ನಟ ವಿನೋದ್ ರಾಜ್ ಕಾರಿನಲ್ಲಿದ್ದ 1 ಲಕ್ಷ ರೂ. ದೋಚಿದ ಕಳ್ಳರು!
Team Udayavani, Sep 28, 2018, 5:21 PM IST
ಬೆಂಗಳೂರು:ಕಾರಿನ ಟಯರ್ ಪಂಚರ್ ಆಗಿದೆ ಎಂದು ಹೇಳಿ ನಟ ವಿನೋದ್ ರಾಜ್ ಅವರ ಕಾರಿನಲ್ಲಿದ್ದ ಒಂದು ಲಕ್ಷ ರೂಪಾಯಿಯನ್ನು ಇಬ್ಬರು ಕಳ್ಳರು ದೋಚಿರುವ ಘಟನೆ ನೆಲಮಂಗಲದ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮ್ಮ ತೋಟದ ಕೂಲಿಯಾಳುಗಳಿಗೆ ಸಂಬಳ ನೀಡಲು ನಟ ವಿನೋದ್ ರಾಜ್ ಅವರು ಬ್ಯಾಂಕ್ ನಿಂದ ಒಂದು ಲಕ್ಷ ರೂಪಾಯಿ ಹಣವನ್ನು ಡ್ರಾ ಮಾಡಿಕೊಂಡು ಬಂದು ಕಾರನ್ನು ಸಿಎನ್ ಆರ್ ಬಟ್ಟೆ ಮಳಿಗೆ ಬಳಿ ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ಬಂದ ಇಬ್ಬರು ಏನ್ ಸರ್ ಚೆನ್ನಾಗಿದ್ದೀರಾ ಎಂದು ಆತ್ಮೀಯತೆಯಿಂದ ಮಾತನಾಡಿಸಿದ್ದರಂತೆ.
ಬಳಿಕ ಕಾರು ಪಂಚರ್ ಆಗಿದೆ ಎಂದು ಹೇಳಿ ರಿಪೇರಿ ಮಾಡುವ ನೆಪದಲ್ಲಿ ಕಾರಿನೊಳಗೆ ಇದ್ದ ಒಂದು ಲಕ್ಷ ರೂಪಾಯಿ ಹಣವನ್ನು ಕದ್ದು ಪರಾರಿಯಾಗಿದ್ದಾರೆಂದು ನಟ ವಿನೋದ್ ರಾಜ್ ತಿಳಿಸಿದ್ದಾರೆ. ಈ ಬಗ್ಗೆ ನೆಲಮಂಗಲ ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ