ಲೋಕ ಮೈತ್ರಿ; ಜವಾಬ್ದಾರಿ ಸಿದ್ದು ಹೆಗಲಿಗೆ


Team Udayavani, Sep 25, 2018, 6:00 AM IST

sidda-kgaf-621x414livemint.jpg

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದಲ್ಲಿ ಉಂಟಾಗಿದ್ದ ಬಂಡಾಯವನ್ನು ತಣ್ಣಗೆ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜತೆಗೆ ಮಾಡಿಕೊಳ್ಳುವ ಮೈತ್ರಿಯ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ತಿಳಿದು ಬಂದಿದೆ.

ಸೋಮವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ದೇಶದ ಎಲ್ಲ ರಾಜ್ಯಗಳ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಲ್‌ಪಿ ನಾಯಕರ ಜತೆ ಸಭೆ ನಡೆಸಿದರು. ದೇಶದ ಎಲ್ಲ ರಾಜ್ಯಗಳಲ್ಲಿಯೂ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಸಿದ್ದು, ಕರ್ನಾಟಕದಲ್ಲಿ ಜೆಡಿಎಸ್‌ ಸೇರಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಂತೆ ರೂಪುರೇಷೆ ಸಿದ್ಧಪಡಿಸುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಈಗಾಗಲೇ ಜೆಡಿಎಸ್‌ ಜತೆ ಸೇರಿಕೊಂಡು ಸರ್ಕಾರ ನಡೆಸುತ್ತಿರುವುದರಿಂದ ಜೆಡಿಎಸ್‌ ಜತೆ ಸೇರಿ ಲೋಕಸಭೆ ಚುನಾವಣೆ ಎದುರಿಸಲು ಕಾಂಗ್ರೆಸ್‌ ಹೈ ಕಮಾಂಡ್‌ ನಿರ್ಧರಿಸಿದೆ. ಅದಕ್ಕೆ ಸಂಬಂಧಿಸಿದಂತೆ ಕ್ಷೇತ್ರಗಳ ಹೊಂದಾಣಿಕೆ ಕುರಿತಂತೆ ಪ್ರಾಥಮಿಕ ಹಂತದಲ್ಲಿ ಜೆಡಿಎಸ್‌ ನಾಯಕರೊಂದಿಗೆ ಚರ್ಚಿಸುವುದು, ಜೆಡಿಎಸ್‌ ಕ್ಷೇತ್ರಗಳ ಬೇಡಿಕೆಗಳನ್ನು ಆಧರಿಸಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಈಗಿನಿಂದಲೇ ಚುನಾವಣೆಗೆ ಸಿದ್ಧತೆ ನಡೆಸುವುದು, ಟಿಕೆಟ್‌ ಆಕಾಂಕ್ಷಿಗಳ ಬಗ್ಗೆ ಸೂಕ್ತ ಮಾಹಿತಿ ಕಲೆ ಹಾಕುವುದು, ಜಾತಿವಾರು ಲೆಕ್ಕಾಚಾರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಿ, ವರದಿ ಸಲ್ಲಿಸಲು ಹೈ ಕಮಾಂಡ್‌ ಸೂಚಿಸಿದೆ ಎಂದು ತಿಳಿದು ಬಂದಿದೆ.

ಸಮಿತಿಗಳ ರಚನೆ:
ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್‌, ಈಗಾಗಲೇ ರಾಷ್ಟ್ರಮಟ್ಟದಲ್ಲಿ ಸಮಿತಿಗಳನ್ನು ರಚಿಸಿದೆ. ಅದೇ ರೀತಿ, ರಾಜ್ಯಗಳಿಗೂ ಪ್ರತ್ಯೇಕ ಸಮಿತಿಗಳನ್ನು ರಚನೆ ಮಾಡಿ ಹೈಕಮಾಂಡ್‌ ಶೀಘ್ರವೇ ಆದೇಶ ಹೊರಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸೋಮವಾರ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಜತೆಗೆ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನಡೆಸಿರುವ ಸಭೆಯಲ್ಲಿ ಸಮಿತಿ ರಚನೆಯ ಬಗ್ಗೆಯೇ ಸುದೀರ್ಘ‌ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬೇರುಮಟ್ಟದಲ್ಲಿ ಬಲವರ್ಧನೆಗೆ ಸೂಚನೆ:
ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್‌ ಹೈಕಮಾಂಡ್‌, ಈಗಿನಿಂದಲೇ ಬೂತ್‌ ಮಟ್ಟದ ಸಮಿತಿಗಳನ್ನು ಸಕ್ರಿಯಗೊಳಿಸಿ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪಕ್ಷದ ಎಲ್ಲಾ ರಾಜ್ಯಗಳ ರಾಜ್ಯಘಟಕಗಳಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ರಾಹುಲ್‌ ಗಾಂಧಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಅ.10ರ ನಂತರ ಸಂಪುಟ ವಿಸ್ತರಣೆ ?:
ಈ ಮಧ್ಯೆ, ವಿಧಾನ ಪರಿಷತ್‌ ಚುನಾವಣೆಯ ಕಾರಣದಿಂದ ಮುಂದೂಡಿದ್ದ ಸಚಿವ ಸಂಪುಟ ವಿಸ್ತರಣೆಯನ್ನು ಅಕ್ಟೋಬರ್‌ 10ರ ನಂತರ ಮಾಡಲು ಹೈಕಮಾಂಡ್‌ ಸೂಚಿಸಿದೆ ಎಂದು ತಿಳಿದು ಬಂದಿದೆ. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಸ್ಪರ್ಧೆ ಮಾಡದಿರುವುದರಿಂದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನ ಮೂವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ, ಸಚಿವಾಕಾಂಕ್ಷಿಗಳು ಈಗಲೇ ಸಂಪುಟ ವಿಸ್ತರಣೆಗೆ ಪಟ್ಟು ಹಿಡಿಯುವ ಸಾಧ್ಯತೆಯಿದೆ. ಆದರೆ, ಪಿತೃ ಪಕ್ಷ ಇರುವುದರಿಂದ ಅ.10ರ ನಂತರ ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಹೈಕಮಾಂಡ್‌ ಜತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತೂಂದು ಬಾರಿ ದೆಹಲಿಗೆ ತೆರಳಲಿದ್ದಾರೆ. ಆಗ ಸಂಪುಟ ಸೇರುವವರ ಅಂತಿಮ ಪಟ್ಟಿ ಸಿದ್ಧಪಡಿಸಿಕೊಂಡು ಬರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.