮಸ್ಕಾರಪ್ಪ…ನನ್ನ ಅನ್ನದಾತರು, ಅಭಿಮಾನಿಗಳಲ್ಲಿ ನನ್ನದೊಂದು ರಿಕ್ವೆಸ್ಟ್‌. ದಯವಿಟ್ಟು ನನಗೆ ಏನೂ ಆಗಿಲ್ಲ.ಆರಾಮಾಗಿರಿ, ಇನ್ನು ಒಂದು ದಿನಆಸ್ಪತ್ರೆಯಲ್ಲಿದ್ದು,ನಾಳೆ ಬರುತ್ತೇನೆ. ಆ ಬಳಿಕ ಎಲ್ಲರಿಗೂ ಸಿಗುತ್ತೇನೆ. ಹೀಗಾಗಿ ದಯವಿಟ್ಟು ಯಾರೂ ಆಸ್ಪತ್ರೆಯತ್ತ ಬರಬೇಡಿ. ಇದೊಂದು ನನ್ನ ಮನವಿ ಅಂತಾ ತಿಳಿದುಕೊಳ್ಳಿ. ಯಾಕಂದ್ರೆ ಬೇರೆ ರೋಗಿಗಳು ಆಸ್ಪತ್ರೆಯಲ್ಲಿದ್ದಾರೆ. ಅವರಿಗೆ ತೊಂದರೆಯಾಗುತ್ತದೆ ಎಂಬುದು ನನ್ನ ಭಾವನೆ. ನಿಮ್ಮ ದರ್ಶನ್‌ಗೆ ಏನೂ ಆಗಿಲ್ಲ.ಧನ್ಯವಾದ’ ಅಂತ ತಿಳಿಸಿದ್ದಾರೆ.

ನನ್ನ ಪತಿ ಆರೋಗ್ಯವಾಗಿದ್ದು,ನನ್ನ ಬಳಿ ಮಾತನಾಡಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕೈಗೆ ಪೆಟ್ಟಾಗಿದೆ. ಶೀಘ್ರವೇ
ಚೇತರಿಸಿಕೊಳ್ಳಲಿದ್ದಾರೆ.
– ವಿಜಯಲಕ್ಷ್ಮಿ, ನಟ ದರ್ಶನ್‌ ಪತ್ನಿ

ಅಪಘಾತದಲ್ಲಿ ದರ್ಶನ್‌ ಬಲಗೈಯನ್ನು ಮುಂದಕ್ಕೆ ಕೊಟ್ಟ ಪರಿಣಾಮ ಅವರ ಬಲಗೈಗೆ ಬಳೆ ಹಾಕಿದ್ದರಿಂದ ಗಾಯವಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಬಳೆಯನ್ನು ಕಟ್‌ ಮಾಡಿ ತೆಗೆದು ಚಿಕಿತ್ಸೆ ನೀಡಿದ್ದಾರೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ.
– ಸಂದೇಶ್‌, ನಿರ್ಮಾಪಕ

ನೀವು ಆರೋಗ್ಯವಾಗಿದ್ದೀರಿ ಎಂಬುದನ್ನು ಕೇಳಿ ಸಂತೋಷವಾಯಿತು. ಬೇಗನೇ ಗುಣಮುಖರಾಗಿ ಬನ್ನಿ ಗೆಳೆಯ’.
– ಸುದೀಪ್‌ ನಟ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.