ಸಿಡಿಲಿಗೆ ಮೂವರ ದುರ್ಮರಣ
Team Udayavani, Sep 29, 2018, 6:40 AM IST
ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗಿದ್ದು,ಸಿಡಿಲಬ್ಬರದ ಮಳೆಗೆ ಮೂವರು ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಕ್ಕನಿಂಗದಳ್ಳಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಹೊಲದಿಂದ ಮರಳುವಾಗ ಸಿಡಿಲು ಬಡಿದು ಜಯಮ್ಮ ಮಲ್ಲೇಶಪ್ಪ (42) ಮೃತಪಟ್ಟಿದ್ದಾರೆ.
ಖೀರಿಬಾಯಿ ತುಳಸೀರಾಮ, ಭೀಮಲಿಬಾಯಿ ಲಕ್ಷ್ಮಣ ಎಂಬುವರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಸವನಮತ್ತಿಕೆರೆ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ತಿಮ್ಮಕ್ಕ (55) ಎಂಬುವರು ಮೃತಪಟ್ಟಿದ್ದಾರೆ. ಪುತ್ತೂರು ಸಮೀಪದ ಸವಣೂರಿನಲ್ಲಿ ಸಿಡಿಲು ಬಡಿದು ಮೂವರು,ಕಾಣಿಯೂರಿನಲ್ಲಿ ಸೀತಮ್ಮ ಎಂಬುವರು ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸೀತಾಪುರದಲ್ಲಿ ಮಲಗಿದ್ದ ವೇಳೆ ಮನೆಯ ಚಾವಣಿ ಕುಸಿದು ಮಾಯವನ್ (45) ಎಂಬುವರು ಮೃತಪಟ್ಟಿದ್ದಾರೆ. ಇದೇ ವೇಳೆ, ಹುಣಸೂರು,ಶಿರಸಿ, ಸಿದ್ದಾಪುರ, ಇಟಗಿ, ಶೃಂಗೇರಿ, ಹಾಸನ ಸೇರಿ ಇತರೆಡೆಯೂ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ